Homeಚಳವಳಿಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

- Advertisement -
- Advertisement -

ತಮ್ಮ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ಉಳಿಸಿಕೊಳ್ಳಲು ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್‌ಡಬ್ಲ್ಯು) ಲಿಮಿಟೆಡ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಮಾರಣಾಂತಿಕವಾಗಿ ಲಾಠಿ ಚಾರ್ಜ್ ನಡೆಸಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾ ಗ್ರಾಮದಲ್ಲಿ ನಡೆದಿದೆ.

ಧಿಂಕಿಯಾ, ನುಗಾಂವ್ ಮತ್ತು ಗಡಕುಜಾಂಗ್‌ನ ಕಡಲತೀರದ ಗ್ರಾಮ ಪಂಚಾಯತ್‌ಗಳಲ್ಲಿ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯೂಗೆ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ನೀಡುವ ಒಡಿಶಾ ಸರ್ಕಾರದ ಯೋಜನೆಯನ್ನು ಹಲವಾರು ಗ್ರಾಮಸ್ಥರು ವಿರೋಧಿಸುತ್ತಿದ್ದಾರೆ. ಜನವರಿ 14 ರಂದು ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾದಲ್ಲಿ ತೋಟಗಳನ್ನು ಕೆಡವದಂತೆ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಮಹಿಳೆಯರು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಗ್ರಾಮಸ್ಥರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹೆಚ್ಚಿನ ಸಂಖ್ಯೆಯ ಶಸ್ತ್ರಸಜ್ಜಿತ ಪೊಲೀಸರು ಜನವರಿ 14 ರಂದು ಗ್ರಾಮಸ್ಥರು ನಿರ್ಮಿಸಿದ್ದ ಮರದ ಬ್ಯಾರಿಕೇಡ್‌ಗಳನ್ನು ಮುರಿದು ಧಿಂಕಿಯಾ ಗ್ರಾಮವನ್ನು ಪ್ರವೇಶಿಸಿದ್ದರು. ಪೊಲೀಸರು ಮತ್ತು ಅಧಿಕಾರಿಗಳ ಗ್ರಾಮ ಪ್ರವೇಶವನ್ನು ತಡೆಯಲು ಜೆಎಸ್‌ಡಬ್ಲ್ಯೂ ಪ್ರತಿರೋಧ್ ಸಂಗ್ರಾಮ್ ಸಮಿತಿಯ ಮುಖಂಡರು ಮಹಿಳೆಯರು ಮತ್ತು ಮಕ್ಕಳನ್ನು ಮುಂದೆ ನಿಲ್ಲಿಸಿದ್ದರು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಆದರೆ, ಪ್ರತಿಭಟನಾಕಾರರನ್ನು ಚದುರಿಸಲು ಸಶಸ್ತ್ರ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇದರಿಂದ ಹಲವರು ಗಾಯಗೊಂಡಿದ್ದಾರೆ ಎಂದು ಧಿಂಕಿಯಾ ನಿವಾಸಿ ಗಣೇಶ್ ದಾಸ್ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಮತ್ತು ಅದರ ಶಸ್ತ್ರಸಜ್ಜಿತ ಪೊಲೀಸರು ಜೆಎಸ್‌ಡಬ್ಲ್ಯೂ ಜನರೊಂದಿಗೆಗೆ ಕೈಜೋಡಿಸಿ ಈ ಪ್ರದೇಶದಲ್ಲಿ ಜನರನ್ನು ಭಯಭೀತಗೊಳಿಸುತ್ತಿದ್ದಾರೆ. ಅವರು ಅನೇಕ ಹಳ್ಳಿಗರ ವೀಳ್ಯದೆಲೆ ತೋಟಗಳನ್ನು ಅಕ್ರಮವಾಗಿ ನೆಲಸಮಗೊಳಿಸಿದ್ದಾರೆ. ಆದರೆ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯುಗೆ ನಾವು ನಮ್ಮ ಒಂದು ಇಂಚು ಭೂಮಿಯನ್ನು ನೀಡುವುದಿಲ್ಲ” ಎಂದು ಧಿಂಕಿಯಾದ ರೈತ ಅನಿಲ್ ಬೆಹೆರಾ ಹೇಳಿದ್ದಾರೆ. ಪೋಲೀಸರ ದೌರ್ಜನ್ಯದ ವಿರುದ್ಧ ಕಿಡಿಕಾರಿದ್ದಾರೆ.

“ಜನವರಿ 14 ರಂದು, ಕನಿಷ್ಠ 500 ಗ್ರಾಮಸ್ಥರು ಅದರಲ್ಲೂ ಹೆಚ್ಚಾಗಿ ಮಹಿಳೆಯರು, ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು, ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ವೀಳ್ಯದೆಲೆ ಬಳ್ಳಿ ಕಿತ್ತು ಹಾಕುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ. ಈ ಭಾಗದಲ್ಲಿ ಸ್ಟೀಲ್ ಪ್ಲಾಂಟ್ ಸ್ಥಾಪನೆಗೆ ಹಲವರು ಒಲವು ತೋರಿದ್ದಾರೆ. ಆದರೆ ಕೆಲವು ಜನರು ಧಿಂಕಿಯಾದಲ್ಲಿ ತೊಂದರೆಯನ್ನುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಎರಸಮ ಬ್ಲಾಕ್‌ನ ತಹಸೀಲ್ದಾರ್ ಪ್ರಜ್ಞಾನಂದ ದಾಸ್ ಹೇಳಿದ್ದಾರೆ.

ಜಗತ್‌ಸಿಂಗ್‌ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮೇಶ್ ಪಾಂಡಾ ಮಾತನಾಡಿ, ಸರ್ಕಾರಿ ಜಮೀನುಗಳಲ್ಲಿರುವ ವೀಳ್ಯದೆಲೆ ತೋಟಗಳನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವಂತೆ ಆಡಳಿತವು ಎಲ್ಲಾ ವೀಳ್ಯದೆಲೆ ರೈತರಿಗೆ ಜನವರಿ 14 ರಂದು ಮನವಿ ಮಾಡಿದೆ. ದಿಂಕಿಯಾದಲ್ಲಿ ನಡೆಯುತ್ತಿದ್ದ ಭೂಸ್ವಾಧೀನ ಕಾಮಗಾರಿಯನ್ನು ಕೆಲವು ದುರುದ್ದೇಶದಿಂದ ವಿರೋಧಿಸಿದ್ದಾರೆ, ಇದಕ್ಕಾಗಿ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರತಿಭಟನಾಕಾರರು ದಳಿ ನಡೆಸಿದ್ದರಿಂದ ಕೆಲವು ಪೊಲೀಸರಿಗೆ ಗಾಯಗಳಾಗಿವೆ” ಎಂದಿದ್ದಾರೆ.

ಗ್ರಾಮಸ್ಥರು ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಗಳ ಬಳಿಕ ಶನಿವಾರದಿಂದ ಗ್ರಾಮದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಲವು ಭೂಸ್ವಾಧೀನ ವಿರೋಧಿ ಗ್ರಾಮಸ್ಥರ ಬೆದರಿಕೆಯ ದೃಷ್ಟಿಯಿಂದ ಸುಗಮವಾಗಿ ಭೂಸ್ವಾಧೀನ ಕಾರ್ಯ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಉದ್ದೇಶಿತ ಉಕ್ಕಿನ ಸ್ಥಾವರದ ಸ್ಥಳದಲ್ಲಿ 12 ಪೊಲೀಸರ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಪಾಂಡಾ ಹೇಳಿದ್ದಾರೆ.


ಇದನ್ನೂ ಓದಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...