Homeಮುಖಪುಟಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ ಸ್ಥಳಾಂತರಗೊಂಡಿದೆ.

ಧೆಂಕನಾಲ್ ಜಿಲ್ಲೆಯ ಪರ್ಜಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂದರ್ಸಿಂಗ ಗ್ರಾಮದಲ್ಲಿ ಜನವರಿ 4 ರಂದು ಪಾದ್ರಿ ಬಿಪಿನ್ ಬಿಹಾರಿ ನಾಯಕ್ ಮೇಲೆ ಹಲ್ಲೆ ನಡೆಸಲಾಯಿತು. ಎಫ್‌ಐಆರ್ ಪ್ರಕಾರ, 15 ರಿಂದ 20 ಜನರ ಗುಂಪು ನಾಯಕ್ ಪ್ರಾರ್ಥನೆ ಸಲ್ಲಿಸುತ್ತಿದ್ದ ಮನೆಗೆ ಬಲವಂತವಾಗಿ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿತು.

ಪಾದ್ರಿಯನ್ನು ಥಳಿಸಿ, ಚಪ್ಪಲಿ ಹಾರ ಹಾಕಿ, ಗ್ರಾಮದಾದ್ಯಂತ ಮೆರವಣಿಗೆ ಮಾಡಿ, ಬಲವಂತವಾಗಿ ಕೊಳಕು ನೀರು ಕುಡಿಸಲಾಯಿತು. ಅವರ ಇಚ್ಛೆಗೆ ವಿರುದ್ಧವಾಗಿ ದೇವಾಲಯದ ಮುಂದೆ ನಮಸ್ಕರಿಸಲಾಯಿತು ಎಂದು ದೂರಿನಲ್ಲಿ ತಿಳಿಸಲಾಗಿದೆ. ನಾಯಕ್ ಅವರ ಪತ್ನಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆಯ ನಂತರ, ನಾಯಕ್ ಅವರು ಅಂಗುಲ್ ಜಿಲ್ಲೆಯ ತಮ್ಮ ಸ್ಥಳೀಯ ಗ್ರಾಮದಲ್ಲಿಯೇ ವಾಸಿಸುತ್ತಿದ್ದಾರೆ. ಅವರು ಮನಗೆಗೆ ಹಿಂತಿರುಗಲು ಹೆದರುತ್ತಿದ್ದಾರೆ. ಒಂದು ವಾರದೊಳಗೆ ಮನೆ ಬಾಡಿಗೆ ಮನೆ ಖಾಲಿ ಮಾಡುವಂತೆ ಮಾಲೀಕರು ಒತ್ತಾಯಿಸಿದ ಬಳಿಕ ತಮ್ಮ ಪರಿಸ್ಥಿತಿ ಹದಗೆಟ್ಟಿದೆ ಎಂದು ಅವರ ಕುಟುಂಬ ತಿಳಿಸಿದೆ.

“ನನ್ನ ಸಹೋದರ ಎಂಟು ವರ್ಷಗಳ ಕಾಲ ಯಾವುದೇ ಸಮಸ್ಯೆಯಿಲ್ಲದೆ ವಾಸಿಸುತ್ತಿದ್ದ ಮನೆಯಿಂದ ಅದರ ಮಾಲೀಕರು ಹೊರಹೋಗುವಂತೆ ಒತ್ತಡ ಹಾಕುತ್ತಿದ್ದಾರೆ; ಅನಿವಾರ್ಯವಾಗಿ ನಾವು ಅಲ್ಲಿಂದ ಹೊರಟೆವು” ಎಂದು ನಾಯಕ್ ಅವರ ಹಿರಿಯ ಸಹೋದರ ಉದಯನಾಥ್ ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

“ಒಬ್ಬರ ಸ್ವಂತ ನಂಬಿಕೆಯನ್ನು ಪಾಲಿಸುವುದು ಪಾಪವೇ? ಈ ದೇಶದಲ್ಲಿ ಅದು ಮೂಲಭೂತ ಹಕ್ಕಲ್ಲವೇ” ಎಂದು ಪ್ರಶ್ನಿಸಿದ ಅವರು, ತನ್ನ ಸಹೋದರನನ್ನು ಗ್ರಾಮಸ್ಥರೊಬ್ಬರು ಅವರ ಆರೋಗ್ಯ ವೃದ್ಧಿಗಾಗಿ ಪ್ರಾರ್ಥಿಸಲು ಆಹ್ವಾನಿಸಿದ್ದರು, ಬಲವಂತದ ಧಾರ್ಮಿಕ ಮತಾಂತರ ಮಾಡಲು ಅಲ್ಲ ಎಂದು ಜೇಮ್ಸ್ ಆರೋಪಗಳನ್ನು ತಿರಸ್ಕರಿಸಿದರು.

“ಅವರು ಕಳೆದ ಎರಡು ವರ್ಷಗಳಿಂದ ಅಲ್ಲಿಗೆ ಪ್ರಾರ್ಥನೆ ಸಲ್ಲಿಸಲು ಮಾತ್ರ ಹೋಗುತ್ತಿದ್ದಾರೆ. ಈ ಆರೋಪಗಳು ಸುಳ್ಳು ಮತ್ತು ಪ್ರಕರಣವನ್ನು ದುರ್ಬಲಗೊಳಿಸುವ ಉದ್ದೇಶವನ್ನು ಹೊಂದಿವೆ” ಎಂದು ಅವರು ಹೇಳಿದರು.

ಘಟನೆಯ ಗಂಭೀರತೆಯ ಹೊರತಾಗಿಯೂ ಸ್ಥಳೀಯ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಲಿಲ್ಲ ಎಂದು ಕುಟುಂಬ ಆರೋಪಿಸಿದೆ. ದೂರಿನ ಪ್ರಕಾರ, ನಾಯಕ್ ಅವರ ಪತ್ನಿ ಹಲ್ಲೆ ನಡೆದ ಅರ್ಧ ಗಂಟೆಯೊಳಗೆ ಪೊಲೀಸ್ ಠಾಣೆಗೆ ತಲುಪಿದರು, ಆದರೆ ಪೊಲೀಸರು ತುರ್ತು ಕ್ರಮ ತೆಗೆದುಕೊಂಡಿಲ್ಲ.

“ಅಪರಾಧದ ಗಂಭೀರತೆಯ ಹೊರತಾಗಿಯೂ, ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದರು. ಅಧಿಕಾರಿಗಳು ಸ್ಥಳಕ್ಕೆ ತಲುಪುವ ಹೊತ್ತಿಗೆ, ನನ್ನ ಪತಿ ಈಗಾಗಲೇ ತೀವ್ರ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ಅನುಭವಿಸಿದ್ದರು” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕುಟುಂಬವು ಪೊಲೀಸ್ ವರಿಷ್ಠಾಧಿಕಾರಿಯನ್ನು ಸಂಪರ್ಕಿಸಿದ ನಂತರವೇ ಎಫ್‌ಐಆರ್ ದಾಖಲಿಸಲಾಗಿದೆ. ಧೆಂಕನಲ್ ಎಸ್‌ಪಿ ಅಭಿನವ್ ಸೋಂಕರ್ ಅವರು ಪರ್ಜಂಗ್ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್‌ಪೆಕ್ಟರ್‌ನಿಂದ ವಿವರಣೆ ಕೇಳಿದ್ದೇವೆ ಎಂದು ಹೇಳಿದರು. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು, ಇದುವರೆಗೆ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಹೇಳಿದರು.

ರಾಜಕೀಯ ಪ್ರತಿಕ್ರಿಯೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಹಲ್ಲೆಯನ್ನು ಖಂಡಿಸಿದರು. “ತೀವ್ರ ಅಮಾನವೀಯ ಕೃತ್ಯ” ಎಂದು ಕರೆದು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಅಸಹಿಷ್ಣುತೆಯ ವಾತಾವರಣವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಕೂಡ ದಾಳಿಯನ್ನು ಖಂಡಿಸಿದರು. ಇದು ಸಾಂವಿಧಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ, ಹೊಣೆಗಾರರಾದವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರಿಗೆ ಪತ್ರ ಬರೆದು, ಪಾದ್ರಿ ಮತ್ತು ಅವರ ಕುಟುಂಬಕ್ಕೆ ತಕ್ಷಣರಕ್ಷಣೆ ನೀಡುವಂತೆ ಕೋರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...