Homeಮುಖಪುಟಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ ಸ್ಥಳಾಂತರಗೊಂಡಿದೆ.

ಧೆಂಕನಾಲ್ ಜಿಲ್ಲೆಯ ಪರ್ಜಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂದರ್ಸಿಂಗ ಗ್ರಾಮದಲ್ಲಿ ಜನವರಿ 4 ರಂದು ಪಾದ್ರಿ ಬಿಪಿನ್ ಬಿಹಾರಿ ನಾಯಕ್ ಮೇಲೆ ಹಲ್ಲೆ ನಡೆಸಲಾಯಿತು. ಎಫ್‌ಐಆರ್ ಪ್ರಕಾರ, 15 ರಿಂದ 20 ಜನರ ಗುಂಪು ನಾಯಕ್ ಪ್ರಾರ್ಥನೆ ಸಲ್ಲಿಸುತ್ತಿದ್ದ ಮನೆಗೆ ಬಲವಂತವಾಗಿ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿತು.

ಪಾದ್ರಿಯನ್ನು ಥಳಿಸಿ, ಚಪ್ಪಲಿ ಹಾರ ಹಾಕಿ, ಗ್ರಾಮದಾದ್ಯಂತ ಮೆರವಣಿಗೆ ಮಾಡಿ, ಬಲವಂತವಾಗಿ ಕೊಳಕು ನೀರು ಕುಡಿಸಲಾಯಿತು. ಅವರ ಇಚ್ಛೆಗೆ ವಿರುದ್ಧವಾಗಿ ದೇವಾಲಯದ ಮುಂದೆ ನಮಸ್ಕರಿಸಲಾಯಿತು ಎಂದು ದೂರಿನಲ್ಲಿ ತಿಳಿಸಲಾಗಿದೆ. ನಾಯಕ್ ಅವರ ಪತ್ನಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆಯ ನಂತರ, ನಾಯಕ್ ಅವರು ಅಂಗುಲ್ ಜಿಲ್ಲೆಯ ತಮ್ಮ ಸ್ಥಳೀಯ ಗ್ರಾಮದಲ್ಲಿಯೇ ವಾಸಿಸುತ್ತಿದ್ದಾರೆ. ಅವರು ಮನಗೆಗೆ ಹಿಂತಿರುಗಲು ಹೆದರುತ್ತಿದ್ದಾರೆ. ಒಂದು ವಾರದೊಳಗೆ ಮನೆ ಬಾಡಿಗೆ ಮನೆ ಖಾಲಿ ಮಾಡುವಂತೆ ಮಾಲೀಕರು ಒತ್ತಾಯಿಸಿದ ಬಳಿಕ ತಮ್ಮ ಪರಿಸ್ಥಿತಿ ಹದಗೆಟ್ಟಿದೆ ಎಂದು ಅವರ ಕುಟುಂಬ ತಿಳಿಸಿದೆ.

“ನನ್ನ ಸಹೋದರ ಎಂಟು ವರ್ಷಗಳ ಕಾಲ ಯಾವುದೇ ಸಮಸ್ಯೆಯಿಲ್ಲದೆ ವಾಸಿಸುತ್ತಿದ್ದ ಮನೆಯಿಂದ ಅದರ ಮಾಲೀಕರು ಹೊರಹೋಗುವಂತೆ ಒತ್ತಡ ಹಾಕುತ್ತಿದ್ದಾರೆ; ಅನಿವಾರ್ಯವಾಗಿ ನಾವು ಅಲ್ಲಿಂದ ಹೊರಟೆವು” ಎಂದು ನಾಯಕ್ ಅವರ ಹಿರಿಯ ಸಹೋದರ ಉದಯನಾಥ್ ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

“ಒಬ್ಬರ ಸ್ವಂತ ನಂಬಿಕೆಯನ್ನು ಪಾಲಿಸುವುದು ಪಾಪವೇ? ಈ ದೇಶದಲ್ಲಿ ಅದು ಮೂಲಭೂತ ಹಕ್ಕಲ್ಲವೇ” ಎಂದು ಪ್ರಶ್ನಿಸಿದ ಅವರು, ತನ್ನ ಸಹೋದರನನ್ನು ಗ್ರಾಮಸ್ಥರೊಬ್ಬರು ಅವರ ಆರೋಗ್ಯ ವೃದ್ಧಿಗಾಗಿ ಪ್ರಾರ್ಥಿಸಲು ಆಹ್ವಾನಿಸಿದ್ದರು, ಬಲವಂತದ ಧಾರ್ಮಿಕ ಮತಾಂತರ ಮಾಡಲು ಅಲ್ಲ ಎಂದು ಜೇಮ್ಸ್ ಆರೋಪಗಳನ್ನು ತಿರಸ್ಕರಿಸಿದರು.

“ಅವರು ಕಳೆದ ಎರಡು ವರ್ಷಗಳಿಂದ ಅಲ್ಲಿಗೆ ಪ್ರಾರ್ಥನೆ ಸಲ್ಲಿಸಲು ಮಾತ್ರ ಹೋಗುತ್ತಿದ್ದಾರೆ. ಈ ಆರೋಪಗಳು ಸುಳ್ಳು ಮತ್ತು ಪ್ರಕರಣವನ್ನು ದುರ್ಬಲಗೊಳಿಸುವ ಉದ್ದೇಶವನ್ನು ಹೊಂದಿವೆ” ಎಂದು ಅವರು ಹೇಳಿದರು.

ಘಟನೆಯ ಗಂಭೀರತೆಯ ಹೊರತಾಗಿಯೂ ಸ್ಥಳೀಯ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಲಿಲ್ಲ ಎಂದು ಕುಟುಂಬ ಆರೋಪಿಸಿದೆ. ದೂರಿನ ಪ್ರಕಾರ, ನಾಯಕ್ ಅವರ ಪತ್ನಿ ಹಲ್ಲೆ ನಡೆದ ಅರ್ಧ ಗಂಟೆಯೊಳಗೆ ಪೊಲೀಸ್ ಠಾಣೆಗೆ ತಲುಪಿದರು, ಆದರೆ ಪೊಲೀಸರು ತುರ್ತು ಕ್ರಮ ತೆಗೆದುಕೊಂಡಿಲ್ಲ.

“ಅಪರಾಧದ ಗಂಭೀರತೆಯ ಹೊರತಾಗಿಯೂ, ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದರು. ಅಧಿಕಾರಿಗಳು ಸ್ಥಳಕ್ಕೆ ತಲುಪುವ ಹೊತ್ತಿಗೆ, ನನ್ನ ಪತಿ ಈಗಾಗಲೇ ತೀವ್ರ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ಅನುಭವಿಸಿದ್ದರು” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕುಟುಂಬವು ಪೊಲೀಸ್ ವರಿಷ್ಠಾಧಿಕಾರಿಯನ್ನು ಸಂಪರ್ಕಿಸಿದ ನಂತರವೇ ಎಫ್‌ಐಆರ್ ದಾಖಲಿಸಲಾಗಿದೆ. ಧೆಂಕನಲ್ ಎಸ್‌ಪಿ ಅಭಿನವ್ ಸೋಂಕರ್ ಅವರು ಪರ್ಜಂಗ್ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್‌ಪೆಕ್ಟರ್‌ನಿಂದ ವಿವರಣೆ ಕೇಳಿದ್ದೇವೆ ಎಂದು ಹೇಳಿದರು. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು, ಇದುವರೆಗೆ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಹೇಳಿದರು.

ರಾಜಕೀಯ ಪ್ರತಿಕ್ರಿಯೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಹಲ್ಲೆಯನ್ನು ಖಂಡಿಸಿದರು. “ತೀವ್ರ ಅಮಾನವೀಯ ಕೃತ್ಯ” ಎಂದು ಕರೆದು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಅಸಹಿಷ್ಣುತೆಯ ವಾತಾವರಣವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಕೂಡ ದಾಳಿಯನ್ನು ಖಂಡಿಸಿದರು. ಇದು ಸಾಂವಿಧಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ, ಹೊಣೆಗಾರರಾದವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರಿಗೆ ಪತ್ರ ಬರೆದು, ಪಾದ್ರಿ ಮತ್ತು ಅವರ ಕುಟುಂಬಕ್ಕೆ ತಕ್ಷಣರಕ್ಷಣೆ ನೀಡುವಂತೆ ಕೋರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...