Homeದಲಿತ್ ಫೈಲ್ಸ್ಒಡಿಶಾ | ಮೇಕೆ ಕಳವು ಆರೋಪ; ದಲಿತ ಯುವಕರ ಮೇಲೆ ಹಲ್ಲೆ, ಚಪ್ಪಲಿ ಹಾರ!

ಒಡಿಶಾ | ಮೇಕೆ ಕಳವು ಆರೋಪ; ದಲಿತ ಯುವಕರ ಮೇಲೆ ಹಲ್ಲೆ, ಚಪ್ಪಲಿ ಹಾರ!

- Advertisement -
- Advertisement -

ಮೇಕೆ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ದಲಿತ ಯುವಕರ ಮೇಲೆ ಹಲ್ಲೆ ನಡೆಸಿ, ಥಳಿಸಿ ಚಪ್ಪಲಿಯಿಂದ ಹಾರ ಹಾಕಿ ಅವಮಾನಿಸಿದ ಘಟನೆ ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶನಿವಾರ ವರದಿ ಮಾಡಿದೆ. ಒಡಿಶಾ

ಬಿರಿಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್ 27 ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಒಡಿಶಾ ಕಾಂಗ್ರೆಸ್ ನಾಯಕ ಅಮಿಯಾ ಪಾಂಡವ್ ಅವರು ಶನಿವಾರ ಬೆಳಗ್ಗೆ ಎಕ್ಸ್‌ನಲ್ಲಿ, ನಡೆದ ಹಲ್ಲೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಪ್ರಕರಣದ ಬಗ್ಗೆ ಗಮನ ಸೆಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಬ್ಬರು ವ್ಯಕ್ತಿಗಳು ಆಟೋ ರಿಕ್ಷಾದಲ್ಲಿ ಎರಡು ಮೇಕೆಗಳನ್ನು ಸಾಗಿಸುತ್ತಿದ್ದಾಗ ಸ್ಥಳೀಯರು ಹಿಂಬಾಲಿಸಿ ಹಿಡಿದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ನಂತರ ಅವರನ್ನು ಪೊಲೀಸರು ರಕ್ಷಿಸಿದ್ದು, ಕಳ್ಳತನದ ಆರೋಪ ಹೊರಿಸಿ, ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ವರದಿಯಾಗಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ಗಳ ಜೊತೆಗೆ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ, 1989 ರ ಅಡಿಯಲ್ಲಿ ಆಪಾದಿತ ಹಲ್ಲೆಗಾಗಿ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ದೌರ್ಜನ್ಯಕ್ಕೆ ಒಳಗಾದ ಯುವಕರಲ್ಲಿ ಒಬ್ಬರ ತಂದೆ ಜನವರಿ 1 ರಂದು ಈ ಬಗ್ಗೆ ದೂರು ನೀಡಿದ್ದಾರೆ. “ನನ್ನ ಮಗ ಮತ್ತು ಅವನ ಸ್ನೇಹಿತ ಸಿಮದಾಳ ಗ್ರಾಮದಿಂದ ಹಿಂದಿರುಗುತ್ತಿದ್ದಾಗ, ಕೆಲವು ಸ್ಥಳೀಯರು ಪಂಚಾಯಿತಿ ಕಚೇರಿ ಬಳಿಯ ಬರೇಡಿಯಾ ಸೇತುವೆಯ ಬಳಿ ಅವರ ಆಟೋರಿಕ್ಷಾವನ್ನು ತಡೆದಿದ್ದಾರೆ. ಈ ವೇಳೆ ನನ್ನ ಮಗನ ಹೆಸರು ಮತ್ತು ಊರಿನ ಬಗ್ಗೆ ಕೇಳಿದ್ದಾರೆ” ಎಂದು ಅವರು ದೂರಿದ್ದಾರೆ. ಒಡಿಶಾ

“ಈ ಅವರು ಹೆಸರು ಹೇಳಿದಾಗ, ಸ್ಥಳೀಯರು ನನ್ನ ಮಗ ಮತ್ತು ಅವನ ಸ್ನೇಹಿತನನ್ನು ಅಶ್ಲೀಲ ಭಾಷೆಯಲ್ಲಿ ನಿಂದಿಸಿ, ಜಾತಿಯ ನಿಂದನೆ ಮಾಡಿದ್ದಾರೆ. ಜೊತೆಗೆ ಮೇಕೆಗಳನ್ನು ಕದ್ದಿದ್ದಾರೆಂದು ಆರೋಪಿಸಿದ್ದಾರೆ” ಎಂದು ತಂದೆಯ ದೂರಿನಲ್ಲಿ ಹೇಳಿದ್ದಾರೆ. ಅಲ್ಲದೆ, ಹಲ್ಲೆ ವೇಳೆ ಅವರು ತಮ್ಮ ಮಗನ ಬಳಿಯಿದ್ದ ಬೆಳ್ಳಿಯ ಸರವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರನ್ನು ಗುರುತಿಸಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಜಗತ್‌ಸಿಂಗ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಭವಾನಿ ಶಂಕರ್ ಉದ್ಗಾಟ ತಿಳಿಸಿದ್ದಾರೆ. “ನಾವು ಅವರ ವಿರುದ್ಧ ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದದ್ದಾರೆ.

ಘಟನೆ ಕಾಂಗ್ರೆಸ್ ಮುಖಂಡ ಪಾಂಡವ್ ಖಂಡಿಸಿದ್ದು, ಎಕ್ಸ್‌ನಲ್ಲಿ “ಇಂತಹ ಅಕ್ರಮವು ಬಿಜೆಪಿ ಆಡಳಿತದ ಒಡಿಶಾದ ಪ್ರಧಾನ ಲಕ್ಷಣವಾಗಿದೆ. ಜಗತ್‌ಸಿಂಗ್‌ಪುರದಲ್ಲಿ ಇಬ್ಬರು ದಲಿತ ಯುವಕರನ್ನು ಹೇಗೆ ನಡೆಸಿಕೊಂಡರು ನೋಡಿ! ಮಾನವ ಘನತೆ ಅಪಾಯದಲ್ಲಿದೆ, ಡಬಲ್ ಎಂಜಿನ್ ಸರ್ಕಾರಕ್ಕೆ ಅವಮಾನ” ಎಂದು ಹೇಳಿದ್ದಾರೆ.

ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಒಡಿಶಾದ 147 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 78 ಸ್ಥಾನಗಳನ್ನು ಗೆದ್ದಿತ್ತು. ಮಾರ್ಚ್ 2000 ರಿಂದ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜು ಜನತಾ ದಳವು 51 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 14 ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂಓದಿ:  ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು – ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...