Homeಕರೋನಾ ತಲ್ಲಣಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ

ಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ

- Advertisement -
- Advertisement -

ಒಡಿಶಾದ 13 ವಿಶೇಷ ದುರ್ಬಲ ಬುಡಕಟ್ಟು ಗುಂಪುಗಳಲ್ಲಿ(PVTG) ಡೊಂಗೇರಿಯಾ ಕೊಂಡಾ ಮತ್ತು ಬೋಂಡಾ ಬುಡಕಟ್ಟು ಸಮುದಾಯಗಳಲ್ಲಿ ಕೊರೊನಾ ಪ್ರಕರಣಗಳು ಸ್ಫೋಟಗೊಳ್ಳುತ್ತಿವೆ. ಈ ಹಿನ್ನೆಲೆ ತಕ್ಷಣವೇ ಕೊರೊನಾ ಕೇಂದ್ರಗಳನ್ನು ಆರಂಭಿಸಲು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಸಾಮಾಜಿಕ ಕಾರ್ಯಕರ್ತರು ಮತ್ತು ಕವಿಗಳು ಒತ್ತಾಯಿಸಿದ್ದಾರೆ.

ರಾಯಗಡಾದ ನಿಯಾಮಗಿರಿ ಬೆಟ್ಟಗಳಲ್ಲಿ ವಾಸಿಸುತ್ತಿರುವ ಡೊಂಗ್ರಿಯಾ ಕೊಂಡಾ ಸಮುದಾಯದ 85ಕ್ಕೂ ಹೆಚ್ಚು ಸದಸ್ಯರಲ್ಲಿ ಕಳೆದ ಒಂದು ವಾರದಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ವಾರ 23 ಮಂದಿಯಲ್ಲಿ ಕಾಣಿಸಿಕೊಂಡಿದ್ದರೇ, ಕಳೆದ 3 ದಿನಗಳಲ್ಲಿ ಇನ್ನೂ 62 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ರಾಯಗಡ ಜಿಲ್ಲೆಯ ಕಲ್ಯಾಣ್ಸಿಂಗ್‌ಪುರ ಮತ್ತು ಬಿಸ್ಸಂಕಟಕ್ ಬ್ಲಾಕ್‌ನಲ್ಲಿ ರ್‍ಯಾಪಿಡ್ ಆಂಟಿಜನ್ ಟೆಸ್ಟ್‌ ನಡೆಸಲಾಗುತ್ತಿದೆ. ಅದೇ ರೀತಿ, ಮಲ್ಕಂಗಿರಿ ಜಿಲ್ಲೆಯಲ್ಲಿ ವಾಸಿಸುವ 12 ಬೋಂಡಾ ಬುಡಕಟ್ಟು ಜನಾಂಗದವರಲ್ಲಿ ಕೊರೊನಾ ಸೋಂಕು ದೃಢವಾಗಿದೆ.

ಇದನ್ನೂ ಓದಿ: ‘ಇಷ್ಟು ನಿಧಾನಕ್ಕೆ ಪ್ರಕ್ರಿಯೆ ನಡೆದರೆ ದೆಹಲಿಯ ವಯಸ್ಕರಿಗೆ ಲಸಿಕೆ ನೀಡಲು 30 ತಿಂಗಳು ಬೇಕು: ಕೇಜ್ರಿವಾಲ್

ಬೋಂಡಾಗಳು ಮತ್ತು ಡೊಂಗ್ರಿಯಾ ಕೊಂಡಾಗಳು ಕೋವಿಡ್‌ಗೆ ಹೆಚ್ಚು ಗುರಿಯಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿರುವ ನಿಯಾಮ್‌ಗಿರಿ ಸುರಕ್ಷಾ ಸಮಿತಿಯ ಲಿಂಗರಾಜ್ ಆಜಾದ್ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಫುಲ್ಲಾ ಸಮಂತರಾ ನೇತೃತ್ವದ ಕಾರ್ಯಕರ್ತರು, ಮುಖ್ಯಮಂತ್ರಿ ಪಟ್ನಾಯಕ್ ಅವರಿಗೆ ಬಹಿರಂಗ ಪತ್ರ ಬರೆದು ಎರಡು ಸಮುದಾಯಗಳ ಜೀವವನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

“ಆದಿವಾಸಿ ಸಂಸ್ಕೃತಿಗಳಲ್ಲಿ ಗೌಪ್ಯತೆ ಮತ್ತು ಪ್ರತ್ಯೇಕತೆಯ ಬಗ್ಗೆ ವಿಭಿನ್ನ ಆಲೋಚನೆಗಳಿರುವುದರಿಂದ ಹೋಂ ಕ್ಯಾರೆಂಟೈನ್‌ನ ಪ್ರಸ್ತುತ ಮಾರ್ಗಸೂಚಿಗಳನ್ನು ಆದಿವಾಸಿ ಸಮುದಾಯಗಳಲ್ಲಿ ಅಳವಡಿಸಲು ಸಾಧ್ಯವಾಗುವುದಿಲ್ಲ. ಆದಿವಾಸಿ ಪ್ರದೇಶಗಳಲ್ಲಿನ ಹೋಂ ಕ್ಯಾರೆಂಟೈನ್‌ ಕ್ರಮಗಳು ಕೊರೊನಾ ಹರಡುವಿಕೆಯನ್ನು ಅಥವಾ ಸಾಂಕ್ರಾಮಿಕದ ಸರಪಳಿಯನ್ನು ಮುರಿಯಲು ಸರಿಯಾದ ಮಾರ್ಗವಲ್ಲ” ಎಂದು ಕಾರ್ಯಕರ್ತರು ಪತ್ರದಲ್ಲಿ ಹೇಳಿದ್ದಾರೆ.

“ರೋಗಲಕ್ಷಣಗಳನ್ನು ನಿಯಮಿತವಾಗಿ ಮೇಲ್ವಿಚಾರಣೆಯಿಂದ ನೋಡಿಕೊಳ್ಳಲು ಮತ್ತು ಕೊರೊನಾ ಸೋಂಕಿತರನ್ನು ಆರೈಕೆ ಕೇಂದ್ರಗಳಿಗೆ ವರದಿ ಮಾಡಲು, ತರಬೇತಿ ಪಡೆದ ಸ್ಥಳೀಯ ಸ್ವಯಂಸೇವಕರ ತಂಡವು ಮನೆ ಮನೆ ಸಮೀಕ್ಷೆಯನ್ನು ಮಾಡಬೇಕು” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ಪ್ರದೇಶದ ಎಲ್ಲಾ ಬುಡಕಟ್ಟು ಜನಾಂಗದವರಿಗೆ ಸುರಕ್ಷತಾ ಮುನ್ನೆಚ್ಚರಿಕೆಗಳಾಗಿ ಸಾಕಷ್ಟು ಸಂಖ್ಯೆಯ ಟ್ರಿಪಲ್ ಲೇಯರ್ಡ್ ಮಾಸ್ಕ್‌ಗಳು, ಪಿಪಿಇ ಕಿಟ್‌ಗಳು, ಔಷಧಿಗಳು ಮತ್ತು ಸೋಂಕಿನ ವಿರುದ್ಧ ಹೋರಾಡಲು ವಿಟಮಿನ್‌ಗಳನ್ನು ನೀಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೇ 24 ರೊಳಗೆ ಭಾರತಕ್ಕೆ ಅಪ್ಪಳಿಸಲಿದೆ ‘ಯಾಸ್‌ ಚಂಡಮಾರುತ’ – ಹವಾಮಾನ ಇಲಾಖೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...