Homeಮುಖಪುಟಒಡಿಶಾ: ಬಿಜೆಡಿ ಜೊತೆಗೆ ಮೈತ್ರಿ ಇಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಮನಮೋಹನ್ ಸಮಾಲ್

ಒಡಿಶಾ: ಬಿಜೆಡಿ ಜೊತೆಗೆ ಮೈತ್ರಿ ಇಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಮನಮೋಹನ್ ಸಮಾಲ್

- Advertisement -
- Advertisement -

ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ರಾಜ್ಯದ ಆಡಳಿತಾರೂಢ ಬಿಜು ಜನತಾ ದಳ (ಬಿಜೆಡಿ) ದೊಂದಿಗೆ ಸಂಭವನೀಯ ಮೈತ್ರಿಯ ಊಹಾಪೋಹಗಳನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಒಡಿಶಾ ರಾಜ್ಯಾಧ್ಯಕ್ಷ ಮನಮೋಹನ್ ಸಮಾಲ್ ಅವರು ಶುಕ್ರವಾರ ತಳ್ಳಿಹಾಕಿದ್ದಾರೆ.

ರಾಜ್ಯದ 21 ಲೋಕಸಭಾ ಸ್ಥಾನಗಳು ಮತ್ತು 147 ವಿಧಾನಸಭಾ ಸ್ಥಾನಗಳ ಅಭ್ಯರ್ಥಿಗಳ ಕುರಿತು ಕೇಂದ್ರ ನಾಯಕತ್ವದೊಂದಿಗೆ ಚರ್ಚಿಸಲು ದೆಹಲಿಗೆ ಬಂದಿದ್ದ ಸಮಲ್, ಬಿಜೆಪಿಯು ಬಿಜೆಡಿಯೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ; ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದರು.

ನಾವು ಸ್ವತಂತ್ರವಾಗಿ ಹೋರಾಡುತ್ತೇವೆ ಮತ್ತು ಸ್ವಂತವಾಗಿ ಸರ್ಕಾರ ರಚಿಸಲು ಪ್ರಯತ್ನಿಸುತ್ತೇವೆ  ಎಂದು ಸಮಲ್ ಹೇಳಿದರು. 2009 ರವರೆಗೆ ಮೈತ್ರಿಕೂಟದ ಪಾಲುದಾರರಾಗಿದ್ದ ಎರಡು ಪಕ್ಷಗಳು, 2008ರ ಕಂಧಮಾಲ್ ಗಲಭೆಯಲ್ಲಿ ಆ ವರ್ಷದ ಅಸೆಂಬ್ಲಿ ಚುನಾವಣೆಯ ಮೊದಲು ತಮ್ಮ ಪಾಲುದಾರಿಕೆಯನ್ನು ರದ್ದುಗೊಳಿಸಿದವು.

ರಾಜ್ಯಕ್ಕೆ ಬಿಜೆಪಿಯ ಚುನಾವಣಾ ಸಹ-ಪ್ರಭಾರಿ, ಲತಾ ಉಸೇಂಡಿ ಅವರು ಎರಡು ಪಕ್ಷಗಳ ನಡುವಿನ ಮೈತ್ರಿ ಸಾಧ್ಯತೆಯನ್ನು ನಿರಾಕರಿಸಿಲ್ಲ; ಇದು ಊಹಾಪೋಹಗಳಿಗೆ ಕಾರಣವಾಯಿತು. ಒಡಿಶಾದಲ್ಲಿ “ಡಬಲ್ ಇಂಜಿನ್” ಸರ್ಕಾರ ಇರುತ್ತದೆ ಎಂದು ಉಸೆಂಡಿ ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಜನ್ಮದಿನದ ಜೊತೆಗೆ ಮಾರ್ಚ್ 5 ರಂದು ಪ್ರಧಾನಿ ನರೇಂದ್ರ ಮೋದಿ ಒಡಿಶಾಗೆ ಭೇಟಿ ನೀಡಲಿದ್ದಾರೆ ಎಂದು ಘೋಷಿಸಿದ ನಂತರ ಊಹಾಪೋಹಗಳು ಎದ್ದಿವೆ. ಕಳೆದ ಒಂದು ದಶಕದಿಂದ ಪಟ್ನಾಯಕ್ ಅವರಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸುತ್ತಿರುವ ಬಿಜೆಡಿ, ಕಳೆದ ತಿಂಗಳು ಕರ್ಪೂರಿ ಠಾಕೂರ್, ಎಲ್‌ಕೆ ಅಡ್ವಾಣಿ, ಎಂಎಸ್ ಸ್ವಾಮಿನಾಥನ್, ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್  ಅವರಿಗೆ ಪ್ರಶಸ್ತಿಯನ್ನು ಘೋಷಿಸಿದ ನಂತರ ಪಟ್ನಾಯಕ್ ಅವರಿಗೆ ಅತ್ಯುನ್ನತ ನಾಗರಿಕ ಗೌರವವನ್ನು ನೀಡುವ ಅಭಿಯಾನ ತೀವ್ರಗೊಂಡಿದೆ.

ಕಳೆದ ತಿಂಗಳು ಸಂಬಲ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿಯವರು ನವೀನ್ ಪಟ್ನಾಯಕ್ ಅವರನ್ನು ತಮ್ಮ ಸ್ನೇಹಿತ ಎಂದು ಉಲ್ಲೇಖಿಸಿದ್ದರು. ರಾಜ್ಯಸಭಾ ಚುನಾವಣೆಗೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರ ಉಮೇದುವಾರಿಕೆಗೆ ಬಿಜೆಡಿ ಬೆಂಬಲ ಘೋಷಿಸಿದೆ.

ಇದನ್ನೂ ಓದಿ; ಹಿಮಾಚಲ ಸಿಎಂ ವಿರುದ್ಧ ಬಂಡಾಯ ಶಾಸಕ ವಾಗ್ದಾಳಿ; ದೆಹಲಿಗೆ ತೆರಳುವ ಮುನ್ನ ವಿಕ್ರಮಾದಿತ್ಯ ಸಿಂಗ್ ಭೇಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...