Homeಮುಖಪುಟಒಡಿಶಾ ರೈಲು ದುರಂತ: ವಾರೀಸುದಾರರಿಲ್ಲದ 28 ಮೃತದೇಹಕ್ಕೆ ಅಂತ್ಯಸಂಸ್ಕಾರ

ಒಡಿಶಾ ರೈಲು ದುರಂತ: ವಾರೀಸುದಾರರಿಲ್ಲದ 28 ಮೃತದೇಹಕ್ಕೆ ಅಂತ್ಯಸಂಸ್ಕಾರ

- Advertisement -
- Advertisement -

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ್ದ ರೈಲು ಅಪಘಾತದಲ್ಲಿ ಮೃತ 28 ಮಂದಿ ಅಪರಿಚಿತರ ಮೃತದೇಹವನ್ನು ಕೊನೆಗೂ ವಾರೀಸುದಾರರು ಇಲ್ಲದ ಕಾರಣ ಅಂತ್ಯಸಂಸ್ಕಾರ ಮಾಡಲಾಗಿದೆ.

ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್(BMC) ಮಂಗಳವಾರ ಬಹನಾಗಾ ರೈಲು ದುರಂತದಲ್ಲಿ ಸಾವನ್ನಪ್ಪಿದ ಅಪರಿಚಿತ ಪ್ರಯಾಣಿಕರ ಅಂತ್ಯಸಂಸ್ಕಾರವನ್ನು ಗೌರವದಿಂದ ಮಾಡಿದೆ.

ವಾರಸುದಾರರಿಲ್ಲದ 28 ಮೃತದೇಹವನ್ನು ಕಳೆದ 4 ತಿಂಗಳಿನಿಂದ ಭುವನೇಶ್ವರದ ಏಮ್ಸ್‌ನಲ್ಲಿ ಕಂಟೈನರ್‌ನಲ್ಲಿ ಸಂಗ್ರಹಿಸಿಡಲಾಗಿತ್ತು. ಇದೀಗ ಯಾರೂ ವಾರೀಸುದಾರರು ಬರದ ಕಾರಣ ಮೃತದೇಹಗಳನ್ನು ಭರತ್‌ಪುರ ಸ್ಮಶಾನದಲ್ಲಿ ಸಾಂಪ್ರದಾಯಿಕ ವಿಧಿ ವಿಧಾನಗಳ ಪ್ರಕಾರ ದಹಿಸಲಾಗಿದೆ.

ಹಿರಿಯ ಬಿಎಂಸಿ ಅಧಿಕಾರಿಯೊಬ್ಬರ ಮೇಲ್ವಿಚಾರಣೆಯಲ್ಲಿ ಶವಸಂಸ್ಕಾರ ನಡೆದಿದೆ. ಪರ್ದೀಪ್ ಸೇವಾ ಟ್ರಸ್ಟ್‌ನ 12 ಸದಸ್ಯರ ತಂಡವು ನಿಯಮಗಳ ಪ್ರಕಾರ ಮೃತದೇಹಗಳನ್ನು ಅಂತ್ಯಸಂಸ್ಕಾರ ಮಾಡಿದೆ.

ಪ್ರತಿಯೊಂದು ಮೃತದೇಹದ ಅಂತ್ಯಕ್ರಿಯೆಗೆ ಕನಿಷ್ಠ ನಾಲ್ಕು ಗಂಟೆಗಳನ್ನು ತೆಗೆದುಕೊಂಡಿದೆ. ದೇಹಗಳನ್ನು ಮೈನಸ್ ತಾಪಮಾನದಲ್ಲಿ ಸಂಗ್ರಹಿಸಿದ್ದರಿಂದ ಶವಗಳು ಮಂಜುಗಡ್ಡೆಯಿಂದ ಗಟ್ಟಿಯಾಗಿದ್ದವು. ಮೃತದೇಹಗಳನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಗುಣಮಟ್ಟದ ಮರ ಮತ್ತು ತುಪ್ಪದ ವ್ಯವಸ್ಥೆ ಮಾಡಲಾಗಿದೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಂದು ತಿಂಗಳಿನಿಂದ ಉಳಿದ 28 ಶವಗಳನ್ನು ಪಡೆಯಲು ಯಾರೂ ಬರದ ಕಾರಣ, ರೈಲು ಅಪಘಾತದ ತನಿಖೆ ನಡೆಸುತ್ತಿರುವ ಸಿಬಿಐ ಅಪರಿಚಿತ ಬಲಿಪಶುಗಳನ್ನು ವಿಲೇವಾರಿ ಮಾಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ಇದರಂತೆ  ಕಾನೂನು ತೊಡಕುಗಳನ್ನು ಗಮನದಲ್ಲಿಟ್ಟುಕೊಂಡು ಮೃತರ ಡಿಎನ್‌ಎಯನ್ನು ಸಂರಕ್ಷಿಸಿಟ್ಟು ಅಂತ್ಯಸಂಸ್ಕಾರವನ್ನು ನಡೆಸಲಾಗಿದೆ. ಡಿಎನ್‌ಎ ಸಂಗ್ರಹಿಸಿಟ್ಟಿರುವ ಬಗ್ಗೆ ಸ್ವತಃ ಏಮ್ಸ್‌ನ ಅಂಗರಚನಾಶಾಸ್ತ್ರದ ವಿಭಾಗದ ಮುಖ್ಯಸ್ಥ ಪ್ರೊ.ಪ್ರವಾಸ್ ತ್ರಿಪಾಠಿ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬಹನಗಾ ಬಜಾರ್ ರೈಲು ನಿಲ್ದಾಣದ ಬಳಿ ನಡೆದ ಈ ಭೀಕರ ಅಪಘಾತದಲ್ಲಿ ಒಟ್ಟು 296 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ 162 ಮೃತದೇಹಗಳನ್ನು ಏಮ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಆದರಲ್ಲಿ 81 ಜನರ ಮೃತದೇಹಗಳನ್ನು ಅವರ ಸಂಬಂಧಿಕರು ತೆಗೆದುಕೊಂಡು ಹೋಗಿದ್ದಾರೆ. ಉಳಿದ 81 ಮೃತದೇಹಗಳ ಡಿಎನ್‌ಎ ಪರೀಕ್ಷೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಅದರಲ್ಲಿ 53 ಮೃತದೇಹಗಳ ಗುರುತು ಪತ್ತೆ ಮಾಡಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಇನ್ನೂ 28 ಮೃತದೇಹಗಳನ್ನು ಭುವನೇಶ್ವರ ಏಮ್ಸ್‌ನಲ್ಲಿರುವ ಶವಾಗಾರದಲ್ಲಿ ಇರಿಸಲಾಗಿತ್ತು. ಆದರೆ ಈ ಶವಗಳು ವಲಸೆ ಕಾರ್ಮಿಕರದ್ದಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಆದರೆ ಯಾರೂ ಕೂಡ ಸಂಬಂಧಿಕರು ಮೃತದೇಹವನ್ನು ಪಡೆಯಲು ಬಂದಿಲ್ಲ.

ಆದರೆ ನಿಯಮಗಳ ಪ್ರಕಾರ 30 ದಿನಗಳ ನಂತರ ಅನಾಥ ಶವಗಳಿಗೆ ಅಂತ್ಯಕ್ರಿಯೆ ನಡೆಸಬೇಕು. ಆದ್ದರಿಂದ ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ ನೇತೃತೃತ್ವದಲ್ಲಿ ಅಂತ್ಯಸಂಸ್ಕಾರ ನಡೆದಿದೆ.

ಇದನ್ನು ಓದಿ: ನಿಷೇಧಿತ ಪಿಎಫ್‌ಐ ಪರ ಚಟುವಟಿಕೆ ಶಂಕೆ: ವಿವಿಧ ಸ್ಥಳಗಳಲ್ಲಿ ಎನ್‌ಐಎ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...