Homeಮುಖಪುಟಒಡಿಶಾ ರೈಲು ದುರಂತ: ವಾರೀಸುದಾರರಿಲ್ಲದ 28 ಮೃತದೇಹಕ್ಕೆ ಅಂತ್ಯಸಂಸ್ಕಾರ

ಒಡಿಶಾ ರೈಲು ದುರಂತ: ವಾರೀಸುದಾರರಿಲ್ಲದ 28 ಮೃತದೇಹಕ್ಕೆ ಅಂತ್ಯಸಂಸ್ಕಾರ

- Advertisement -
- Advertisement -

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ್ದ ರೈಲು ಅಪಘಾತದಲ್ಲಿ ಮೃತ 28 ಮಂದಿ ಅಪರಿಚಿತರ ಮೃತದೇಹವನ್ನು ಕೊನೆಗೂ ವಾರೀಸುದಾರರು ಇಲ್ಲದ ಕಾರಣ ಅಂತ್ಯಸಂಸ್ಕಾರ ಮಾಡಲಾಗಿದೆ.

ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್(BMC) ಮಂಗಳವಾರ ಬಹನಾಗಾ ರೈಲು ದುರಂತದಲ್ಲಿ ಸಾವನ್ನಪ್ಪಿದ ಅಪರಿಚಿತ ಪ್ರಯಾಣಿಕರ ಅಂತ್ಯಸಂಸ್ಕಾರವನ್ನು ಗೌರವದಿಂದ ಮಾಡಿದೆ.

ವಾರಸುದಾರರಿಲ್ಲದ 28 ಮೃತದೇಹವನ್ನು ಕಳೆದ 4 ತಿಂಗಳಿನಿಂದ ಭುವನೇಶ್ವರದ ಏಮ್ಸ್‌ನಲ್ಲಿ ಕಂಟೈನರ್‌ನಲ್ಲಿ ಸಂಗ್ರಹಿಸಿಡಲಾಗಿತ್ತು. ಇದೀಗ ಯಾರೂ ವಾರೀಸುದಾರರು ಬರದ ಕಾರಣ ಮೃತದೇಹಗಳನ್ನು ಭರತ್‌ಪುರ ಸ್ಮಶಾನದಲ್ಲಿ ಸಾಂಪ್ರದಾಯಿಕ ವಿಧಿ ವಿಧಾನಗಳ ಪ್ರಕಾರ ದಹಿಸಲಾಗಿದೆ.

ಹಿರಿಯ ಬಿಎಂಸಿ ಅಧಿಕಾರಿಯೊಬ್ಬರ ಮೇಲ್ವಿಚಾರಣೆಯಲ್ಲಿ ಶವಸಂಸ್ಕಾರ ನಡೆದಿದೆ. ಪರ್ದೀಪ್ ಸೇವಾ ಟ್ರಸ್ಟ್‌ನ 12 ಸದಸ್ಯರ ತಂಡವು ನಿಯಮಗಳ ಪ್ರಕಾರ ಮೃತದೇಹಗಳನ್ನು ಅಂತ್ಯಸಂಸ್ಕಾರ ಮಾಡಿದೆ.

ಪ್ರತಿಯೊಂದು ಮೃತದೇಹದ ಅಂತ್ಯಕ್ರಿಯೆಗೆ ಕನಿಷ್ಠ ನಾಲ್ಕು ಗಂಟೆಗಳನ್ನು ತೆಗೆದುಕೊಂಡಿದೆ. ದೇಹಗಳನ್ನು ಮೈನಸ್ ತಾಪಮಾನದಲ್ಲಿ ಸಂಗ್ರಹಿಸಿದ್ದರಿಂದ ಶವಗಳು ಮಂಜುಗಡ್ಡೆಯಿಂದ ಗಟ್ಟಿಯಾಗಿದ್ದವು. ಮೃತದೇಹಗಳನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಗುಣಮಟ್ಟದ ಮರ ಮತ್ತು ತುಪ್ಪದ ವ್ಯವಸ್ಥೆ ಮಾಡಲಾಗಿದೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಂದು ತಿಂಗಳಿನಿಂದ ಉಳಿದ 28 ಶವಗಳನ್ನು ಪಡೆಯಲು ಯಾರೂ ಬರದ ಕಾರಣ, ರೈಲು ಅಪಘಾತದ ತನಿಖೆ ನಡೆಸುತ್ತಿರುವ ಸಿಬಿಐ ಅಪರಿಚಿತ ಬಲಿಪಶುಗಳನ್ನು ವಿಲೇವಾರಿ ಮಾಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ಇದರಂತೆ  ಕಾನೂನು ತೊಡಕುಗಳನ್ನು ಗಮನದಲ್ಲಿಟ್ಟುಕೊಂಡು ಮೃತರ ಡಿಎನ್‌ಎಯನ್ನು ಸಂರಕ್ಷಿಸಿಟ್ಟು ಅಂತ್ಯಸಂಸ್ಕಾರವನ್ನು ನಡೆಸಲಾಗಿದೆ. ಡಿಎನ್‌ಎ ಸಂಗ್ರಹಿಸಿಟ್ಟಿರುವ ಬಗ್ಗೆ ಸ್ವತಃ ಏಮ್ಸ್‌ನ ಅಂಗರಚನಾಶಾಸ್ತ್ರದ ವಿಭಾಗದ ಮುಖ್ಯಸ್ಥ ಪ್ರೊ.ಪ್ರವಾಸ್ ತ್ರಿಪಾಠಿ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬಹನಗಾ ಬಜಾರ್ ರೈಲು ನಿಲ್ದಾಣದ ಬಳಿ ನಡೆದ ಈ ಭೀಕರ ಅಪಘಾತದಲ್ಲಿ ಒಟ್ಟು 296 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ 162 ಮೃತದೇಹಗಳನ್ನು ಏಮ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಆದರಲ್ಲಿ 81 ಜನರ ಮೃತದೇಹಗಳನ್ನು ಅವರ ಸಂಬಂಧಿಕರು ತೆಗೆದುಕೊಂಡು ಹೋಗಿದ್ದಾರೆ. ಉಳಿದ 81 ಮೃತದೇಹಗಳ ಡಿಎನ್‌ಎ ಪರೀಕ್ಷೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಅದರಲ್ಲಿ 53 ಮೃತದೇಹಗಳ ಗುರುತು ಪತ್ತೆ ಮಾಡಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಇನ್ನೂ 28 ಮೃತದೇಹಗಳನ್ನು ಭುವನೇಶ್ವರ ಏಮ್ಸ್‌ನಲ್ಲಿರುವ ಶವಾಗಾರದಲ್ಲಿ ಇರಿಸಲಾಗಿತ್ತು. ಆದರೆ ಈ ಶವಗಳು ವಲಸೆ ಕಾರ್ಮಿಕರದ್ದಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಆದರೆ ಯಾರೂ ಕೂಡ ಸಂಬಂಧಿಕರು ಮೃತದೇಹವನ್ನು ಪಡೆಯಲು ಬಂದಿಲ್ಲ.

ಆದರೆ ನಿಯಮಗಳ ಪ್ರಕಾರ 30 ದಿನಗಳ ನಂತರ ಅನಾಥ ಶವಗಳಿಗೆ ಅಂತ್ಯಕ್ರಿಯೆ ನಡೆಸಬೇಕು. ಆದ್ದರಿಂದ ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ ನೇತೃತೃತ್ವದಲ್ಲಿ ಅಂತ್ಯಸಂಸ್ಕಾರ ನಡೆದಿದೆ.

ಇದನ್ನು ಓದಿ: ನಿಷೇಧಿತ ಪಿಎಫ್‌ಐ ಪರ ಚಟುವಟಿಕೆ ಶಂಕೆ: ವಿವಿಧ ಸ್ಥಳಗಳಲ್ಲಿ ಎನ್‌ಐಎ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...