Homeಚಳವಳಿಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

- Advertisement -
- Advertisement -

ತಮ್ಮ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ಉಳಿಸಿಕೊಳ್ಳಲು ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್‌ಡಬ್ಲ್ಯು) ಲಿಮಿಟೆಡ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಮಾರಣಾಂತಿಕವಾಗಿ ಲಾಠಿ ಚಾರ್ಜ್ ನಡೆಸಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾ ಗ್ರಾಮದಲ್ಲಿ ನಡೆದಿದೆ.

ಧಿಂಕಿಯಾ, ನುಗಾಂವ್ ಮತ್ತು ಗಡಕುಜಾಂಗ್‌ನ ಕಡಲತೀರದ ಗ್ರಾಮ ಪಂಚಾಯತ್‌ಗಳಲ್ಲಿ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯೂಗೆ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ನೀಡುವ ಒಡಿಶಾ ಸರ್ಕಾರದ ಯೋಜನೆಯನ್ನು ಹಲವಾರು ಗ್ರಾಮಸ್ಥರು ವಿರೋಧಿಸುತ್ತಿದ್ದಾರೆ. ಜನವರಿ 14 ರಂದು ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾದಲ್ಲಿ ತೋಟಗಳನ್ನು ಕೆಡವದಂತೆ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಮಹಿಳೆಯರು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಗ್ರಾಮಸ್ಥರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹೆಚ್ಚಿನ ಸಂಖ್ಯೆಯ ಶಸ್ತ್ರಸಜ್ಜಿತ ಪೊಲೀಸರು ಜನವರಿ 14 ರಂದು ಗ್ರಾಮಸ್ಥರು ನಿರ್ಮಿಸಿದ್ದ ಮರದ ಬ್ಯಾರಿಕೇಡ್‌ಗಳನ್ನು ಮುರಿದು ಧಿಂಕಿಯಾ ಗ್ರಾಮವನ್ನು ಪ್ರವೇಶಿಸಿದ್ದರು. ಪೊಲೀಸರು ಮತ್ತು ಅಧಿಕಾರಿಗಳ ಗ್ರಾಮ ಪ್ರವೇಶವನ್ನು ತಡೆಯಲು ಜೆಎಸ್‌ಡಬ್ಲ್ಯೂ ಪ್ರತಿರೋಧ್ ಸಂಗ್ರಾಮ್ ಸಮಿತಿಯ ಮುಖಂಡರು ಮಹಿಳೆಯರು ಮತ್ತು ಮಕ್ಕಳನ್ನು ಮುಂದೆ ನಿಲ್ಲಿಸಿದ್ದರು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಆದರೆ, ಪ್ರತಿಭಟನಾಕಾರರನ್ನು ಚದುರಿಸಲು ಸಶಸ್ತ್ರ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇದರಿಂದ ಹಲವರು ಗಾಯಗೊಂಡಿದ್ದಾರೆ ಎಂದು ಧಿಂಕಿಯಾ ನಿವಾಸಿ ಗಣೇಶ್ ದಾಸ್ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಮತ್ತು ಅದರ ಶಸ್ತ್ರಸಜ್ಜಿತ ಪೊಲೀಸರು ಜೆಎಸ್‌ಡಬ್ಲ್ಯೂ ಜನರೊಂದಿಗೆಗೆ ಕೈಜೋಡಿಸಿ ಈ ಪ್ರದೇಶದಲ್ಲಿ ಜನರನ್ನು ಭಯಭೀತಗೊಳಿಸುತ್ತಿದ್ದಾರೆ. ಅವರು ಅನೇಕ ಹಳ್ಳಿಗರ ವೀಳ್ಯದೆಲೆ ತೋಟಗಳನ್ನು ಅಕ್ರಮವಾಗಿ ನೆಲಸಮಗೊಳಿಸಿದ್ದಾರೆ. ಆದರೆ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯುಗೆ ನಾವು ನಮ್ಮ ಒಂದು ಇಂಚು ಭೂಮಿಯನ್ನು ನೀಡುವುದಿಲ್ಲ” ಎಂದು ಧಿಂಕಿಯಾದ ರೈತ ಅನಿಲ್ ಬೆಹೆರಾ ಹೇಳಿದ್ದಾರೆ. ಪೋಲೀಸರ ದೌರ್ಜನ್ಯದ ವಿರುದ್ಧ ಕಿಡಿಕಾರಿದ್ದಾರೆ.

“ಜನವರಿ 14 ರಂದು, ಕನಿಷ್ಠ 500 ಗ್ರಾಮಸ್ಥರು ಅದರಲ್ಲೂ ಹೆಚ್ಚಾಗಿ ಮಹಿಳೆಯರು, ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು, ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ವೀಳ್ಯದೆಲೆ ಬಳ್ಳಿ ಕಿತ್ತು ಹಾಕುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ. ಈ ಭಾಗದಲ್ಲಿ ಸ್ಟೀಲ್ ಪ್ಲಾಂಟ್ ಸ್ಥಾಪನೆಗೆ ಹಲವರು ಒಲವು ತೋರಿದ್ದಾರೆ. ಆದರೆ ಕೆಲವು ಜನರು ಧಿಂಕಿಯಾದಲ್ಲಿ ತೊಂದರೆಯನ್ನುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಎರಸಮ ಬ್ಲಾಕ್‌ನ ತಹಸೀಲ್ದಾರ್ ಪ್ರಜ್ಞಾನಂದ ದಾಸ್ ಹೇಳಿದ್ದಾರೆ.

ಜಗತ್‌ಸಿಂಗ್‌ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮೇಶ್ ಪಾಂಡಾ ಮಾತನಾಡಿ, ಸರ್ಕಾರಿ ಜಮೀನುಗಳಲ್ಲಿರುವ ವೀಳ್ಯದೆಲೆ ತೋಟಗಳನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವಂತೆ ಆಡಳಿತವು ಎಲ್ಲಾ ವೀಳ್ಯದೆಲೆ ರೈತರಿಗೆ ಜನವರಿ 14 ರಂದು ಮನವಿ ಮಾಡಿದೆ. ದಿಂಕಿಯಾದಲ್ಲಿ ನಡೆಯುತ್ತಿದ್ದ ಭೂಸ್ವಾಧೀನ ಕಾಮಗಾರಿಯನ್ನು ಕೆಲವು ದುರುದ್ದೇಶದಿಂದ ವಿರೋಧಿಸಿದ್ದಾರೆ, ಇದಕ್ಕಾಗಿ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರತಿಭಟನಾಕಾರರು ದಳಿ ನಡೆಸಿದ್ದರಿಂದ ಕೆಲವು ಪೊಲೀಸರಿಗೆ ಗಾಯಗಳಾಗಿವೆ” ಎಂದಿದ್ದಾರೆ.

ಗ್ರಾಮಸ್ಥರು ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಗಳ ಬಳಿಕ ಶನಿವಾರದಿಂದ ಗ್ರಾಮದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಲವು ಭೂಸ್ವಾಧೀನ ವಿರೋಧಿ ಗ್ರಾಮಸ್ಥರ ಬೆದರಿಕೆಯ ದೃಷ್ಟಿಯಿಂದ ಸುಗಮವಾಗಿ ಭೂಸ್ವಾಧೀನ ಕಾರ್ಯ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಉದ್ದೇಶಿತ ಉಕ್ಕಿನ ಸ್ಥಾವರದ ಸ್ಥಳದಲ್ಲಿ 12 ಪೊಲೀಸರ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಪಾಂಡಾ ಹೇಳಿದ್ದಾರೆ.


ಇದನ್ನೂ ಓದಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...