Homeಮುಖಪುಟ5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಒಡಿಶಾ ಅಸೆಂಬ್ಲಿ ಮುಂದೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಪೋಷಕರು!

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಒಡಿಶಾ ಅಸೆಂಬ್ಲಿ ಮುಂದೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಪೋಷಕರು!

ವಿಧಾನಸಭೆ ಅಧಿವೇಶನ ನಡೆಯುತ್ತಿದ್ದಾಗ ದಂಪತಿ ತಮ್ಮ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಪ್ರಯತ್ನಿಸಿದರು.

- Advertisement -
- Advertisement -

ತಮ್ಮ 5 ವರ್ಷದ ಮಗಳು ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ್ದಾಳೆ. ಮಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ದಂಪತಿಯೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಒಡಿಶಾ ಅಸೆಂಬ್ಲಿ ಆವರಣದ ಹೊರಗೆ ಹೈ-ಸೆಕ್ಯೂರಿಟಿ ಝೋನ್‌ನಲ್ಲಿ ನಡೆದಿದೆ.

ಒಡಿಶಾದಲ್ಲಿ ರಾಜ್ಯ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ದಂಪತಿ ತಮ್ಮ ಮಗಳಿಗೆ ನ್ಯಾಯಕ್ಕಾಗಿ, ತಮ್ಮ ಅಳಲು ತೊಡಿಕೊಳ್ಳಲು ಇಲ್ಲಿಗೆ ಬಂದಿದ್ದರು ಎನ್ನಲಾಗಿದೆ.

ದಂಪತಿಯನ್ನು ನಾಯಗಢ ಜಿಲ್ಲೆಯ ಜದುಪುರ ಗ್ರಾಮದ ಸೌದಾಮಿನಿ ಸಾಹು ಮತ್ತು ಅಶೋಕ್ ಸಾಹು ಎಂದು ಗುರುತಿಸಲಾಗಿದೆ. ಈ ವರ್ಷದ ಜುಲೈನಲ್ಲಿ ಅವರ ಐದು ವರ್ಷದ ಮಗಳು ಪರಿ ಎಂಬ ಬಾಲಕಿಯನ್ನು ಅಪಹರಿಸಲಾಗಿತ್ತು. ಕೆಲ ದಿನಗಳ ನಂತರ ಮಗುವಿನ ಅಸ್ಥಿಪಂಜರದ ಅವಶೇಷಗಳು ಅವರ ಮನೆಯ ಹಿತ್ತಲಿನಲ್ಲಿ ಪತ್ತೆಯಾಗಿದ್ದವು.

ಅರ್ಧ ಕೊಳೆತ ಸ್ಥಿತಿಯಲ್ಲಿ ಮಗಳ ಮೃತದೇಹವನ್ನು ಕಂಡ ದಂಪತಿ, ಅತ್ಯಾಚಾರ ಮತ್ತು ಕೊಲೆ ಎಂದು ಶಂಕಿಸಿ, ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಆದರೆ ಇಲ್ಲಿ ಅವರಿಗೆ ನ್ಯಾಯ ದೊರೆತಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ವರದಿಗಳ ಪ್ರಕಾರ, ವಿಧಾನಸಭೆ ಅಧಿವೇಶನ ನಡೆಯುತ್ತಿದ್ದಾಗ ದಂಪತಿ ತಮ್ಮ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಪ್ರಯತ್ನಿಸಿದರು. ತಕ್ಷಣ ಅಲ್ಲೇ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸೀಮೆಎಣ್ಣೆ ಬಾಟಲಿ ಮತ್ತು ಬೆಂಕಿಕಡ್ಡಿ ಪೆಟ್ಟಿಗೆಯನ್ನು ವಶಪಡಿಸಿಕೊಂಡಿದ್ದಾರೆ.

“ನಾವು ಸರ್ಕಾರದ ಗಮನ ಸೆಳೆಯಲು ಇಂತಹ ಒಂದು ಕೆಲಸಕ್ಕೆ ಕೈಹಾಕಿದ್ದು, ಆರೋಪಿಗಳ ಬಂಧನಕ್ಕೆ, ತಮ್ಮ ಮಗಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಎಲ್ಲಾ ಕಡೆ ಅಲೆದಾಡಿದ್ದೇವೆ. ಆದರೆ, ನಾಯಗಢ ಎಸ್‌ಪಿ ಮತ್ತು ಜಿಲ್ಲಾಧಿಕಾರಿಗಳು ನಾವು ಸಲ್ಲಿಸಿದ್ದ ಮನವಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ” ಎಂದು ದಂಪತಿಗಳು ಆರೋಪಿಸಿದ್ದಾರೆ.

ಪೊಲೀಸ್ ಇಲಾಖೆ, ಸರ್ಕಾರವಲ್ಲದೇ, ಈ ದಂಪತಿಗಳು ಹಲವಾರು ರಾಜಕೀಯ ಮುಖಂಡರು, ಶಾಸಕರು ಮತ್ತು ಮಂತ್ರಿಗಳ ಮನೆ ಬಾಗಿಲು ಬಡಿದು ಮಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ.

ಮೃತ ಬಾಲಕಿಯ ತಾಯಿ ‘ಸಚಿವ ಅರುಣ್ ಸಾಹು ಮುರ್ದಾಬಾದ್’ ಎಂಬ ಘೋಷಣೆಗಳನ್ನು ಕೂಗಿದರು. “ನಮ್ಮ ಮಗಳನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಬಾಬುಲಿ ನಾಯಕ್ ಮತ್ತು ಅವನ ಸಹಚರರು ಅವಳನ್ನು ಕೊಂದಿದ್ದಾರೆ. ಘಟನೆ ನಡೆದು ತಿಂಗಳುಗಳು ಕಳೆದರೂ, ಆರೋಪಿಗಳು ಆರಾಮಾವಾಗಿ ಓಡಾಡುತ್ತಿದ್ದಾರೆ. ನಾವು ಹಲವಾರು ಬಾರಿ ಸಚಿವ ಅರುಣ್ ಸಾಹು ಅವರಲ್ಲಿ ಸಹಾಯ ಕೇಳಿ ಹೋದೆವು, ಆದರೆ ಅವರು ನಮಗೆ ಸಹಾಯ ಮಾಡಿಲ್ಲ” ಎಂದಿದ್ದಾರೆ. ಸಚಿವ ಅರುಣ್ ಸಾಹು ಘಟನೆಯಲ್ಲಿ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ದಂಪತಿ ಆರೋಪಿಸಿದ್ದಾರೆ.


ಇದನ್ನೂ ಓದಿ: ’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...