Homeಮುಖಪುಟಒಡಿಶಾ| ಕಾಲಿಗೆ ಬೀಳದ ವಿದ್ಯಾರ್ಥಿಗಳಿಗೆ ಕೋಲಿನಿಂದ ಥಳಿಸಿದ ಸರ್ಕಾರಿ ಶಾಲೆ ಶಿಕ್ಷಕಿ

ಒಡಿಶಾ| ಕಾಲಿಗೆ ಬೀಳದ ವಿದ್ಯಾರ್ಥಿಗಳಿಗೆ ಕೋಲಿನಿಂದ ಥಳಿಸಿದ ಸರ್ಕಾರಿ ಶಾಲೆ ಶಿಕ್ಷಕಿ

- Advertisement -
- Advertisement -

ಬೆಳಗಿನ ಪ್ರಾರ್ಥನೆಯ ನಂತರ ತನ್ನ ಪಾದಕ್ಕೆ ಬೀಳದ 31 ವಿದ್ಯಾರ್ಥಿಗಳನ್ನು ಸಹಾಯಕ ಶಿಕ್ಷಕಿಯೊಬ್ಬರು ಥಳಿಸಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಬಳಿಕ ಅವರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.

ಸೆಪ್ಟೆಂಬರ್ 11 ರಂದು ಖಂಡದೇವುಲಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಸುಕಾಂತಿ ಕರ್ ಸಹಾಯಕ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ವರದಿಯ ಪ್ರಕಾರ, 6, 7 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳು ಬೆಳಗಿನ ಪ್ರಾರ್ಥನೆ ಮುಗಿಸಿ ತರಗತಿಗಳಿಗೆ ಹಾಜರಾಗಲು ಹೊರಟಾಗ, ಶಿಕ್ಷಕಿ ಅವರ ಕೋಣೆಗಳಿಗೆ ಪ್ರವೇಶಿಸಿ ತನ್ನ ಪಾದಗಳನ್ನು ಮುಟ್ಟದಿದ್ದಕ್ಕಾಗಿ ಅವರನ್ನು ಥಳಿಸಿದ್ದಾರೆ.

ಸ್ಥಳೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ನಡೆಸಿದ ವಿಚಾರಣೆಯ ನಂತರ ಬೆಟ್ನೋಯ್ ಬ್ಲಾಕ್‌ನ ಬ್ಲಾಕ್ ಶಿಕ್ಷಣ ಅಧಿಕಾರಿ (ಬಿಇಒ) ಬಿಪ್ಲಪ್ ಕರ್ ಪ್ರಕರಣದ ನ್ಯಾಯವ್ಯಾಪ್ತಿಯನ್ನು ವಹಿಸಿಕೊಂಡರು.

“ಗೌರವಾರ್ಥವಾಗಿ ವಿದ್ಯಾರ್ಥಿಗಳು ತನ್ನ ಪಾದಗಳನ್ನು ಮುಟ್ಟದ ಕಾರಣ ಕರ್ ಬಹುಶಃ ಮನನೊಂದಿದ್ದರು. ನಂತರ ಅವರು 6, 7 ಮತ್ತು 8 ನೇ ತರಗತಿಗಳಿಗೆ ಹೋದರು, ಯಾರು ಪಾದ ಸ್ಪರ್ಶಿಸಿಲ್ಲ ಎಂದು ಕೇಳಿದ್ದಾರೆ. ಎದ್ದು ನಿಂತ ವಿದ್ಯಾರ್ಥಿಗಳಿಗೆ ಸಾಲಾಗಿ ನಿಲ್ಲಲು ಆದೇಶಿಸಲಾಯಿತು” ಎಂದು ಅಧಿಕಾರಿಯನ್ನು ಉಲ್ಲೂಖಿಸಿ ‘ದಿ ಹಿಂದೂ’ ವರದಿ ಮಾಡಿದೆ.

ಶಿಕ್ಷಕರು ಬಿದಿರಿನ ಕೋಲಿನಿಂದ ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದು, ಅವರಲ್ಲಿ ಹಲವರು ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ತಿಳಿದ ಕೂಡಲೇ ಪೋಷಕರು ಶಾಲೆಗೆ ಧಾವಿಸಿ ಕರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

“ಹಲವು ಮಕ್ಕಳ ಕೈಗಳಲ್ಲಿ ಮೂಗೇಟು ಆಗಿರುವುದುನ್ನೇ ಖುದ್ದು ನಾನೇ ಕಂಡುಕೊಂಡೆ. ಒಂದು ಮಗುವಿಗೆ ಪ್ರಥಮ ಚಿಕಿತ್ಸೆ ನೀಡಬೇಕಾಯಿತು, ಒಬ್ಬ ಹುಡುಗಿ ಸ್ವಲ್ಪ ಸಮಯದವರೆಗೆ ಪ್ರಜ್ಞೆ ಕಳೆದುಕೊಂಡಳು” ಎಂದು ಬಿಇಒ ಹೇಳಿದರು. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಬೆಟ್ನೋಯ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕೇರಳ| 16 ವರ್ಷದ ಬಾಲಕನಿಗೆ 2 ವರ್ಷಗಳಿಗೂ ಹೆಚ್ಚು ಕಾಲ ಹಲ್ಲೆ; ಆರೋಪಿಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...