Homeಚಳವಳಿಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

- Advertisement -
- Advertisement -

ತಮ್ಮ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ಉಳಿಸಿಕೊಳ್ಳಲು ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್‌ಡಬ್ಲ್ಯು) ಲಿಮಿಟೆಡ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಮಾರಣಾಂತಿಕವಾಗಿ ಲಾಠಿ ಚಾರ್ಜ್ ನಡೆಸಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾ ಗ್ರಾಮದಲ್ಲಿ ನಡೆದಿದೆ.

ಧಿಂಕಿಯಾ, ನುಗಾಂವ್ ಮತ್ತು ಗಡಕುಜಾಂಗ್‌ನ ಕಡಲತೀರದ ಗ್ರಾಮ ಪಂಚಾಯತ್‌ಗಳಲ್ಲಿ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯೂಗೆ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ನೀಡುವ ಒಡಿಶಾ ಸರ್ಕಾರದ ಯೋಜನೆಯನ್ನು ಹಲವಾರು ಗ್ರಾಮಸ್ಥರು ವಿರೋಧಿಸುತ್ತಿದ್ದಾರೆ. ಜನವರಿ 14 ರಂದು ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾದಲ್ಲಿ ತೋಟಗಳನ್ನು ಕೆಡವದಂತೆ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಮಹಿಳೆಯರು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಗ್ರಾಮಸ್ಥರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹೆಚ್ಚಿನ ಸಂಖ್ಯೆಯ ಶಸ್ತ್ರಸಜ್ಜಿತ ಪೊಲೀಸರು ಜನವರಿ 14 ರಂದು ಗ್ರಾಮಸ್ಥರು ನಿರ್ಮಿಸಿದ್ದ ಮರದ ಬ್ಯಾರಿಕೇಡ್‌ಗಳನ್ನು ಮುರಿದು ಧಿಂಕಿಯಾ ಗ್ರಾಮವನ್ನು ಪ್ರವೇಶಿಸಿದ್ದರು. ಪೊಲೀಸರು ಮತ್ತು ಅಧಿಕಾರಿಗಳ ಗ್ರಾಮ ಪ್ರವೇಶವನ್ನು ತಡೆಯಲು ಜೆಎಸ್‌ಡಬ್ಲ್ಯೂ ಪ್ರತಿರೋಧ್ ಸಂಗ್ರಾಮ್ ಸಮಿತಿಯ ಮುಖಂಡರು ಮಹಿಳೆಯರು ಮತ್ತು ಮಕ್ಕಳನ್ನು ಮುಂದೆ ನಿಲ್ಲಿಸಿದ್ದರು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಆದರೆ, ಪ್ರತಿಭಟನಾಕಾರರನ್ನು ಚದುರಿಸಲು ಸಶಸ್ತ್ರ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇದರಿಂದ ಹಲವರು ಗಾಯಗೊಂಡಿದ್ದಾರೆ ಎಂದು ಧಿಂಕಿಯಾ ನಿವಾಸಿ ಗಣೇಶ್ ದಾಸ್ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಮತ್ತು ಅದರ ಶಸ್ತ್ರಸಜ್ಜಿತ ಪೊಲೀಸರು ಜೆಎಸ್‌ಡಬ್ಲ್ಯೂ ಜನರೊಂದಿಗೆಗೆ ಕೈಜೋಡಿಸಿ ಈ ಪ್ರದೇಶದಲ್ಲಿ ಜನರನ್ನು ಭಯಭೀತಗೊಳಿಸುತ್ತಿದ್ದಾರೆ. ಅವರು ಅನೇಕ ಹಳ್ಳಿಗರ ವೀಳ್ಯದೆಲೆ ತೋಟಗಳನ್ನು ಅಕ್ರಮವಾಗಿ ನೆಲಸಮಗೊಳಿಸಿದ್ದಾರೆ. ಆದರೆ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯುಗೆ ನಾವು ನಮ್ಮ ಒಂದು ಇಂಚು ಭೂಮಿಯನ್ನು ನೀಡುವುದಿಲ್ಲ” ಎಂದು ಧಿಂಕಿಯಾದ ರೈತ ಅನಿಲ್ ಬೆಹೆರಾ ಹೇಳಿದ್ದಾರೆ. ಪೋಲೀಸರ ದೌರ್ಜನ್ಯದ ವಿರುದ್ಧ ಕಿಡಿಕಾರಿದ್ದಾರೆ.

“ಜನವರಿ 14 ರಂದು, ಕನಿಷ್ಠ 500 ಗ್ರಾಮಸ್ಥರು ಅದರಲ್ಲೂ ಹೆಚ್ಚಾಗಿ ಮಹಿಳೆಯರು, ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು, ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ವೀಳ್ಯದೆಲೆ ಬಳ್ಳಿ ಕಿತ್ತು ಹಾಕುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ. ಈ ಭಾಗದಲ್ಲಿ ಸ್ಟೀಲ್ ಪ್ಲಾಂಟ್ ಸ್ಥಾಪನೆಗೆ ಹಲವರು ಒಲವು ತೋರಿದ್ದಾರೆ. ಆದರೆ ಕೆಲವು ಜನರು ಧಿಂಕಿಯಾದಲ್ಲಿ ತೊಂದರೆಯನ್ನುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಎರಸಮ ಬ್ಲಾಕ್‌ನ ತಹಸೀಲ್ದಾರ್ ಪ್ರಜ್ಞಾನಂದ ದಾಸ್ ಹೇಳಿದ್ದಾರೆ.

ಜಗತ್‌ಸಿಂಗ್‌ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮೇಶ್ ಪಾಂಡಾ ಮಾತನಾಡಿ, ಸರ್ಕಾರಿ ಜಮೀನುಗಳಲ್ಲಿರುವ ವೀಳ್ಯದೆಲೆ ತೋಟಗಳನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವಂತೆ ಆಡಳಿತವು ಎಲ್ಲಾ ವೀಳ್ಯದೆಲೆ ರೈತರಿಗೆ ಜನವರಿ 14 ರಂದು ಮನವಿ ಮಾಡಿದೆ. ದಿಂಕಿಯಾದಲ್ಲಿ ನಡೆಯುತ್ತಿದ್ದ ಭೂಸ್ವಾಧೀನ ಕಾಮಗಾರಿಯನ್ನು ಕೆಲವು ದುರುದ್ದೇಶದಿಂದ ವಿರೋಧಿಸಿದ್ದಾರೆ, ಇದಕ್ಕಾಗಿ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರತಿಭಟನಾಕಾರರು ದಳಿ ನಡೆಸಿದ್ದರಿಂದ ಕೆಲವು ಪೊಲೀಸರಿಗೆ ಗಾಯಗಳಾಗಿವೆ” ಎಂದಿದ್ದಾರೆ.

ಗ್ರಾಮಸ್ಥರು ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಗಳ ಬಳಿಕ ಶನಿವಾರದಿಂದ ಗ್ರಾಮದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಲವು ಭೂಸ್ವಾಧೀನ ವಿರೋಧಿ ಗ್ರಾಮಸ್ಥರ ಬೆದರಿಕೆಯ ದೃಷ್ಟಿಯಿಂದ ಸುಗಮವಾಗಿ ಭೂಸ್ವಾಧೀನ ಕಾರ್ಯ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಉದ್ದೇಶಿತ ಉಕ್ಕಿನ ಸ್ಥಾವರದ ಸ್ಥಳದಲ್ಲಿ 12 ಪೊಲೀಸರ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಪಾಂಡಾ ಹೇಳಿದ್ದಾರೆ.


ಇದನ್ನೂ ಓದಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...