Homeಮುಖಪುಟ5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಒಡಿಶಾ ಅಸೆಂಬ್ಲಿ ಮುಂದೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಪೋಷಕರು!

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಒಡಿಶಾ ಅಸೆಂಬ್ಲಿ ಮುಂದೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಪೋಷಕರು!

ವಿಧಾನಸಭೆ ಅಧಿವೇಶನ ನಡೆಯುತ್ತಿದ್ದಾಗ ದಂಪತಿ ತಮ್ಮ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಪ್ರಯತ್ನಿಸಿದರು.

- Advertisement -
- Advertisement -

ತಮ್ಮ 5 ವರ್ಷದ ಮಗಳು ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ್ದಾಳೆ. ಮಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ದಂಪತಿಯೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಒಡಿಶಾ ಅಸೆಂಬ್ಲಿ ಆವರಣದ ಹೊರಗೆ ಹೈ-ಸೆಕ್ಯೂರಿಟಿ ಝೋನ್‌ನಲ್ಲಿ ನಡೆದಿದೆ.

ಒಡಿಶಾದಲ್ಲಿ ರಾಜ್ಯ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ದಂಪತಿ ತಮ್ಮ ಮಗಳಿಗೆ ನ್ಯಾಯಕ್ಕಾಗಿ, ತಮ್ಮ ಅಳಲು ತೊಡಿಕೊಳ್ಳಲು ಇಲ್ಲಿಗೆ ಬಂದಿದ್ದರು ಎನ್ನಲಾಗಿದೆ.

ದಂಪತಿಯನ್ನು ನಾಯಗಢ ಜಿಲ್ಲೆಯ ಜದುಪುರ ಗ್ರಾಮದ ಸೌದಾಮಿನಿ ಸಾಹು ಮತ್ತು ಅಶೋಕ್ ಸಾಹು ಎಂದು ಗುರುತಿಸಲಾಗಿದೆ. ಈ ವರ್ಷದ ಜುಲೈನಲ್ಲಿ ಅವರ ಐದು ವರ್ಷದ ಮಗಳು ಪರಿ ಎಂಬ ಬಾಲಕಿಯನ್ನು ಅಪಹರಿಸಲಾಗಿತ್ತು. ಕೆಲ ದಿನಗಳ ನಂತರ ಮಗುವಿನ ಅಸ್ಥಿಪಂಜರದ ಅವಶೇಷಗಳು ಅವರ ಮನೆಯ ಹಿತ್ತಲಿನಲ್ಲಿ ಪತ್ತೆಯಾಗಿದ್ದವು.

ಅರ್ಧ ಕೊಳೆತ ಸ್ಥಿತಿಯಲ್ಲಿ ಮಗಳ ಮೃತದೇಹವನ್ನು ಕಂಡ ದಂಪತಿ, ಅತ್ಯಾಚಾರ ಮತ್ತು ಕೊಲೆ ಎಂದು ಶಂಕಿಸಿ, ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಆದರೆ ಇಲ್ಲಿ ಅವರಿಗೆ ನ್ಯಾಯ ದೊರೆತಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ವರದಿಗಳ ಪ್ರಕಾರ, ವಿಧಾನಸಭೆ ಅಧಿವೇಶನ ನಡೆಯುತ್ತಿದ್ದಾಗ ದಂಪತಿ ತಮ್ಮ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಪ್ರಯತ್ನಿಸಿದರು. ತಕ್ಷಣ ಅಲ್ಲೇ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸೀಮೆಎಣ್ಣೆ ಬಾಟಲಿ ಮತ್ತು ಬೆಂಕಿಕಡ್ಡಿ ಪೆಟ್ಟಿಗೆಯನ್ನು ವಶಪಡಿಸಿಕೊಂಡಿದ್ದಾರೆ.

“ನಾವು ಸರ್ಕಾರದ ಗಮನ ಸೆಳೆಯಲು ಇಂತಹ ಒಂದು ಕೆಲಸಕ್ಕೆ ಕೈಹಾಕಿದ್ದು, ಆರೋಪಿಗಳ ಬಂಧನಕ್ಕೆ, ತಮ್ಮ ಮಗಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಎಲ್ಲಾ ಕಡೆ ಅಲೆದಾಡಿದ್ದೇವೆ. ಆದರೆ, ನಾಯಗಢ ಎಸ್‌ಪಿ ಮತ್ತು ಜಿಲ್ಲಾಧಿಕಾರಿಗಳು ನಾವು ಸಲ್ಲಿಸಿದ್ದ ಮನವಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ” ಎಂದು ದಂಪತಿಗಳು ಆರೋಪಿಸಿದ್ದಾರೆ.

ಪೊಲೀಸ್ ಇಲಾಖೆ, ಸರ್ಕಾರವಲ್ಲದೇ, ಈ ದಂಪತಿಗಳು ಹಲವಾರು ರಾಜಕೀಯ ಮುಖಂಡರು, ಶಾಸಕರು ಮತ್ತು ಮಂತ್ರಿಗಳ ಮನೆ ಬಾಗಿಲು ಬಡಿದು ಮಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ.

ಮೃತ ಬಾಲಕಿಯ ತಾಯಿ ‘ಸಚಿವ ಅರುಣ್ ಸಾಹು ಮುರ್ದಾಬಾದ್’ ಎಂಬ ಘೋಷಣೆಗಳನ್ನು ಕೂಗಿದರು. “ನಮ್ಮ ಮಗಳನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಬಾಬುಲಿ ನಾಯಕ್ ಮತ್ತು ಅವನ ಸಹಚರರು ಅವಳನ್ನು ಕೊಂದಿದ್ದಾರೆ. ಘಟನೆ ನಡೆದು ತಿಂಗಳುಗಳು ಕಳೆದರೂ, ಆರೋಪಿಗಳು ಆರಾಮಾವಾಗಿ ಓಡಾಡುತ್ತಿದ್ದಾರೆ. ನಾವು ಹಲವಾರು ಬಾರಿ ಸಚಿವ ಅರುಣ್ ಸಾಹು ಅವರಲ್ಲಿ ಸಹಾಯ ಕೇಳಿ ಹೋದೆವು, ಆದರೆ ಅವರು ನಮಗೆ ಸಹಾಯ ಮಾಡಿಲ್ಲ” ಎಂದಿದ್ದಾರೆ. ಸಚಿವ ಅರುಣ್ ಸಾಹು ಘಟನೆಯಲ್ಲಿ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ದಂಪತಿ ಆರೋಪಿಸಿದ್ದಾರೆ.


ಇದನ್ನೂ ಓದಿ: ’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...