Homeಚಳವಳಿಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

- Advertisement -
- Advertisement -

ತಮ್ಮ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ಉಳಿಸಿಕೊಳ್ಳಲು ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್‌ಡಬ್ಲ್ಯು) ಲಿಮಿಟೆಡ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಮಾರಣಾಂತಿಕವಾಗಿ ಲಾಠಿ ಚಾರ್ಜ್ ನಡೆಸಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾ ಗ್ರಾಮದಲ್ಲಿ ನಡೆದಿದೆ.

ಧಿಂಕಿಯಾ, ನುಗಾಂವ್ ಮತ್ತು ಗಡಕುಜಾಂಗ್‌ನ ಕಡಲತೀರದ ಗ್ರಾಮ ಪಂಚಾಯತ್‌ಗಳಲ್ಲಿ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯೂಗೆ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ನೀಡುವ ಒಡಿಶಾ ಸರ್ಕಾರದ ಯೋಜನೆಯನ್ನು ಹಲವಾರು ಗ್ರಾಮಸ್ಥರು ವಿರೋಧಿಸುತ್ತಿದ್ದಾರೆ. ಜನವರಿ 14 ರಂದು ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾದಲ್ಲಿ ತೋಟಗಳನ್ನು ಕೆಡವದಂತೆ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಮಹಿಳೆಯರು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಗ್ರಾಮಸ್ಥರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹೆಚ್ಚಿನ ಸಂಖ್ಯೆಯ ಶಸ್ತ್ರಸಜ್ಜಿತ ಪೊಲೀಸರು ಜನವರಿ 14 ರಂದು ಗ್ರಾಮಸ್ಥರು ನಿರ್ಮಿಸಿದ್ದ ಮರದ ಬ್ಯಾರಿಕೇಡ್‌ಗಳನ್ನು ಮುರಿದು ಧಿಂಕಿಯಾ ಗ್ರಾಮವನ್ನು ಪ್ರವೇಶಿಸಿದ್ದರು. ಪೊಲೀಸರು ಮತ್ತು ಅಧಿಕಾರಿಗಳ ಗ್ರಾಮ ಪ್ರವೇಶವನ್ನು ತಡೆಯಲು ಜೆಎಸ್‌ಡಬ್ಲ್ಯೂ ಪ್ರತಿರೋಧ್ ಸಂಗ್ರಾಮ್ ಸಮಿತಿಯ ಮುಖಂಡರು ಮಹಿಳೆಯರು ಮತ್ತು ಮಕ್ಕಳನ್ನು ಮುಂದೆ ನಿಲ್ಲಿಸಿದ್ದರು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಆದರೆ, ಪ್ರತಿಭಟನಾಕಾರರನ್ನು ಚದುರಿಸಲು ಸಶಸ್ತ್ರ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇದರಿಂದ ಹಲವರು ಗಾಯಗೊಂಡಿದ್ದಾರೆ ಎಂದು ಧಿಂಕಿಯಾ ನಿವಾಸಿ ಗಣೇಶ್ ದಾಸ್ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಮತ್ತು ಅದರ ಶಸ್ತ್ರಸಜ್ಜಿತ ಪೊಲೀಸರು ಜೆಎಸ್‌ಡಬ್ಲ್ಯೂ ಜನರೊಂದಿಗೆಗೆ ಕೈಜೋಡಿಸಿ ಈ ಪ್ರದೇಶದಲ್ಲಿ ಜನರನ್ನು ಭಯಭೀತಗೊಳಿಸುತ್ತಿದ್ದಾರೆ. ಅವರು ಅನೇಕ ಹಳ್ಳಿಗರ ವೀಳ್ಯದೆಲೆ ತೋಟಗಳನ್ನು ಅಕ್ರಮವಾಗಿ ನೆಲಸಮಗೊಳಿಸಿದ್ದಾರೆ. ಆದರೆ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯುಗೆ ನಾವು ನಮ್ಮ ಒಂದು ಇಂಚು ಭೂಮಿಯನ್ನು ನೀಡುವುದಿಲ್ಲ” ಎಂದು ಧಿಂಕಿಯಾದ ರೈತ ಅನಿಲ್ ಬೆಹೆರಾ ಹೇಳಿದ್ದಾರೆ. ಪೋಲೀಸರ ದೌರ್ಜನ್ಯದ ವಿರುದ್ಧ ಕಿಡಿಕಾರಿದ್ದಾರೆ.

“ಜನವರಿ 14 ರಂದು, ಕನಿಷ್ಠ 500 ಗ್ರಾಮಸ್ಥರು ಅದರಲ್ಲೂ ಹೆಚ್ಚಾಗಿ ಮಹಿಳೆಯರು, ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು, ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ವೀಳ್ಯದೆಲೆ ಬಳ್ಳಿ ಕಿತ್ತು ಹಾಕುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ. ಈ ಭಾಗದಲ್ಲಿ ಸ್ಟೀಲ್ ಪ್ಲಾಂಟ್ ಸ್ಥಾಪನೆಗೆ ಹಲವರು ಒಲವು ತೋರಿದ್ದಾರೆ. ಆದರೆ ಕೆಲವು ಜನರು ಧಿಂಕಿಯಾದಲ್ಲಿ ತೊಂದರೆಯನ್ನುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಎರಸಮ ಬ್ಲಾಕ್‌ನ ತಹಸೀಲ್ದಾರ್ ಪ್ರಜ್ಞಾನಂದ ದಾಸ್ ಹೇಳಿದ್ದಾರೆ.

ಜಗತ್‌ಸಿಂಗ್‌ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮೇಶ್ ಪಾಂಡಾ ಮಾತನಾಡಿ, ಸರ್ಕಾರಿ ಜಮೀನುಗಳಲ್ಲಿರುವ ವೀಳ್ಯದೆಲೆ ತೋಟಗಳನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವಂತೆ ಆಡಳಿತವು ಎಲ್ಲಾ ವೀಳ್ಯದೆಲೆ ರೈತರಿಗೆ ಜನವರಿ 14 ರಂದು ಮನವಿ ಮಾಡಿದೆ. ದಿಂಕಿಯಾದಲ್ಲಿ ನಡೆಯುತ್ತಿದ್ದ ಭೂಸ್ವಾಧೀನ ಕಾಮಗಾರಿಯನ್ನು ಕೆಲವು ದುರುದ್ದೇಶದಿಂದ ವಿರೋಧಿಸಿದ್ದಾರೆ, ಇದಕ್ಕಾಗಿ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರತಿಭಟನಾಕಾರರು ದಳಿ ನಡೆಸಿದ್ದರಿಂದ ಕೆಲವು ಪೊಲೀಸರಿಗೆ ಗಾಯಗಳಾಗಿವೆ” ಎಂದಿದ್ದಾರೆ.

ಗ್ರಾಮಸ್ಥರು ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಗಳ ಬಳಿಕ ಶನಿವಾರದಿಂದ ಗ್ರಾಮದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಲವು ಭೂಸ್ವಾಧೀನ ವಿರೋಧಿ ಗ್ರಾಮಸ್ಥರ ಬೆದರಿಕೆಯ ದೃಷ್ಟಿಯಿಂದ ಸುಗಮವಾಗಿ ಭೂಸ್ವಾಧೀನ ಕಾರ್ಯ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಉದ್ದೇಶಿತ ಉಕ್ಕಿನ ಸ್ಥಾವರದ ಸ್ಥಳದಲ್ಲಿ 12 ಪೊಲೀಸರ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಪಾಂಡಾ ಹೇಳಿದ್ದಾರೆ.


ಇದನ್ನೂ ಓದಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...