Homeಮುಖಪುಟ5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಒಡಿಶಾ ಅಸೆಂಬ್ಲಿ ಮುಂದೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಪೋಷಕರು!

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಒಡಿಶಾ ಅಸೆಂಬ್ಲಿ ಮುಂದೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಪೋಷಕರು!

ವಿಧಾನಸಭೆ ಅಧಿವೇಶನ ನಡೆಯುತ್ತಿದ್ದಾಗ ದಂಪತಿ ತಮ್ಮ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಪ್ರಯತ್ನಿಸಿದರು.

- Advertisement -
- Advertisement -

ತಮ್ಮ 5 ವರ್ಷದ ಮಗಳು ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ್ದಾಳೆ. ಮಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ದಂಪತಿಯೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಒಡಿಶಾ ಅಸೆಂಬ್ಲಿ ಆವರಣದ ಹೊರಗೆ ಹೈ-ಸೆಕ್ಯೂರಿಟಿ ಝೋನ್‌ನಲ್ಲಿ ನಡೆದಿದೆ.

ಒಡಿಶಾದಲ್ಲಿ ರಾಜ್ಯ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ದಂಪತಿ ತಮ್ಮ ಮಗಳಿಗೆ ನ್ಯಾಯಕ್ಕಾಗಿ, ತಮ್ಮ ಅಳಲು ತೊಡಿಕೊಳ್ಳಲು ಇಲ್ಲಿಗೆ ಬಂದಿದ್ದರು ಎನ್ನಲಾಗಿದೆ.

ದಂಪತಿಯನ್ನು ನಾಯಗಢ ಜಿಲ್ಲೆಯ ಜದುಪುರ ಗ್ರಾಮದ ಸೌದಾಮಿನಿ ಸಾಹು ಮತ್ತು ಅಶೋಕ್ ಸಾಹು ಎಂದು ಗುರುತಿಸಲಾಗಿದೆ. ಈ ವರ್ಷದ ಜುಲೈನಲ್ಲಿ ಅವರ ಐದು ವರ್ಷದ ಮಗಳು ಪರಿ ಎಂಬ ಬಾಲಕಿಯನ್ನು ಅಪಹರಿಸಲಾಗಿತ್ತು. ಕೆಲ ದಿನಗಳ ನಂತರ ಮಗುವಿನ ಅಸ್ಥಿಪಂಜರದ ಅವಶೇಷಗಳು ಅವರ ಮನೆಯ ಹಿತ್ತಲಿನಲ್ಲಿ ಪತ್ತೆಯಾಗಿದ್ದವು.

ಅರ್ಧ ಕೊಳೆತ ಸ್ಥಿತಿಯಲ್ಲಿ ಮಗಳ ಮೃತದೇಹವನ್ನು ಕಂಡ ದಂಪತಿ, ಅತ್ಯಾಚಾರ ಮತ್ತು ಕೊಲೆ ಎಂದು ಶಂಕಿಸಿ, ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಆದರೆ ಇಲ್ಲಿ ಅವರಿಗೆ ನ್ಯಾಯ ದೊರೆತಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ವರದಿಗಳ ಪ್ರಕಾರ, ವಿಧಾನಸಭೆ ಅಧಿವೇಶನ ನಡೆಯುತ್ತಿದ್ದಾಗ ದಂಪತಿ ತಮ್ಮ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಪ್ರಯತ್ನಿಸಿದರು. ತಕ್ಷಣ ಅಲ್ಲೇ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸೀಮೆಎಣ್ಣೆ ಬಾಟಲಿ ಮತ್ತು ಬೆಂಕಿಕಡ್ಡಿ ಪೆಟ್ಟಿಗೆಯನ್ನು ವಶಪಡಿಸಿಕೊಂಡಿದ್ದಾರೆ.

“ನಾವು ಸರ್ಕಾರದ ಗಮನ ಸೆಳೆಯಲು ಇಂತಹ ಒಂದು ಕೆಲಸಕ್ಕೆ ಕೈಹಾಕಿದ್ದು, ಆರೋಪಿಗಳ ಬಂಧನಕ್ಕೆ, ತಮ್ಮ ಮಗಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಎಲ್ಲಾ ಕಡೆ ಅಲೆದಾಡಿದ್ದೇವೆ. ಆದರೆ, ನಾಯಗಢ ಎಸ್‌ಪಿ ಮತ್ತು ಜಿಲ್ಲಾಧಿಕಾರಿಗಳು ನಾವು ಸಲ್ಲಿಸಿದ್ದ ಮನವಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ” ಎಂದು ದಂಪತಿಗಳು ಆರೋಪಿಸಿದ್ದಾರೆ.

ಪೊಲೀಸ್ ಇಲಾಖೆ, ಸರ್ಕಾರವಲ್ಲದೇ, ಈ ದಂಪತಿಗಳು ಹಲವಾರು ರಾಜಕೀಯ ಮುಖಂಡರು, ಶಾಸಕರು ಮತ್ತು ಮಂತ್ರಿಗಳ ಮನೆ ಬಾಗಿಲು ಬಡಿದು ಮಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ.

ಮೃತ ಬಾಲಕಿಯ ತಾಯಿ ‘ಸಚಿವ ಅರುಣ್ ಸಾಹು ಮುರ್ದಾಬಾದ್’ ಎಂಬ ಘೋಷಣೆಗಳನ್ನು ಕೂಗಿದರು. “ನಮ್ಮ ಮಗಳನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಬಾಬುಲಿ ನಾಯಕ್ ಮತ್ತು ಅವನ ಸಹಚರರು ಅವಳನ್ನು ಕೊಂದಿದ್ದಾರೆ. ಘಟನೆ ನಡೆದು ತಿಂಗಳುಗಳು ಕಳೆದರೂ, ಆರೋಪಿಗಳು ಆರಾಮಾವಾಗಿ ಓಡಾಡುತ್ತಿದ್ದಾರೆ. ನಾವು ಹಲವಾರು ಬಾರಿ ಸಚಿವ ಅರುಣ್ ಸಾಹು ಅವರಲ್ಲಿ ಸಹಾಯ ಕೇಳಿ ಹೋದೆವು, ಆದರೆ ಅವರು ನಮಗೆ ಸಹಾಯ ಮಾಡಿಲ್ಲ” ಎಂದಿದ್ದಾರೆ. ಸಚಿವ ಅರುಣ್ ಸಾಹು ಘಟನೆಯಲ್ಲಿ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ದಂಪತಿ ಆರೋಪಿಸಿದ್ದಾರೆ.


ಇದನ್ನೂ ಓದಿ: ’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಕೃತಿ ವಿವಿ ಪಠ್ಯಕ್ರಮದಲ್ಲಿ ಮರುಸ್ಥಾಪಿಸುವಂತೆ ಒತ್ತಾಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...