Homeಮುಖಪುಟಗರ್ಭಿಣಿಯೊಬ್ಬರು ಉರಿ ಬಿಸಿಲಿನಲ್ಲಿ 3 ಕಿ.ಮೀ ನಡೆಯುವಂತೆ ಮಾಡಿದ ಪೊಲೀಸ್ ಅಧಿಕಾರಿ ಅಮಾನತು

ಗರ್ಭಿಣಿಯೊಬ್ಬರು ಉರಿ ಬಿಸಿಲಿನಲ್ಲಿ 3 ಕಿ.ಮೀ ನಡೆಯುವಂತೆ ಮಾಡಿದ ಪೊಲೀಸ್ ಅಧಿಕಾರಿ ಅಮಾನತು

ಹೆಲ್ಮೆಟ್ ಧರಿಸಿರಲಿಲ್ಲ ಎಂಬ ಕಾರಣಕ್ಕೆ ಪೊಲೀಸ್ ಈ ಶಿಕ್ಷೆ ವಿಧಿಸಿದ್ದರು.

- Advertisement -
- Advertisement -

ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದ ಗರ್ಭಿಣಿಯೊಬ್ಬರು ಉರಿ ಬಿಸಿಲಿನಲ್ಲಿ ಮೂರು ಕಿಲೋಮೀಟರ್ ದೂರ ನಡೆದುಕೊಂಡು ಹೋಗುವಂತೆ ಮಾಡಿದ ಆರೋಪದ ಮೇಲೆ ಸಬ್ ಇನ್ಸ್‌ಪೆಕ್ಟರ್‌ನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿರುವ ಘಟನೆ ಒಡಿಶಾದ ಮಯೂರ್‌ಭಂಜ್‌ನಲ್ಲಿ ನಡೆದಿದೆ.

ಮಯೂರ್ಭಂಜ್ ಜಿಲ್ಲೆಯ ಶರತ್ ಪೊಲೀಸ್ ಠಾಣೆಯ ಅಧಿಕಾರಿ (Officer-In-Charge) ರೀನಾ ಬಕ್ಸಲ್ ಅವರನ್ನು ಮಾರ್ಚ್ 28 ರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಮಯೂರ್‌ಭಂಜ್ ಎಸ್‌ಪಿ ಪತ್ರ ಬರೆದು ಆದೇಶಿಸಿದ್ದಾರೆ.

ಪೊಲೀಸ್ ಠಾಣೆಯ ಉಸ್ತುವಾರಿಯನ್ನು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಬಿ.ಡಿ.ದಸ್ಮೋಹಪಾತ್ರ ಅವರಿಗೆ ಹಸ್ತಾಂತರಿಸಲು ರೀನಾ ಬಕ್ಸಲ್ ಅವರಿಗೆ ತಿಳಿಸಲಾಗಿದೆ. ಗರ್ಭಿಣಿ ಮತ್ತು ಆಕೆಯ ಪತಿ , ರೀನಾ ಬಕ್ಸಲ್ ತಮ್ಮನ್ನು ಹಿಂಸಿಸಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ಗುರುಬಾರಿ ಎಂಬ ಮಹಿಳೆ ತನ್ನ ಪತಿ ಬಿಕ್ರಮ್ ಬಿರುಲಿಯೊಂದಿಗೆ ಬೈಕ್‌ನಲ್ಲಿ ಆರೋಗ್ಯ ತಪಾಸಣೆಗಾಗಿ ಉದಾಲಾ ಉಪವಿಭಾಗ ಆಸ್ಪತ್ರೆಗೆ ಹೋಗುತ್ತಿದ್ದಾಗ ಅವರನ್ನು ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರು ತಡೆದಿದ್ದಾರೆ. ವಾಹನ ಚಲಾಯಿಸುತ್ತಿದ್ದ ಬಿಕ್ರಮ್ ಬಿರುಲಿ ಹೆಲ್ಮೆಟ್ ಧರಿಸಿದ್ದರೆ, ಗರ್ಭಿಣಿ ಗುರುಬಾರಿ ಹೆಲ್ಮೆಟ್ ಧರಿಸಿರಲಿಲ್ಲ.

ಆರೋಗ್ಯ ಪರಿಸ್ಥಿತಿಯ ಕಾರಣ ಪತ್ನಿ ಹೆಲ್ಮೆಟ್ ಧರಿಸಿಲ್ಲ ಎಂದು ಬಿಕ್ರಮ್ ಹೇಳಿದ್ದಾರೆ. ಜೊತೆಗೆ ತಾವು ಆಸ್ಪತ್ರೆಗೆ ಹೋಗುತ್ತಿರುವುದಾಗಿಯೂ ತಿಳಿಸಿದ್ದಾರೆ. ಆದರೆ, ಅಧಿಕಾರಿ ರೀನಾ ಬಕ್ಸಲ್ ಅವರ ಮಾತುಗಳಿಗೆ ಕಿವಿಗೊಡದೆ, ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 500 ರೂಪಾಯಿ ದಂಡ ವಿಧಿಸಿದ್ದಾರೆ.

500 ರೂಪಾಯಿ ದಂಡ ಕಟ್ಟಲು ಬಿಕ್ರಾಮ್ ಅವರನ್ನು ಹತ್ತಿರದ ಪೊಲೀಸ್ ಠಾಣೆಗೆ ಹೋಗುವಂತೆ ರೀನಾ ಬಕ್ಸಲ್ ಒತ್ತಾಯಿಸಿದ್ದಾರೆ. ಗರ್ಭಿಣಿ ಪತ್ನಿಯನ್ನು ಸ್ಥಳದಲ್ಲಿಯೇ ಬಿಟ್ಟು ಪತಿ ದಂಡ ಕಟ್ಟಲು ತೆರಳಿದ್ದಾರೆ. ಇತ್ತ ಗರ್ಭಿಣಿ  ಗುರುಬಾರಿ ಸಹ ಕಾಯಲು ಆಗದೆ ಉರಿ ಬಿಸಿಲಿನಲ್ಲಿಯೇ ಕಾಲ್ನಡಿಗೆಯಲ್ಲಿ ಮೂರು ಕಿಲೋಮೀಟರ್ ಪ್ರಯಾಣ ಮಾಡಿದ್ದಾರೆ.

ಘಟನೆಯ ನಂತರ ತನಿಖಾ ವರದಿಯ ಆಧಾರದ ಮೇಲೆ ಪೊಲೀಸ್ ವರಿಷ್ಠಾಧಿಕಾರಿ, ಶರತ್ ಪೊಲೀಸ್ ಠಾಣೆಯ ಅಧಿಕಾರಿ ರೀನಾ ಬಕ್ಸಲ್  ಅವರನ್ನು ಅಮಾನತುಗೊಳಿಸಿದ್ದಾರೆ.


ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...