Homeಕರೋನಾ ತಲ್ಲಣಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಸರಬರಾಜು ನಿಲ್ಲಿಸಿದ ಒಡಿಶಾ ಸರ್ಕಾರ

ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಸರಬರಾಜು ನಿಲ್ಲಿಸಿದ ಒಡಿಶಾ ಸರ್ಕಾರ

- Advertisement -
- Advertisement -

ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಸರಬರಾಜು ಮಾಡುವುದನ್ನು ನಿಲ್ಲಿಸಲು ಒಡಿಶಾ ಸರ್ಕಾರ ನಿರ್ಧರಿಸಿದೆ. ಇದನ್ನು ತಕ್ಷಣದಿಂದ ಜಾರಿಗೆ ತರಲು ಜಿಲ್ಲಾಧಿಕಾರಿ, ಪುರಸಭೆ ಆಯುಕ್ತರು ಮತ್ತು ಸಿಡಿಎಂಒಗಳಿಗೆ ನಿರ್ದೇಶನ ನೀಡಲಾಗಿದೆ. ಒಕ್ಕೂಟ ಸರ್ಕಾರವು 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಲು ರಾಜ್ಯಗಳಿಗೆ ಅಗತ್ಯವಾದ ಲಸಿಕೆ ಪ್ರಮಾಣವನ್ನು ಪೂರೈಸುತ್ತದೆ ಎಂದು ಪರಿಷ್ಕೃತ ಮಾರ್ಗಸೂಚಿಗಳು ಹೇಳಿದೆ.

ಒಕ್ಕೂಟ ಸರ್ಕಾರವು ಲಸಿಕೆ ಉತ್ಪಾದಿಸುವವರಿಂದ ಒಟ್ಟು ಉತ್ಪಾದನೆಯ 75% ಲಸಿಕೆಗಳನ್ನು ಪಡೆದುಕೊಳ್ಳುತ್ತದೆ. ಈ ಮೂಲಕ ರಾಜ್ಯಗಳಿಗೆ ತನ್ನ ‘ಉಚಿತ ವ್ಯಾಕ್ಸಿನೇಷನ್‌’ ಅಭಿಯಾನಗಳ ಅಡಿಯಲ್ಲಿ ಸರಬರಾಜು ಮಾಡುತ್ತದೆ. ಉಳಿದ 25% ಲಸಿಕೆಯನ್ನುಯ ಖಾಸಗಿ ಆಸ್ಪತ್ರೆಗಳು ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಬಾರಬಂಕಿ ಮಸೀದಿ ಧ್ವಂಸದ ಸಾಕ್ಷ್ಯಚಿತ್ರ: ದಿ ವೈರ್‌ ಮೇಲೆ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌

ಇದನ್ನೂ ಓದಿ: ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

“ಪ್ರಸ್ತುತ ಸನ್ನಿವೇಶದಲ್ಲಿ, ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಸರಬರಾಜನ್ನು ನಿಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಆಸಕ್ತ ಆಸ್ಪತ್ರೆಗಳು ಉತ್ಪಾದಕರಿಂದ ನೇರವಾಗಿ ಲಸಿಕೆಗಳನ್ನು ಪಡೆಯಬಹುದು ಮತ್ತು ಆರೋಗ್ಯ ಸಚಿವಾಲಯ ನಿಗದಿಪಡಿಸಿದ ಬೆಲೆಗೆ ಅನುಗುಣವಾಗಿ ಲಸಿಕೆ ನೀಡಬಹುದು” ಎಂದು ಆರೋಗ್ಯ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.

ಆರೋಗ್ಯ ಸಚಿವಾಲಯ ನಿಗದಿಪಡಿಸಿದ ಬೆಲೆಗೆ ಅನುಗುಣವಾಗಿ ವ್ಯಾಕ್ಸಿನೇಷನ್ ಅನ್ನು ಕೈಗೊಳ್ಳಿ” ಎಂದು ಆರೋಗ್ಯ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.

ಈ ಮಧ್ಯೆ, ಒಡಿಶಾ ಸರ್ಕಾರವು ಗುರುವಾರದಂದು 2.82 ಲಕ್ಷ ಡೋಸ್ ಕೊರೊನಾ ಲಸಿಕೆಗಳನ್ನು ನೀಡಿದೆ. ಈ ಮೂಲಕ ರಾಜ್ಯದಲ್ಲಿ 1.09 ಕೋಟಿ ಜನರು ಲಸಿಕೆ ತೆಗೆದುಕೊಂಡಂತಾಗಿದೆ.

ಇದನ್ನೂ ಓದಿ: ಕೊರೊನಾ 2ನೇ ಅಲೆಗೆ 28 ವೈದ್ಯರು ಬಲಿ, ಇನ್ನು ಸಿಗದ ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...