Homeಮುಖಪುಟಗರ್ಭಿಣಿಯೊಬ್ಬರು ಉರಿ ಬಿಸಿಲಿನಲ್ಲಿ 3 ಕಿ.ಮೀ ನಡೆಯುವಂತೆ ಮಾಡಿದ ಪೊಲೀಸ್ ಅಧಿಕಾರಿ ಅಮಾನತು

ಗರ್ಭಿಣಿಯೊಬ್ಬರು ಉರಿ ಬಿಸಿಲಿನಲ್ಲಿ 3 ಕಿ.ಮೀ ನಡೆಯುವಂತೆ ಮಾಡಿದ ಪೊಲೀಸ್ ಅಧಿಕಾರಿ ಅಮಾನತು

ಹೆಲ್ಮೆಟ್ ಧರಿಸಿರಲಿಲ್ಲ ಎಂಬ ಕಾರಣಕ್ಕೆ ಪೊಲೀಸ್ ಈ ಶಿಕ್ಷೆ ವಿಧಿಸಿದ್ದರು.

- Advertisement -
- Advertisement -

ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದ ಗರ್ಭಿಣಿಯೊಬ್ಬರು ಉರಿ ಬಿಸಿಲಿನಲ್ಲಿ ಮೂರು ಕಿಲೋಮೀಟರ್ ದೂರ ನಡೆದುಕೊಂಡು ಹೋಗುವಂತೆ ಮಾಡಿದ ಆರೋಪದ ಮೇಲೆ ಸಬ್ ಇನ್ಸ್‌ಪೆಕ್ಟರ್‌ನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿರುವ ಘಟನೆ ಒಡಿಶಾದ ಮಯೂರ್‌ಭಂಜ್‌ನಲ್ಲಿ ನಡೆದಿದೆ.

ಮಯೂರ್ಭಂಜ್ ಜಿಲ್ಲೆಯ ಶರತ್ ಪೊಲೀಸ್ ಠಾಣೆಯ ಅಧಿಕಾರಿ (Officer-In-Charge) ರೀನಾ ಬಕ್ಸಲ್ ಅವರನ್ನು ಮಾರ್ಚ್ 28 ರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಮಯೂರ್‌ಭಂಜ್ ಎಸ್‌ಪಿ ಪತ್ರ ಬರೆದು ಆದೇಶಿಸಿದ್ದಾರೆ.

ಪೊಲೀಸ್ ಠಾಣೆಯ ಉಸ್ತುವಾರಿಯನ್ನು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಬಿ.ಡಿ.ದಸ್ಮೋಹಪಾತ್ರ ಅವರಿಗೆ ಹಸ್ತಾಂತರಿಸಲು ರೀನಾ ಬಕ್ಸಲ್ ಅವರಿಗೆ ತಿಳಿಸಲಾಗಿದೆ. ಗರ್ಭಿಣಿ ಮತ್ತು ಆಕೆಯ ಪತಿ , ರೀನಾ ಬಕ್ಸಲ್ ತಮ್ಮನ್ನು ಹಿಂಸಿಸಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ಗುರುಬಾರಿ ಎಂಬ ಮಹಿಳೆ ತನ್ನ ಪತಿ ಬಿಕ್ರಮ್ ಬಿರುಲಿಯೊಂದಿಗೆ ಬೈಕ್‌ನಲ್ಲಿ ಆರೋಗ್ಯ ತಪಾಸಣೆಗಾಗಿ ಉದಾಲಾ ಉಪವಿಭಾಗ ಆಸ್ಪತ್ರೆಗೆ ಹೋಗುತ್ತಿದ್ದಾಗ ಅವರನ್ನು ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರು ತಡೆದಿದ್ದಾರೆ. ವಾಹನ ಚಲಾಯಿಸುತ್ತಿದ್ದ ಬಿಕ್ರಮ್ ಬಿರುಲಿ ಹೆಲ್ಮೆಟ್ ಧರಿಸಿದ್ದರೆ, ಗರ್ಭಿಣಿ ಗುರುಬಾರಿ ಹೆಲ್ಮೆಟ್ ಧರಿಸಿರಲಿಲ್ಲ.

ಆರೋಗ್ಯ ಪರಿಸ್ಥಿತಿಯ ಕಾರಣ ಪತ್ನಿ ಹೆಲ್ಮೆಟ್ ಧರಿಸಿಲ್ಲ ಎಂದು ಬಿಕ್ರಮ್ ಹೇಳಿದ್ದಾರೆ. ಜೊತೆಗೆ ತಾವು ಆಸ್ಪತ್ರೆಗೆ ಹೋಗುತ್ತಿರುವುದಾಗಿಯೂ ತಿಳಿಸಿದ್ದಾರೆ. ಆದರೆ, ಅಧಿಕಾರಿ ರೀನಾ ಬಕ್ಸಲ್ ಅವರ ಮಾತುಗಳಿಗೆ ಕಿವಿಗೊಡದೆ, ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 500 ರೂಪಾಯಿ ದಂಡ ವಿಧಿಸಿದ್ದಾರೆ.

500 ರೂಪಾಯಿ ದಂಡ ಕಟ್ಟಲು ಬಿಕ್ರಾಮ್ ಅವರನ್ನು ಹತ್ತಿರದ ಪೊಲೀಸ್ ಠಾಣೆಗೆ ಹೋಗುವಂತೆ ರೀನಾ ಬಕ್ಸಲ್ ಒತ್ತಾಯಿಸಿದ್ದಾರೆ. ಗರ್ಭಿಣಿ ಪತ್ನಿಯನ್ನು ಸ್ಥಳದಲ್ಲಿಯೇ ಬಿಟ್ಟು ಪತಿ ದಂಡ ಕಟ್ಟಲು ತೆರಳಿದ್ದಾರೆ. ಇತ್ತ ಗರ್ಭಿಣಿ  ಗುರುಬಾರಿ ಸಹ ಕಾಯಲು ಆಗದೆ ಉರಿ ಬಿಸಿಲಿನಲ್ಲಿಯೇ ಕಾಲ್ನಡಿಗೆಯಲ್ಲಿ ಮೂರು ಕಿಲೋಮೀಟರ್ ಪ್ರಯಾಣ ಮಾಡಿದ್ದಾರೆ.

ಘಟನೆಯ ನಂತರ ತನಿಖಾ ವರದಿಯ ಆಧಾರದ ಮೇಲೆ ಪೊಲೀಸ್ ವರಿಷ್ಠಾಧಿಕಾರಿ, ಶರತ್ ಪೊಲೀಸ್ ಠಾಣೆಯ ಅಧಿಕಾರಿ ರೀನಾ ಬಕ್ಸಲ್  ಅವರನ್ನು ಅಮಾನತುಗೊಳಿಸಿದ್ದಾರೆ.


ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...