Homeಮುಖಪುಟಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ - ಪೊಲೀಸರ ನಡುವೆ ಘರ್ಷಣೆ

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

- Advertisement -
- Advertisement -

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ.

ಜಿಲ್ಲೆಯ ಕಾಶಿಪುರ ಬ್ಲಾಕ್‌ನ ಶಾಗಬರಿ ಗ್ರಾಮದಲ್ಲಿ ರಸ್ತೆ ನಿರ್ಮಾಣವನ್ನು ಬುಡಕಟ್ಟು ಜನಾಂಗದವರು ತೀವ್ರವಾಗಿ ವಿರೋಧಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ರಸ್ತೆ ನಿರ್ಮಾಣವನ್ನು ನಿಲ್ಲಿಸುವ ಪ್ರಯತ್ನದಲ್ಲಿ ಪ್ರತಿಭಟನಾಕಾರರು ಕಲ್ಲುಗಳನ್ನು ಎಸೆದು, ಕತ್ತಿಗಳು, ಕೊಡಲಿಗಳು ಮತ್ತು ಇತರ ಹರಿತವಾದ ಆಯುಧಗಳಿಂದ ಪೊಲೀಸರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಆನ್‌ಲೈನ್‌ನಲ್ಲಿ ಪ್ರಸಾರವಾಗುವ ದೃಶ್ಯಗಳು ಜಿಲ್ಲಾಧಿಕಾರಿ ಕುಲಕರ್ಣಿ ಅಶುತೋಷ್ ಸಿ ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಅಧಿಕಾರಿಗಳು ಬುಡಕಟ್ಟು ಜನರು ಹೊರಹೋಗುವಂತೆ ಒತ್ತಾಯಿಸುತ್ತಿರುವುದನ್ನು ಕಾಣಬಹುದು.

ಕಾಂತಮಲ್ ಗ್ರಾಮದ ಬುಡಕಟ್ಟು ಮಹಿಳೆಯರ ಗುಂಪೊಂದು ಮಧ್ಯರಾತ್ರಿ ನಿದ್ರಿಸುತ್ತಿದ್ದಾಗ ಪೊಲೀಸರು ತಮ್ಮ ಮೇಲೆ ಶೆಲ್‌ಗಳನ್ನು ಹಾರಿಸಿದರು ಎಂದು ಆರೋಪಿಸಿದ್ದಾರೆ. ಶಸ್ತ್ರಸಜ್ಜಿತ ಪೊಲೀಸರು ತಮ್ಮ ವಿದ್ಯುತ್ ಕಡಿತಗೊಳಿಸಿ ಗ್ರಾಮಸ್ಥರ ಮೇಲೆ ದಾಳಿ ಮಾಡಿದ್ದಾರೆ, ಇದರಿಂದಾಗಿ ಅನೇಕರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

“ಘಟನೆಯಲ್ಲಿ ಗಾಯಗೊಂಡ 40 ಪೊಲೀಸ್ ಸಿಬ್ಬಂದಿಗಳಲ್ಲಿ 10 ಮಂದಿಯ ತಲೆಗೆ ಗಾಯಗಳಾಗಿದ್ದು, ಅವರನ್ನು ರಾಯಗಡದಲ್ಲಿರುವ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಭಟನಾಕಾರರು ಕಲ್ಲು ಮತ್ತು ಇಟ್ಟಿಗೆಗಳನ್ನು ತೂರಿದರು. ಸಮಾಧಾನಪಡಿಸಲು ಪ್ರಯತ್ನಿಸಿದಾಗ ಪೊಲೀಸರ ಮೇಲೆ ದಾಳಿ ಮಾಡಿದರು” ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಸಂಜಯ್ ಕುಮಾರ್ ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಒಡಿಶಾ ಸರ್ಕಾರವು ಸಿಜಿಮಾಲಿ ಬಾಕ್ಸೈಟ್ ಗಣಿ ಯೋಜನೆಯನ್ನು ಖಾಸಗಿ ಕಂಪನಿಗೆ ವಹಿಸಿದಾಗಿನಿಂದ ಕಾಶಿಪುರ ಪ್ರದೇಶದ ಸ್ಥಳೀಯರು ವಿರೋಧಿಸುತ್ತಿದ್ದಾರೆ. ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಿಸಲು ಆಡಳಿತವು ಕಂಪನಿಗೆ ಅನುಕೂಲ ಮಾಡಿಕೊಡುತ್ತಿದೆ.

ಜಿಲ್ಲಾಧಿಕಾರಿ ಕುಲಕರ್ಣಿ ಸ್ಥಳದಲ್ಲಿ ಹಾಜರಿದ್ದರು. “ಪ್ರತಿಭಟನೆ ನಡೆಸುತ್ತಿರುವ ಬುಡಕಟ್ಟು ಜನಾಂಗದವರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಶಾಗಬರಿ ಗ್ರಾಮದಲ್ಲಿ ನಿಷೇಧಾಜ್ಞೆ ವಿಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...