Homeಮುಖಪುಟಒಡಿಶಾ : ಗಣರಾಜ್ಯೋತ್ಸವ ದಿನ ಮಾಂಸ, ಮೊಟ್ಟೆ, ಮೀನು ಮಾರಾಟ ನಿಷೇಧಿಸಿದ ಜಿಲ್ಲಾಡಳಿತ!

ಒಡಿಶಾ : ಗಣರಾಜ್ಯೋತ್ಸವ ದಿನ ಮಾಂಸ, ಮೊಟ್ಟೆ, ಮೀನು ಮಾರಾಟ ನಿಷೇಧಿಸಿದ ಜಿಲ್ಲಾಡಳಿತ!

- Advertisement -
- Advertisement -

ಗಣರಾಜ್ಯೋತ್ಸವದಂದು ಜಿಲ್ಲೆಯಾದ್ಯಂತ ಮಾಂಸಾಹಾರಿ ವಸ್ತುಗಳ ಮಾರಾಟವನ್ನು ನಿಷೇಧಿಸಿ ಒಡಿಶಾದ ಕೊರಾಪುಟ್ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜನವರಿ 26, ಗಣರಾಜ್ಯೋತ್ಸವದಂದು ಮಾಂಸ, ಕೋಳಿ, ಮೊಟ್ಟೆ, ಮೀನು ಮತ್ತು ಇತರ ಮಾಂಸಾಹಾರಿ ವಸ್ತುಗಳ ಮಾರಾಟವನ್ನು ನಿಷೇಧಿಸುವ ಆದೇಶವನ್ನು ಹೊರಡಿಸುವಂತೆ ಜಿಲ್ಲಾಧಿಕಾರಿ ಮನೋಜ್ ಸತ್ಯವಾನ್ ಮಹಾಜನ್ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು, ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ.

ಮಾಂಸಾಹಾರಿ ವಸ್ತುಗಳ ಮಾರಾಟದ ಮೇಲಿನ ನಿಷೇಧದ ಹಿಂದಿನ ತಾರ್ಕಿಕತೆಯನ್ನು ಜಿಲ್ಲಾಧಿಕಾರಿಯ ಆದೇಶವು ವಿವರಿಸಿಲ್ಲ. ಗಣರಾಜ್ಯೋತ್ಸವದಂದು ಜಿಲ್ಲೆಯಾದ್ಯಂತ ಹೋಟೆಲ್‌ಗಳಲ್ಲಿ ಮಾಂಸಾಹಾರಿ ವಸ್ತುಗಳ ನಿಷೇಧ ಅನ್ವಯವಾಗುತ್ತದೆಯೇ? ಎಂಬುದು ಕೂಡ ಸ್ಪಷ್ಟಪಡಿಸಿಲ್ಲ ಎನ್ನಲಾಗಿದೆ.

ಜಿಲ್ಲಾಧಿಕಾರಿಗಳ ಆದೇಶ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜನರ ಆಹಾರ ಆಯ್ಕೆಯ ಮೇಲೆ ಸರ್ಕಾರ ಹೇಗೆ ನಿರ್ಬಂಧಗಳನ್ನು ವಿಧಿಸಬಹುದು ಎಂದು ಕೆಲವರು ಪ್ರಶ್ನಿಸಿದ್ದಾರೆ.

“ಸಂವಿಧಾನದ ಜಾರಿಯಾದ ದಿನವೇ ಯಾವುದೋ ಅನ್ಯಾಯ ಅಥವಾ ತಾರ್ಕಿಕವಲ್ಲದ ನಿಯಮವನ್ನು ಜಾರಿಗೊಳಿಸುತ್ತಿದ್ದಾರೆ. ನಿಮ್ಮಲ್ಲಿ ಸಂವಿಧಾನದ ನೈತಿಕತೆ ಎಲ್ಲಿದೆ? ಜನರ ಮೂಲಭೂತ ಹಕ್ಕುಗಳನ್ನು ಏಕೆ ಉಲ್ಲಂಘಿಸುತ್ತಿದ್ದೀರಿ? ಇದು ಕೇವಲ ಒಂದು ದಿನದ ಸಮಸ್ಯೆಯಲ್ಲ. ಇದು ನಮ್ಮೆಲ್ಲರ ಹಕ್ಕುಗಳ ಬಗ್ಗೆಯೇ ದೊಡ್ಡ ಪ್ರಶ್ನೆ!” ಎಂದು ಶೋಭಂಗಂ ಮೊಹಂತಿ ಎಂಬವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಜನರಿಗೆ ಉತ್ತಮ ರಸ್ತೆಗಳು, ಸ್ವಚ್ಛ ನೀರು, ವಿದ್ಯುತ್, ಆಸ್ಪತ್ರೆಗಳು ಮುಂತಾದ ಒಳ್ಳೆಯ ಮೂಲಸೌಕರ್ಯ ಕೊಡೋದಕ್ಕಿಂತ, ಭ್ರಷ್ಟಾಚಾರ ಇಲ್ಲದ ಸೇವೆಗಳನ್ನು ಕೊಡೋದಕ್ಕಿಂತ ಹೆಚ್ಚಾಗಿ ಸರ್ಕಾರ/ಅಧಿಕಾರಿಗಳು ನಾವು ಏನು ತಿನ್ನುತ್ತೇವೆ, ಏನು ಉಟ್ಟುಕೊಳ್ಳುತ್ತೇವೆ ಅಂತದ್ದರ ಮೇಲೆ ಗಮನಹರಿಸುತ್ತಿದ್ದಾರೆ. ಭಾರತದ ಅಧಿಕಾರಶಾಹಿ ದೊಡ್ಡ ವೈಫಲ್ಯ. ನಾವು ಕಟ್ಟುತ್ತಿರುವ ತೆರಿಗೆ ಹಣ ಏನೂ ಪ್ರಯೋಜನ ಇಲ್ಲದೆ ವ್ಯರ್ಥವಾಗ್ತಿದೆ. ಸಾಮಾನ್ಯ ಜನರಿಗೆ ಏನೂ ವಾಪಸ್ ಸಿಗುತ್ತಿಲ್ಲ. ಎಲ್ಲವೂ ದೇವರ ಮೇಲೆ ಬಿಟ್ಟಿದ್ದೇವೆ” ಎಂದು ಮತ್ತೊಬ್ಬರು ಎಕ್ಸ್‌ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

ಒಂದು ತಿಂಗಳ ಹಿಂದೆ ನಡೆದ ಜಿಲ್ಲಾಡಳಿತದ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಆಧಾರದ ಮೇಲೆ ಮಾಂಸಹಾರಿ ವಸ್ತುಗಳ ಮೇಲೆ ನಿಷೇಧ ಹೇರಲಾಗಿದ ಎಂದು ಮೂಲಗಳು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...