Homeಮುಖಪುಟಒಡಿಶಾ| ಕೆಐಐಟಿ ಕ್ಯಾಂಪಸ್‌ನ ಹಾಸ್ಟೆಲ್ ಕೋಣೆಯಲ್ಲಿ ಮತ್ತೋರ್ವ ನೇಪಾಳಿ ವಿದ್ಯಾರ್ಥಿನಿ ಶವವಾಗಿ ಪತ್ತೆ

ಒಡಿಶಾ| ಕೆಐಐಟಿ ಕ್ಯಾಂಪಸ್‌ನ ಹಾಸ್ಟೆಲ್ ಕೋಣೆಯಲ್ಲಿ ಮತ್ತೋರ್ವ ನೇಪಾಳಿ ವಿದ್ಯಾರ್ಥಿನಿ ಶವವಾಗಿ ಪತ್ತೆ

- Advertisement -
- Advertisement -

ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ)ಯ 18 ವರ್ಷದ ನೇಪಾಳಿ ವಿದ್ಯಾರ್ಥಿನಿ ಗುರುವಾರ ತನ್ನ ಹಾಸ್ಟೆಲ್ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೆಬ್ರವರಿ 16, 2025 ರಂದು ಅದೇ ಸಂಸ್ಥೆಯ ಮತ್ತೊಬ್ಬ ನೇಪಾಳಿ ವಿದ್ಯಾರ್ಥಿನಿ ಪ್ರಕೃತಿ ಲಾಮ್ಸಲ್ ಆತ್ಮಹತ್ಯೆ ಮಾಡಿಕೊಂಡ ಕೇವಲ ಎರಡೂವರೆ ತಿಂಗಳ ನಂತರ ಈ ಘಟನೆ ನಡೆದಿದೆ.

ನೇಪಾಳದ ಬಿ ಟೆಕ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಪ್ರಸಾ ಸಹಾ ಅವರ ಶವವನ್ನು ಸಂಸ್ಥೆಯ ಮಹಿಳಾ ಹಾಸ್ಟೆಲ್‌ನ ಕೊಠಡಿ ಸಂಖ್ಯೆ 111 ರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ನೇಪಾಳದ ಹುಡುಗಿಯೊಬ್ಬಳ ಶವ ಪತ್ತೆಯಾಗಿದೆ. ಕೆಐಐಟಿಯ ಮಹಿಳಾ ಹಾಸ್ಟೆಲ್‌ನಲ್ಲಿ ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ತೋರುತ್ತದೆ” ಎಂದು ಪೊಲೀಸ್ ಆಯುಕ್ತ ಎಸ್. ದೇವ್ ದತ್ತ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಒಡಿಶಾ ಪೊಲೀಸರು ಈಗಾಗಲೇ ನವದೆಹಲಿಯಲ್ಲಿರುವ ನೇಪಾಳ ರಾಯಭಾರ ಕಚೇರಿಗೆ ವಿದ್ಯಾರ್ಥಿನಿಯ ಸಾವಿನ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಅವರು ಹೇಳಿದರು.

“ಮೃತರ ಪೋಷಕರು ಶುಕ್ರವಾರ ಭುವನೇಶ್ವರಕ್ಕೆ ತಲುಪಲಿದ್ದಾರೆ, ನಂತರ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗುವುದು” ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಶವವನ್ನು ಭುವನೇಶ್ವರದ ಏಮ್ಸ್‌ಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಮಹಿಳೆಯರ ಹಾಸ್ಟೆಲ್‌ಗೆ ಭೇಟಿ ನೀಡಿದ ಸಿಂಗ್, ಇನ್ಫೋಸಿಟಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (ಯುಡಿ) ಪ್ರಕರಣ ದಾಖಲಾಗಿದೆ ಎಂದು ಹೇಳಿದರು.

“ನಮಗೆ ಯಾವುದೇ ದೂರು ಬಂದಿಲ್ಲ. ಪೊಲೀಸರು ವೈಜ್ಞಾನಿಕ ತಂಡವನ್ನು ನೇಮಿಸಿಕೊಂಡು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದ ಸತ್ಯ ಬಹಿರಂಗಗೊಳ್ಳುತ್ತದೆ” ಎಂದು ಅವರು ಹೇಳಿದರು. ಹಾಸ್ಟೆಲ್‌ನಲ್ಲಿರುವ ಹುಡುಗಿಯರನ್ನು ವಿಚಾರಣೆ ನಡೆಸಲಾಗುತ್ತಿದೆ, ಅವರು ಪೊಲೀಸರೊಂದಿಗೆ ಸಹಕರಿಸುತ್ತಿದ್ದಾರೆ ಎಂದು ಹೇಳಿದರು.

ಸಂಜೆ 7 ಗಂಟೆ ಸುಮಾರಿಗೆ ಹಾಸ್ಟೆಲ್ ಅಧಿಕಾರಿಗಳು ವಿದ್ಯಾರ್ಥಿಗಳ ಹಾಜರಾತಿಯನ್ನು ತೆಗೆದುಕೊಳ್ಳುತ್ತಿದ್ದಾಗ ಈ ವಿಷಯ ಬೆಳಕಿಗೆ ಬಂದಿದೆ ಎಂದು ಸಿಪಿ ಹೇಳಿದರು.

ಆಕೆಯ ಕೊಠಡಿಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದರು. ನಮ್ಮ ತಂಡವು ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಅವರು ಹೇಳಿದರು. ನೇಪಾಳಿ ವಿದ್ಯಾರ್ಥಿನಿಯ ಸಾವಿನ ಬಗ್ಗೆ ಕೆಐಐಟಿ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಈ ಘಟನೆಯನ್ನು ‘ದುರದೃಷ್ಟಕರ’ ಎಂದು ಕರೆದಿರುವ ಒಡಿಶಾ ಸರ್ಕಾರ, “ಈ ಘಟನೆಯ ಬಗ್ಗೆ ವಿಶ್ವವಿದ್ಯಾಲಯದ ಅಧಿಕಾರಿಗಳು ತಕ್ಷಣವೇ ಬಾಲಕಿಯ ಯುವತಿಯ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ, ರಾಜ್ಯ ಸರ್ಕಾರವು ಮೃತರ ಕುಟುಂಬಕ್ಕೆ ತನ್ನ ಬೆಂಬಲವನ್ನು ನೀಡುತ್ತದೆ. ಅವರಿಗೆ ತನ್ನ ಸಂತಾಪವನ್ನು ವ್ಯಕ್ತಪಡಿಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

“ಮಾಹಿತಿ ಪಡೆದ ನಂತರ, ಪೊಲೀಸ್ ಆಯುಕ್ತರು ಮತ್ತು ಕಂದಾಯ ವಿಭಾಗೀಯ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ದುರದೃಷ್ಟಕರ ಘಟನೆಗೆ ಕಾರಣವಾದ ಸಂದರ್ಭಗಳ ಬಗ್ಗೆ ವಿಚಾರಿಸಲು ಮತ್ತು ಈ ವಿಷಯದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸಿದರು. ಸಾಕ್ಷ್ಯಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡವು ಸ್ಥಳದಲ್ಲಿದೆ” ಎಂದು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

ಫೆಬ್ರವರಿಯಲ್ಲಿ ನಡೆದ ಘಟನೆಯು ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂಬ ವರದಿಗಳ ನಂತರ ಪ್ರತಿಭಟನೆಗೆ ಕಾರಣವಾಯಿತು. ಖಾಸಗಿ ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ನ್ಯಾಯ ಸಿಗದಿದ್ದಕ್ಕಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಳು.

ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿಯ ಸಹಾಯದಿಂದ, ಮೃತರಿಗೆ ನ್ಯಾಯ ನೀಡುವಂತೆ ಒತ್ತಾಯಿಸಿದ ನೇಪಾಳದ ವಿದ್ಯಾರ್ಥಿಗಳ ಮೇಲೆ ಸಂಸ್ಥೆಯ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕೆಐಐಟಿ ಕ್ಯಾಂಪಸ್‌ನಲ್ಲಿ ಆಕ್ರೋಶ ವ್ಯಕ್ತವಾಯಿತು.

ನೇಪಾಳದ ವಿದ್ಯಾರ್ಥಿಗಳನ್ನು ಕ್ಯಾಂಪಸ್‌ನಿಂದ ಬಲವಂತವಾಗಿ ಹೊರಹಾಕಲಾಯಿತು, ತಮ್ಮ ದೇಶಕ್ಕೆ ಹೋಗಲು ಕೇಳಲಾಯಿತು ಎಂಬ ಆರೋಪ ಕೇಳಿಬಂದಿತ್ತು. ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ರಾಜತಾಂತ್ರಿಕ ಮಟ್ಟದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಸಂಸ್ಥೆಯ ನೇಪಾಳದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಕೋರಿದರು.

ನಂತರ ರಾಜ್ಯ ಸರ್ಕಾರವು ಈ ವಿಷಯದ ತನಿಖೆಗಾಗಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿತು. ಎನ್‌ಎಚ್‌ಆರ್‌ಸಿ ಕೂಡ ಈ ವಿಷಯದ ಬಗ್ಗೆ ತನಿಖೆ ನಡೆಸಿತು.

ನೇಪಾಳದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕನಿಷ್ಠ 10 ವಿಶ್ವವಿದ್ಯಾಲಯದ ಉದ್ಯೋಗಿಗಳನ್ನು ಬಂಧಿಸಲಾಯಿತು. ನೇಪಾಳದ ಹುಡುಗಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಒಬ್ಬ ಭಾರತೀಯ ವಿದ್ಯಾರ್ಥಿಯನ್ನು ಜೈಲಿಗೆ ಕಳುಹಿಸಲಾಯಿತು.

ಉದ್ವಿಗ್ನತೆ ಉಂಟಾಗುತ್ತಿದ್ದಂತೆ, ಭುವನೇಶ್ವರ-ಕಟಕ್ ಪೊಲೀಸ್ ಆಯುಕ್ತಾಲಯವು ಕೆಐಐಟಿ ಕ್ಯಾಂಪಸ್‌ನಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿತು. ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಗಮನಿಸುತ್ತಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರೀ ಮಳೆಗೆ ಬೆಂಗಳೂರು ಹೈರಾಣು; ಮರ ಬಿದ್ದು ಆಟೋ ಚಾಲಕ ದುರ್ಮರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...