Homeಕರೋನಾ ತಲ್ಲಣಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ

ಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ

- Advertisement -
- Advertisement -

ಒಡಿಶಾದ 13 ವಿಶೇಷ ದುರ್ಬಲ ಬುಡಕಟ್ಟು ಗುಂಪುಗಳಲ್ಲಿ(PVTG) ಡೊಂಗೇರಿಯಾ ಕೊಂಡಾ ಮತ್ತು ಬೋಂಡಾ ಬುಡಕಟ್ಟು ಸಮುದಾಯಗಳಲ್ಲಿ ಕೊರೊನಾ ಪ್ರಕರಣಗಳು ಸ್ಫೋಟಗೊಳ್ಳುತ್ತಿವೆ. ಈ ಹಿನ್ನೆಲೆ ತಕ್ಷಣವೇ ಕೊರೊನಾ ಕೇಂದ್ರಗಳನ್ನು ಆರಂಭಿಸಲು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಸಾಮಾಜಿಕ ಕಾರ್ಯಕರ್ತರು ಮತ್ತು ಕವಿಗಳು ಒತ್ತಾಯಿಸಿದ್ದಾರೆ.

ರಾಯಗಡಾದ ನಿಯಾಮಗಿರಿ ಬೆಟ್ಟಗಳಲ್ಲಿ ವಾಸಿಸುತ್ತಿರುವ ಡೊಂಗ್ರಿಯಾ ಕೊಂಡಾ ಸಮುದಾಯದ 85ಕ್ಕೂ ಹೆಚ್ಚು ಸದಸ್ಯರಲ್ಲಿ ಕಳೆದ ಒಂದು ವಾರದಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ವಾರ 23 ಮಂದಿಯಲ್ಲಿ ಕಾಣಿಸಿಕೊಂಡಿದ್ದರೇ, ಕಳೆದ 3 ದಿನಗಳಲ್ಲಿ ಇನ್ನೂ 62 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ರಾಯಗಡ ಜಿಲ್ಲೆಯ ಕಲ್ಯಾಣ್ಸಿಂಗ್‌ಪುರ ಮತ್ತು ಬಿಸ್ಸಂಕಟಕ್ ಬ್ಲಾಕ್‌ನಲ್ಲಿ ರ್‍ಯಾಪಿಡ್ ಆಂಟಿಜನ್ ಟೆಸ್ಟ್‌ ನಡೆಸಲಾಗುತ್ತಿದೆ. ಅದೇ ರೀತಿ, ಮಲ್ಕಂಗಿರಿ ಜಿಲ್ಲೆಯಲ್ಲಿ ವಾಸಿಸುವ 12 ಬೋಂಡಾ ಬುಡಕಟ್ಟು ಜನಾಂಗದವರಲ್ಲಿ ಕೊರೊನಾ ಸೋಂಕು ದೃಢವಾಗಿದೆ.

ಇದನ್ನೂ ಓದಿ: ‘ಇಷ್ಟು ನಿಧಾನಕ್ಕೆ ಪ್ರಕ್ರಿಯೆ ನಡೆದರೆ ದೆಹಲಿಯ ವಯಸ್ಕರಿಗೆ ಲಸಿಕೆ ನೀಡಲು 30 ತಿಂಗಳು ಬೇಕು: ಕೇಜ್ರಿವಾಲ್

ಬೋಂಡಾಗಳು ಮತ್ತು ಡೊಂಗ್ರಿಯಾ ಕೊಂಡಾಗಳು ಕೋವಿಡ್‌ಗೆ ಹೆಚ್ಚು ಗುರಿಯಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿರುವ ನಿಯಾಮ್‌ಗಿರಿ ಸುರಕ್ಷಾ ಸಮಿತಿಯ ಲಿಂಗರಾಜ್ ಆಜಾದ್ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಫುಲ್ಲಾ ಸಮಂತರಾ ನೇತೃತ್ವದ ಕಾರ್ಯಕರ್ತರು, ಮುಖ್ಯಮಂತ್ರಿ ಪಟ್ನಾಯಕ್ ಅವರಿಗೆ ಬಹಿರಂಗ ಪತ್ರ ಬರೆದು ಎರಡು ಸಮುದಾಯಗಳ ಜೀವವನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

“ಆದಿವಾಸಿ ಸಂಸ್ಕೃತಿಗಳಲ್ಲಿ ಗೌಪ್ಯತೆ ಮತ್ತು ಪ್ರತ್ಯೇಕತೆಯ ಬಗ್ಗೆ ವಿಭಿನ್ನ ಆಲೋಚನೆಗಳಿರುವುದರಿಂದ ಹೋಂ ಕ್ಯಾರೆಂಟೈನ್‌ನ ಪ್ರಸ್ತುತ ಮಾರ್ಗಸೂಚಿಗಳನ್ನು ಆದಿವಾಸಿ ಸಮುದಾಯಗಳಲ್ಲಿ ಅಳವಡಿಸಲು ಸಾಧ್ಯವಾಗುವುದಿಲ್ಲ. ಆದಿವಾಸಿ ಪ್ರದೇಶಗಳಲ್ಲಿನ ಹೋಂ ಕ್ಯಾರೆಂಟೈನ್‌ ಕ್ರಮಗಳು ಕೊರೊನಾ ಹರಡುವಿಕೆಯನ್ನು ಅಥವಾ ಸಾಂಕ್ರಾಮಿಕದ ಸರಪಳಿಯನ್ನು ಮುರಿಯಲು ಸರಿಯಾದ ಮಾರ್ಗವಲ್ಲ” ಎಂದು ಕಾರ್ಯಕರ್ತರು ಪತ್ರದಲ್ಲಿ ಹೇಳಿದ್ದಾರೆ.

“ರೋಗಲಕ್ಷಣಗಳನ್ನು ನಿಯಮಿತವಾಗಿ ಮೇಲ್ವಿಚಾರಣೆಯಿಂದ ನೋಡಿಕೊಳ್ಳಲು ಮತ್ತು ಕೊರೊನಾ ಸೋಂಕಿತರನ್ನು ಆರೈಕೆ ಕೇಂದ್ರಗಳಿಗೆ ವರದಿ ಮಾಡಲು, ತರಬೇತಿ ಪಡೆದ ಸ್ಥಳೀಯ ಸ್ವಯಂಸೇವಕರ ತಂಡವು ಮನೆ ಮನೆ ಸಮೀಕ್ಷೆಯನ್ನು ಮಾಡಬೇಕು” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ಪ್ರದೇಶದ ಎಲ್ಲಾ ಬುಡಕಟ್ಟು ಜನಾಂಗದವರಿಗೆ ಸುರಕ್ಷತಾ ಮುನ್ನೆಚ್ಚರಿಕೆಗಳಾಗಿ ಸಾಕಷ್ಟು ಸಂಖ್ಯೆಯ ಟ್ರಿಪಲ್ ಲೇಯರ್ಡ್ ಮಾಸ್ಕ್‌ಗಳು, ಪಿಪಿಇ ಕಿಟ್‌ಗಳು, ಔಷಧಿಗಳು ಮತ್ತು ಸೋಂಕಿನ ವಿರುದ್ಧ ಹೋರಾಡಲು ವಿಟಮಿನ್‌ಗಳನ್ನು ನೀಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೇ 24 ರೊಳಗೆ ಭಾರತಕ್ಕೆ ಅಪ್ಪಳಿಸಲಿದೆ ‘ಯಾಸ್‌ ಚಂಡಮಾರುತ’ – ಹವಾಮಾನ ಇಲಾಖೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...