Homeಮುಖಪುಟಒಡಿಶಾ ರೈಲು ದುರಂತ: ವಾರೀಸುದಾರರಿಲ್ಲದ 28 ಮೃತದೇಹಕ್ಕೆ ಅಂತ್ಯಸಂಸ್ಕಾರ

ಒಡಿಶಾ ರೈಲು ದುರಂತ: ವಾರೀಸುದಾರರಿಲ್ಲದ 28 ಮೃತದೇಹಕ್ಕೆ ಅಂತ್ಯಸಂಸ್ಕಾರ

- Advertisement -
- Advertisement -

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ್ದ ರೈಲು ಅಪಘಾತದಲ್ಲಿ ಮೃತ 28 ಮಂದಿ ಅಪರಿಚಿತರ ಮೃತದೇಹವನ್ನು ಕೊನೆಗೂ ವಾರೀಸುದಾರರು ಇಲ್ಲದ ಕಾರಣ ಅಂತ್ಯಸಂಸ್ಕಾರ ಮಾಡಲಾಗಿದೆ.

ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್(BMC) ಮಂಗಳವಾರ ಬಹನಾಗಾ ರೈಲು ದುರಂತದಲ್ಲಿ ಸಾವನ್ನಪ್ಪಿದ ಅಪರಿಚಿತ ಪ್ರಯಾಣಿಕರ ಅಂತ್ಯಸಂಸ್ಕಾರವನ್ನು ಗೌರವದಿಂದ ಮಾಡಿದೆ.

ವಾರಸುದಾರರಿಲ್ಲದ 28 ಮೃತದೇಹವನ್ನು ಕಳೆದ 4 ತಿಂಗಳಿನಿಂದ ಭುವನೇಶ್ವರದ ಏಮ್ಸ್‌ನಲ್ಲಿ ಕಂಟೈನರ್‌ನಲ್ಲಿ ಸಂಗ್ರಹಿಸಿಡಲಾಗಿತ್ತು. ಇದೀಗ ಯಾರೂ ವಾರೀಸುದಾರರು ಬರದ ಕಾರಣ ಮೃತದೇಹಗಳನ್ನು ಭರತ್‌ಪುರ ಸ್ಮಶಾನದಲ್ಲಿ ಸಾಂಪ್ರದಾಯಿಕ ವಿಧಿ ವಿಧಾನಗಳ ಪ್ರಕಾರ ದಹಿಸಲಾಗಿದೆ.

ಹಿರಿಯ ಬಿಎಂಸಿ ಅಧಿಕಾರಿಯೊಬ್ಬರ ಮೇಲ್ವಿಚಾರಣೆಯಲ್ಲಿ ಶವಸಂಸ್ಕಾರ ನಡೆದಿದೆ. ಪರ್ದೀಪ್ ಸೇವಾ ಟ್ರಸ್ಟ್‌ನ 12 ಸದಸ್ಯರ ತಂಡವು ನಿಯಮಗಳ ಪ್ರಕಾರ ಮೃತದೇಹಗಳನ್ನು ಅಂತ್ಯಸಂಸ್ಕಾರ ಮಾಡಿದೆ.

ಪ್ರತಿಯೊಂದು ಮೃತದೇಹದ ಅಂತ್ಯಕ್ರಿಯೆಗೆ ಕನಿಷ್ಠ ನಾಲ್ಕು ಗಂಟೆಗಳನ್ನು ತೆಗೆದುಕೊಂಡಿದೆ. ದೇಹಗಳನ್ನು ಮೈನಸ್ ತಾಪಮಾನದಲ್ಲಿ ಸಂಗ್ರಹಿಸಿದ್ದರಿಂದ ಶವಗಳು ಮಂಜುಗಡ್ಡೆಯಿಂದ ಗಟ್ಟಿಯಾಗಿದ್ದವು. ಮೃತದೇಹಗಳನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಗುಣಮಟ್ಟದ ಮರ ಮತ್ತು ತುಪ್ಪದ ವ್ಯವಸ್ಥೆ ಮಾಡಲಾಗಿದೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಂದು ತಿಂಗಳಿನಿಂದ ಉಳಿದ 28 ಶವಗಳನ್ನು ಪಡೆಯಲು ಯಾರೂ ಬರದ ಕಾರಣ, ರೈಲು ಅಪಘಾತದ ತನಿಖೆ ನಡೆಸುತ್ತಿರುವ ಸಿಬಿಐ ಅಪರಿಚಿತ ಬಲಿಪಶುಗಳನ್ನು ವಿಲೇವಾರಿ ಮಾಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ಇದರಂತೆ  ಕಾನೂನು ತೊಡಕುಗಳನ್ನು ಗಮನದಲ್ಲಿಟ್ಟುಕೊಂಡು ಮೃತರ ಡಿಎನ್‌ಎಯನ್ನು ಸಂರಕ್ಷಿಸಿಟ್ಟು ಅಂತ್ಯಸಂಸ್ಕಾರವನ್ನು ನಡೆಸಲಾಗಿದೆ. ಡಿಎನ್‌ಎ ಸಂಗ್ರಹಿಸಿಟ್ಟಿರುವ ಬಗ್ಗೆ ಸ್ವತಃ ಏಮ್ಸ್‌ನ ಅಂಗರಚನಾಶಾಸ್ತ್ರದ ವಿಭಾಗದ ಮುಖ್ಯಸ್ಥ ಪ್ರೊ.ಪ್ರವಾಸ್ ತ್ರಿಪಾಠಿ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬಹನಗಾ ಬಜಾರ್ ರೈಲು ನಿಲ್ದಾಣದ ಬಳಿ ನಡೆದ ಈ ಭೀಕರ ಅಪಘಾತದಲ್ಲಿ ಒಟ್ಟು 296 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ 162 ಮೃತದೇಹಗಳನ್ನು ಏಮ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಆದರಲ್ಲಿ 81 ಜನರ ಮೃತದೇಹಗಳನ್ನು ಅವರ ಸಂಬಂಧಿಕರು ತೆಗೆದುಕೊಂಡು ಹೋಗಿದ್ದಾರೆ. ಉಳಿದ 81 ಮೃತದೇಹಗಳ ಡಿಎನ್‌ಎ ಪರೀಕ್ಷೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಅದರಲ್ಲಿ 53 ಮೃತದೇಹಗಳ ಗುರುತು ಪತ್ತೆ ಮಾಡಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಇನ್ನೂ 28 ಮೃತದೇಹಗಳನ್ನು ಭುವನೇಶ್ವರ ಏಮ್ಸ್‌ನಲ್ಲಿರುವ ಶವಾಗಾರದಲ್ಲಿ ಇರಿಸಲಾಗಿತ್ತು. ಆದರೆ ಈ ಶವಗಳು ವಲಸೆ ಕಾರ್ಮಿಕರದ್ದಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಆದರೆ ಯಾರೂ ಕೂಡ ಸಂಬಂಧಿಕರು ಮೃತದೇಹವನ್ನು ಪಡೆಯಲು ಬಂದಿಲ್ಲ.

ಆದರೆ ನಿಯಮಗಳ ಪ್ರಕಾರ 30 ದಿನಗಳ ನಂತರ ಅನಾಥ ಶವಗಳಿಗೆ ಅಂತ್ಯಕ್ರಿಯೆ ನಡೆಸಬೇಕು. ಆದ್ದರಿಂದ ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ ನೇತೃತೃತ್ವದಲ್ಲಿ ಅಂತ್ಯಸಂಸ್ಕಾರ ನಡೆದಿದೆ.

ಇದನ್ನು ಓದಿ: ನಿಷೇಧಿತ ಪಿಎಫ್‌ಐ ಪರ ಚಟುವಟಿಕೆ ಶಂಕೆ: ವಿವಿಧ ಸ್ಥಳಗಳಲ್ಲಿ ಎನ್‌ಐಎ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...