Homeಮುಖಪುಟಒಡಿಶಾ| ರಜೆ ಕೋರಿಕೆ ನಿರಾಕರಿಸಿದ ಪ್ರಾಂಶುಪಾಲರು; ಡ್ರಿಪ್‌ನೊಂದಿಗೆ ಶಾಲೆಗೆ ಆಗಮಿಸಿದ ಶಿಕ್ಷಕ

ಒಡಿಶಾ| ರಜೆ ಕೋರಿಕೆ ನಿರಾಕರಿಸಿದ ಪ್ರಾಂಶುಪಾಲರು; ಡ್ರಿಪ್‌ನೊಂದಿಗೆ ಶಾಲೆಗೆ ಆಗಮಿಸಿದ ಶಿಕ್ಷಕ

- Advertisement -
- Advertisement -

ನಿರಂತರ ಮನವಿಗಳ ಹೊರತಾಗಿಯೂ ರಜೆ ಕೋರಿಕೆ ನಿರಾಕರಿಸಿದ ನಂತರ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದದ್ದ ಶಾಲಾ ಶಿಕ್ಷಕರೊಬ್ಬರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಾಯಿಸಲಾಗಿದೆ. ಶಿಕ್ಷಕ ಪ್ರಕಾಶ್ ಭೋಯ್ ಬೇರೆ ದಾರಿಯಿಲ್ಲದೆ ಕೈಗೆ ಡ್ರಿಪ್‌ (ಔಷಧ) ಅಳವಡಿಸಿಕೊಂಡು ಶಾಲೆಗೆ ಆಗಮಿಸಿದ ಘಟನೆ ಒಡಿಶಾದಲ್ಲಿ ನಡೆದಿದೆ.

ಅಜ್ಜನ ಅಂತ್ಯಕ್ರಿಯೆಯ ನಂತರ ತಾನು ಅಸ್ವಸ್ಥಳಾಗಿದ್ದೇನೆ, ಕರ್ತವ್ಯಕ್ಕೆ ರಜೆ ಕೋರಿದ್ದೇನೆ ಎಂದು ಭೋಯ್ ಹೇಳಿದರು. ಆದರೆ, ಪ್ರಾಂಶುಪಾಲರಾದ ಬಿಜಯಲಕ್ಷ್ಮಿ ಪ್ರಧಾನ್ ಅವರ ವಿನಂತಿಯನ್ನು ನಿರಾಕರಿಸಿದರು. ಬೋಲಂಗಿರ್‌ನ ಶಾಲೆಯೊಂದರ ಗಣಿತ ಶಿಕ್ಷಕ ಭೋಯ್, ಆರ್ಥಿಕ ತೊಂದರೆಯಿಂದಾಗಿ ಯಾವುದೇ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಕೆಲಸಕ್ಕೆ ಹೋಗುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳಿದರು.

ಜಿಲ್ಲಾ ಶಿಕ್ಷಣ ಅಧಿಕಾರಿ ಮತ್ತು ಜಿಲ್ಲಾ ಯೋಜನಾ ಸಂಯೋಜಕರನ್ನು ಭೇಟಿ ಮಾಡಲು ಶಾಲಾ ಪ್ರಾಂಶುಪಾಲರು ನಿರ್ದೇಶಿಸಿದ್ದಾರೆ ಎಂದು ಭೋಯ್ ಹೇಳಿಕೊಂಡಿದ್ದಾರೆ.

ಭೋಯ್ ಪ್ರಕಾರ, ಮಧ್ಯಾಹ್ನ ಡಿಪಿಸಿ ಕಚೇರಿ ತಲುಪಿದಾಗ ಅವರ ಸ್ಥಿತಿ ಹದಗೆಟ್ಟಿತು. ಆಸ್ಪತ್ರೆಗೆ ಭೇಟಿ ನೀಡಲು ಅನುಮತಿ ಕೋರಿದಾಗ, ಪ್ರಾಂಶುಪಾಲರು ಮಧ್ಯಾಹ್ನ 2 ಗಂಟೆಯೊಳಗೆ ಹಿಂತಿರುಗಬಹುದೇ ಎಂದು ಕೇಳಿದರು. “ಸರ್ಕಾರಿ ಆಸ್ಪತ್ರೆ ದೂರದಲ್ಲಿತ್ತು, ನನ್ನ ಬಳಿ ಖಾಸಗಿ ಆಸ್ಪತ್ರೆಗೆ ತೆರಳಲು ಹಣವಿರಲಿಲ್ಲ. ನನ್ನ ಯುಪಿಐ ಕೂಡ ಕೆಲಸ ಮಾಡುತ್ತಿರಲಿಲ್ಲ. ಆದ್ದರಿಂದ, ಯಾವುದೇ ಚಿಕಿತ್ಸೆ ಇಲ್ಲದೆ, ನಾನು ಕಚೇರಿಗೆ ಹಿಂತಿರುಗಿ ಸಂಜೆಯವರೆಗೂ ಕೆಲಸ ಮುಂದುವರಿಸಿದೆ. ಹಲವು ಬಾರಿ ವಿನಂತಿಸಿದರೂ, ಪ್ರಾಂಶುಪಾಲರು ನನಗೆ ರಜೆ ನೀಡಲು ನಿರಾಕರಿಸಿದರು” ಎಂದು ಭೋಯ್ ಹೇಳಿದರು.

ರಾತ್ರಿಯಲ್ಲಿ ಔಷಧ ಸೇವಿಸಿದ ನಂತರವೂ ಭೋಯ್ ಅವರ ಆರೋಗ್ಯ ಸುಧಾರಿಸಲಿಲ್ಲ. ಮರುದಿನ, ಅವರು ಮತ್ತೆ ರಜೆ ಕೋರಿದಾಗ, ಪ್ರಾಂಶುಪಾಲರು ಅದನ್ನು ನಿರಾಕರಿಸಿದರು. ಪರೀಕ್ಷಾ ಸಿದ್ಧತೆಗಳಿಗೆ ಅವರ ಉಪಸ್ಥಿತಿ ಅಗತ್ಯ ಎಂದು ಒತ್ತಾಯಿಸಿದರು. ಬೇರೆ ದಾರಿಯಿಲ್ಲದೆ, ಅವರು ವೈದ್ಯರಿಂದ ಡ್ರಿಪ್ ಪಡೆದರು. ಗಂಭೀರ ಸ್ಥಿತಿಯಲ್ಲಿ ಶಾಲೆಗೆ ವರದಿ ಮಾಡಿದರು. ಅವರ ಆರೋಗ್ಯ ಹದಗೆಡುತ್ತಿರುವುದನ್ನು ನೋಡಿ, ಭೋಯ್ ಅವರ ಸಹೋದ್ಯೋಗಿಗಳು ತಕ್ಷಣ ಅವರನ್ನು ಆಸ್ಪತ್ರೆಗೆ ಕಳುಹಿಸಿದರು.

ಘಟನೆಗೆ ಪ್ರತಿಕ್ರಿಯಿಸಿದ ಪಟ್ನಗಢ ಬ್ಲಾಕ್ ಶಿಕ್ಷಣ ಅಧಿಕಾರಿ (ಬಿಇಒ) ಪ್ರಸಾದ್ ಮಾಝಿ, “ಸಂಬಂಧಪಟ್ಟ ಶಿಕ್ಷಕರು ಹಿರಿಯ ಅಧಿಕಾರಿಗಳಿಗೆ ಸಾಂದರ್ಭಿಕ ರಜೆಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈಗ ಶಿಕ್ಷಕರು ರಜೆ ತೆಗೆದುಕೊಳ್ಳಲು ಅನುಮತಿ ನೀಡಲಾಗಿಲ್ಲ ಎಂದು ದೂರುತ್ತಿದ್ದಾರೆ. ನಾವು ಈ ವಿಷಯದ ಬಗ್ಗೆ ವಿಚಾರಣೆ ನಡೆಸುತ್ತಿದ್ದೇವೆ ಮತ್ತು ಸಂಬಂಧಪಟ್ಟ ಅಧಿಕಾರಿ ತಪ್ಪಿತಸ್ಥರೆಂದು ಕಂಡುಬಂದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದರು.

ಗುಜರಾತ್| ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...