Homeಮುಖಪುಟಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ ಸ್ಥಳಾಂತರಗೊಂಡಿದೆ.

ಧೆಂಕನಾಲ್ ಜಿಲ್ಲೆಯ ಪರ್ಜಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂದರ್ಸಿಂಗ ಗ್ರಾಮದಲ್ಲಿ ಜನವರಿ 4 ರಂದು ಪಾದ್ರಿ ಬಿಪಿನ್ ಬಿಹಾರಿ ನಾಯಕ್ ಮೇಲೆ ಹಲ್ಲೆ ನಡೆಸಲಾಯಿತು. ಎಫ್‌ಐಆರ್ ಪ್ರಕಾರ, 15 ರಿಂದ 20 ಜನರ ಗುಂಪು ನಾಯಕ್ ಪ್ರಾರ್ಥನೆ ಸಲ್ಲಿಸುತ್ತಿದ್ದ ಮನೆಗೆ ಬಲವಂತವಾಗಿ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿತು.

ಪಾದ್ರಿಯನ್ನು ಥಳಿಸಿ, ಚಪ್ಪಲಿ ಹಾರ ಹಾಕಿ, ಗ್ರಾಮದಾದ್ಯಂತ ಮೆರವಣಿಗೆ ಮಾಡಿ, ಬಲವಂತವಾಗಿ ಕೊಳಕು ನೀರು ಕುಡಿಸಲಾಯಿತು. ಅವರ ಇಚ್ಛೆಗೆ ವಿರುದ್ಧವಾಗಿ ದೇವಾಲಯದ ಮುಂದೆ ನಮಸ್ಕರಿಸಲಾಯಿತು ಎಂದು ದೂರಿನಲ್ಲಿ ತಿಳಿಸಲಾಗಿದೆ. ನಾಯಕ್ ಅವರ ಪತ್ನಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆಯ ನಂತರ, ನಾಯಕ್ ಅವರು ಅಂಗುಲ್ ಜಿಲ್ಲೆಯ ತಮ್ಮ ಸ್ಥಳೀಯ ಗ್ರಾಮದಲ್ಲಿಯೇ ವಾಸಿಸುತ್ತಿದ್ದಾರೆ. ಅವರು ಮನಗೆಗೆ ಹಿಂತಿರುಗಲು ಹೆದರುತ್ತಿದ್ದಾರೆ. ಒಂದು ವಾರದೊಳಗೆ ಮನೆ ಬಾಡಿಗೆ ಮನೆ ಖಾಲಿ ಮಾಡುವಂತೆ ಮಾಲೀಕರು ಒತ್ತಾಯಿಸಿದ ಬಳಿಕ ತಮ್ಮ ಪರಿಸ್ಥಿತಿ ಹದಗೆಟ್ಟಿದೆ ಎಂದು ಅವರ ಕುಟುಂಬ ತಿಳಿಸಿದೆ.

“ನನ್ನ ಸಹೋದರ ಎಂಟು ವರ್ಷಗಳ ಕಾಲ ಯಾವುದೇ ಸಮಸ್ಯೆಯಿಲ್ಲದೆ ವಾಸಿಸುತ್ತಿದ್ದ ಮನೆಯಿಂದ ಅದರ ಮಾಲೀಕರು ಹೊರಹೋಗುವಂತೆ ಒತ್ತಡ ಹಾಕುತ್ತಿದ್ದಾರೆ; ಅನಿವಾರ್ಯವಾಗಿ ನಾವು ಅಲ್ಲಿಂದ ಹೊರಟೆವು” ಎಂದು ನಾಯಕ್ ಅವರ ಹಿರಿಯ ಸಹೋದರ ಉದಯನಾಥ್ ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

“ಒಬ್ಬರ ಸ್ವಂತ ನಂಬಿಕೆಯನ್ನು ಪಾಲಿಸುವುದು ಪಾಪವೇ? ಈ ದೇಶದಲ್ಲಿ ಅದು ಮೂಲಭೂತ ಹಕ್ಕಲ್ಲವೇ” ಎಂದು ಪ್ರಶ್ನಿಸಿದ ಅವರು, ತನ್ನ ಸಹೋದರನನ್ನು ಗ್ರಾಮಸ್ಥರೊಬ್ಬರು ಅವರ ಆರೋಗ್ಯ ವೃದ್ಧಿಗಾಗಿ ಪ್ರಾರ್ಥಿಸಲು ಆಹ್ವಾನಿಸಿದ್ದರು, ಬಲವಂತದ ಧಾರ್ಮಿಕ ಮತಾಂತರ ಮಾಡಲು ಅಲ್ಲ ಎಂದು ಜೇಮ್ಸ್ ಆರೋಪಗಳನ್ನು ತಿರಸ್ಕರಿಸಿದರು.

“ಅವರು ಕಳೆದ ಎರಡು ವರ್ಷಗಳಿಂದ ಅಲ್ಲಿಗೆ ಪ್ರಾರ್ಥನೆ ಸಲ್ಲಿಸಲು ಮಾತ್ರ ಹೋಗುತ್ತಿದ್ದಾರೆ. ಈ ಆರೋಪಗಳು ಸುಳ್ಳು ಮತ್ತು ಪ್ರಕರಣವನ್ನು ದುರ್ಬಲಗೊಳಿಸುವ ಉದ್ದೇಶವನ್ನು ಹೊಂದಿವೆ” ಎಂದು ಅವರು ಹೇಳಿದರು.

ಘಟನೆಯ ಗಂಭೀರತೆಯ ಹೊರತಾಗಿಯೂ ಸ್ಥಳೀಯ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಲಿಲ್ಲ ಎಂದು ಕುಟುಂಬ ಆರೋಪಿಸಿದೆ. ದೂರಿನ ಪ್ರಕಾರ, ನಾಯಕ್ ಅವರ ಪತ್ನಿ ಹಲ್ಲೆ ನಡೆದ ಅರ್ಧ ಗಂಟೆಯೊಳಗೆ ಪೊಲೀಸ್ ಠಾಣೆಗೆ ತಲುಪಿದರು, ಆದರೆ ಪೊಲೀಸರು ತುರ್ತು ಕ್ರಮ ತೆಗೆದುಕೊಂಡಿಲ್ಲ.

“ಅಪರಾಧದ ಗಂಭೀರತೆಯ ಹೊರತಾಗಿಯೂ, ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದರು. ಅಧಿಕಾರಿಗಳು ಸ್ಥಳಕ್ಕೆ ತಲುಪುವ ಹೊತ್ತಿಗೆ, ನನ್ನ ಪತಿ ಈಗಾಗಲೇ ತೀವ್ರ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ಅನುಭವಿಸಿದ್ದರು” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕುಟುಂಬವು ಪೊಲೀಸ್ ವರಿಷ್ಠಾಧಿಕಾರಿಯನ್ನು ಸಂಪರ್ಕಿಸಿದ ನಂತರವೇ ಎಫ್‌ಐಆರ್ ದಾಖಲಿಸಲಾಗಿದೆ. ಧೆಂಕನಲ್ ಎಸ್‌ಪಿ ಅಭಿನವ್ ಸೋಂಕರ್ ಅವರು ಪರ್ಜಂಗ್ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್‌ಪೆಕ್ಟರ್‌ನಿಂದ ವಿವರಣೆ ಕೇಳಿದ್ದೇವೆ ಎಂದು ಹೇಳಿದರು. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು, ಇದುವರೆಗೆ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಹೇಳಿದರು.

ರಾಜಕೀಯ ಪ್ರತಿಕ್ರಿಯೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಹಲ್ಲೆಯನ್ನು ಖಂಡಿಸಿದರು. “ತೀವ್ರ ಅಮಾನವೀಯ ಕೃತ್ಯ” ಎಂದು ಕರೆದು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಅಸಹಿಷ್ಣುತೆಯ ವಾತಾವರಣವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಕೂಡ ದಾಳಿಯನ್ನು ಖಂಡಿಸಿದರು. ಇದು ಸಾಂವಿಧಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ, ಹೊಣೆಗಾರರಾದವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರಿಗೆ ಪತ್ರ ಬರೆದು, ಪಾದ್ರಿ ಮತ್ತು ಅವರ ಕುಟುಂಬಕ್ಕೆ ತಕ್ಷಣರಕ್ಷಣೆ ನೀಡುವಂತೆ ಕೋರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...