Homeಚಳವಳಿಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

- Advertisement -
- Advertisement -

ತಮ್ಮ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ಉಳಿಸಿಕೊಳ್ಳಲು ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್‌ಡಬ್ಲ್ಯು) ಲಿಮಿಟೆಡ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಮಾರಣಾಂತಿಕವಾಗಿ ಲಾಠಿ ಚಾರ್ಜ್ ನಡೆಸಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾ ಗ್ರಾಮದಲ್ಲಿ ನಡೆದಿದೆ.

ಧಿಂಕಿಯಾ, ನುಗಾಂವ್ ಮತ್ತು ಗಡಕುಜಾಂಗ್‌ನ ಕಡಲತೀರದ ಗ್ರಾಮ ಪಂಚಾಯತ್‌ಗಳಲ್ಲಿ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯೂಗೆ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ನೀಡುವ ಒಡಿಶಾ ಸರ್ಕಾರದ ಯೋಜನೆಯನ್ನು ಹಲವಾರು ಗ್ರಾಮಸ್ಥರು ವಿರೋಧಿಸುತ್ತಿದ್ದಾರೆ. ಜನವರಿ 14 ರಂದು ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾದಲ್ಲಿ ತೋಟಗಳನ್ನು ಕೆಡವದಂತೆ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಮಹಿಳೆಯರು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಗ್ರಾಮಸ್ಥರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹೆಚ್ಚಿನ ಸಂಖ್ಯೆಯ ಶಸ್ತ್ರಸಜ್ಜಿತ ಪೊಲೀಸರು ಜನವರಿ 14 ರಂದು ಗ್ರಾಮಸ್ಥರು ನಿರ್ಮಿಸಿದ್ದ ಮರದ ಬ್ಯಾರಿಕೇಡ್‌ಗಳನ್ನು ಮುರಿದು ಧಿಂಕಿಯಾ ಗ್ರಾಮವನ್ನು ಪ್ರವೇಶಿಸಿದ್ದರು. ಪೊಲೀಸರು ಮತ್ತು ಅಧಿಕಾರಿಗಳ ಗ್ರಾಮ ಪ್ರವೇಶವನ್ನು ತಡೆಯಲು ಜೆಎಸ್‌ಡಬ್ಲ್ಯೂ ಪ್ರತಿರೋಧ್ ಸಂಗ್ರಾಮ್ ಸಮಿತಿಯ ಮುಖಂಡರು ಮಹಿಳೆಯರು ಮತ್ತು ಮಕ್ಕಳನ್ನು ಮುಂದೆ ನಿಲ್ಲಿಸಿದ್ದರು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಆದರೆ, ಪ್ರತಿಭಟನಾಕಾರರನ್ನು ಚದುರಿಸಲು ಸಶಸ್ತ್ರ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇದರಿಂದ ಹಲವರು ಗಾಯಗೊಂಡಿದ್ದಾರೆ ಎಂದು ಧಿಂಕಿಯಾ ನಿವಾಸಿ ಗಣೇಶ್ ದಾಸ್ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಮತ್ತು ಅದರ ಶಸ್ತ್ರಸಜ್ಜಿತ ಪೊಲೀಸರು ಜೆಎಸ್‌ಡಬ್ಲ್ಯೂ ಜನರೊಂದಿಗೆಗೆ ಕೈಜೋಡಿಸಿ ಈ ಪ್ರದೇಶದಲ್ಲಿ ಜನರನ್ನು ಭಯಭೀತಗೊಳಿಸುತ್ತಿದ್ದಾರೆ. ಅವರು ಅನೇಕ ಹಳ್ಳಿಗರ ವೀಳ್ಯದೆಲೆ ತೋಟಗಳನ್ನು ಅಕ್ರಮವಾಗಿ ನೆಲಸಮಗೊಳಿಸಿದ್ದಾರೆ. ಆದರೆ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯುಗೆ ನಾವು ನಮ್ಮ ಒಂದು ಇಂಚು ಭೂಮಿಯನ್ನು ನೀಡುವುದಿಲ್ಲ” ಎಂದು ಧಿಂಕಿಯಾದ ರೈತ ಅನಿಲ್ ಬೆಹೆರಾ ಹೇಳಿದ್ದಾರೆ. ಪೋಲೀಸರ ದೌರ್ಜನ್ಯದ ವಿರುದ್ಧ ಕಿಡಿಕಾರಿದ್ದಾರೆ.

“ಜನವರಿ 14 ರಂದು, ಕನಿಷ್ಠ 500 ಗ್ರಾಮಸ್ಥರು ಅದರಲ್ಲೂ ಹೆಚ್ಚಾಗಿ ಮಹಿಳೆಯರು, ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು, ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ವೀಳ್ಯದೆಲೆ ಬಳ್ಳಿ ಕಿತ್ತು ಹಾಕುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ. ಈ ಭಾಗದಲ್ಲಿ ಸ್ಟೀಲ್ ಪ್ಲಾಂಟ್ ಸ್ಥಾಪನೆಗೆ ಹಲವರು ಒಲವು ತೋರಿದ್ದಾರೆ. ಆದರೆ ಕೆಲವು ಜನರು ಧಿಂಕಿಯಾದಲ್ಲಿ ತೊಂದರೆಯನ್ನುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಎರಸಮ ಬ್ಲಾಕ್‌ನ ತಹಸೀಲ್ದಾರ್ ಪ್ರಜ್ಞಾನಂದ ದಾಸ್ ಹೇಳಿದ್ದಾರೆ.

ಜಗತ್‌ಸಿಂಗ್‌ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮೇಶ್ ಪಾಂಡಾ ಮಾತನಾಡಿ, ಸರ್ಕಾರಿ ಜಮೀನುಗಳಲ್ಲಿರುವ ವೀಳ್ಯದೆಲೆ ತೋಟಗಳನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವಂತೆ ಆಡಳಿತವು ಎಲ್ಲಾ ವೀಳ್ಯದೆಲೆ ರೈತರಿಗೆ ಜನವರಿ 14 ರಂದು ಮನವಿ ಮಾಡಿದೆ. ದಿಂಕಿಯಾದಲ್ಲಿ ನಡೆಯುತ್ತಿದ್ದ ಭೂಸ್ವಾಧೀನ ಕಾಮಗಾರಿಯನ್ನು ಕೆಲವು ದುರುದ್ದೇಶದಿಂದ ವಿರೋಧಿಸಿದ್ದಾರೆ, ಇದಕ್ಕಾಗಿ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರತಿಭಟನಾಕಾರರು ದಳಿ ನಡೆಸಿದ್ದರಿಂದ ಕೆಲವು ಪೊಲೀಸರಿಗೆ ಗಾಯಗಳಾಗಿವೆ” ಎಂದಿದ್ದಾರೆ.

ಗ್ರಾಮಸ್ಥರು ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಗಳ ಬಳಿಕ ಶನಿವಾರದಿಂದ ಗ್ರಾಮದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಲವು ಭೂಸ್ವಾಧೀನ ವಿರೋಧಿ ಗ್ರಾಮಸ್ಥರ ಬೆದರಿಕೆಯ ದೃಷ್ಟಿಯಿಂದ ಸುಗಮವಾಗಿ ಭೂಸ್ವಾಧೀನ ಕಾರ್ಯ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಉದ್ದೇಶಿತ ಉಕ್ಕಿನ ಸ್ಥಾವರದ ಸ್ಥಳದಲ್ಲಿ 12 ಪೊಲೀಸರ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಪಾಂಡಾ ಹೇಳಿದ್ದಾರೆ.


ಇದನ್ನೂ ಓದಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...