Homeಚಳವಳಿಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

- Advertisement -
- Advertisement -

ತಮ್ಮ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ಉಳಿಸಿಕೊಳ್ಳಲು ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್‌ಡಬ್ಲ್ಯು) ಲಿಮಿಟೆಡ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಮಾರಣಾಂತಿಕವಾಗಿ ಲಾಠಿ ಚಾರ್ಜ್ ನಡೆಸಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾ ಗ್ರಾಮದಲ್ಲಿ ನಡೆದಿದೆ.

ಧಿಂಕಿಯಾ, ನುಗಾಂವ್ ಮತ್ತು ಗಡಕುಜಾಂಗ್‌ನ ಕಡಲತೀರದ ಗ್ರಾಮ ಪಂಚಾಯತ್‌ಗಳಲ್ಲಿ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯೂಗೆ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ನೀಡುವ ಒಡಿಶಾ ಸರ್ಕಾರದ ಯೋಜನೆಯನ್ನು ಹಲವಾರು ಗ್ರಾಮಸ್ಥರು ವಿರೋಧಿಸುತ್ತಿದ್ದಾರೆ. ಜನವರಿ 14 ರಂದು ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾದಲ್ಲಿ ತೋಟಗಳನ್ನು ಕೆಡವದಂತೆ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಮಹಿಳೆಯರು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಗ್ರಾಮಸ್ಥರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹೆಚ್ಚಿನ ಸಂಖ್ಯೆಯ ಶಸ್ತ್ರಸಜ್ಜಿತ ಪೊಲೀಸರು ಜನವರಿ 14 ರಂದು ಗ್ರಾಮಸ್ಥರು ನಿರ್ಮಿಸಿದ್ದ ಮರದ ಬ್ಯಾರಿಕೇಡ್‌ಗಳನ್ನು ಮುರಿದು ಧಿಂಕಿಯಾ ಗ್ರಾಮವನ್ನು ಪ್ರವೇಶಿಸಿದ್ದರು. ಪೊಲೀಸರು ಮತ್ತು ಅಧಿಕಾರಿಗಳ ಗ್ರಾಮ ಪ್ರವೇಶವನ್ನು ತಡೆಯಲು ಜೆಎಸ್‌ಡಬ್ಲ್ಯೂ ಪ್ರತಿರೋಧ್ ಸಂಗ್ರಾಮ್ ಸಮಿತಿಯ ಮುಖಂಡರು ಮಹಿಳೆಯರು ಮತ್ತು ಮಕ್ಕಳನ್ನು ಮುಂದೆ ನಿಲ್ಲಿಸಿದ್ದರು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಆದರೆ, ಪ್ರತಿಭಟನಾಕಾರರನ್ನು ಚದುರಿಸಲು ಸಶಸ್ತ್ರ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇದರಿಂದ ಹಲವರು ಗಾಯಗೊಂಡಿದ್ದಾರೆ ಎಂದು ಧಿಂಕಿಯಾ ನಿವಾಸಿ ಗಣೇಶ್ ದಾಸ್ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಮತ್ತು ಅದರ ಶಸ್ತ್ರಸಜ್ಜಿತ ಪೊಲೀಸರು ಜೆಎಸ್‌ಡಬ್ಲ್ಯೂ ಜನರೊಂದಿಗೆಗೆ ಕೈಜೋಡಿಸಿ ಈ ಪ್ರದೇಶದಲ್ಲಿ ಜನರನ್ನು ಭಯಭೀತಗೊಳಿಸುತ್ತಿದ್ದಾರೆ. ಅವರು ಅನೇಕ ಹಳ್ಳಿಗರ ವೀಳ್ಯದೆಲೆ ತೋಟಗಳನ್ನು ಅಕ್ರಮವಾಗಿ ನೆಲಸಮಗೊಳಿಸಿದ್ದಾರೆ. ಆದರೆ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯುಗೆ ನಾವು ನಮ್ಮ ಒಂದು ಇಂಚು ಭೂಮಿಯನ್ನು ನೀಡುವುದಿಲ್ಲ” ಎಂದು ಧಿಂಕಿಯಾದ ರೈತ ಅನಿಲ್ ಬೆಹೆರಾ ಹೇಳಿದ್ದಾರೆ. ಪೋಲೀಸರ ದೌರ್ಜನ್ಯದ ವಿರುದ್ಧ ಕಿಡಿಕಾರಿದ್ದಾರೆ.

“ಜನವರಿ 14 ರಂದು, ಕನಿಷ್ಠ 500 ಗ್ರಾಮಸ್ಥರು ಅದರಲ್ಲೂ ಹೆಚ್ಚಾಗಿ ಮಹಿಳೆಯರು, ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು, ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ವೀಳ್ಯದೆಲೆ ಬಳ್ಳಿ ಕಿತ್ತು ಹಾಕುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ. ಈ ಭಾಗದಲ್ಲಿ ಸ್ಟೀಲ್ ಪ್ಲಾಂಟ್ ಸ್ಥಾಪನೆಗೆ ಹಲವರು ಒಲವು ತೋರಿದ್ದಾರೆ. ಆದರೆ ಕೆಲವು ಜನರು ಧಿಂಕಿಯಾದಲ್ಲಿ ತೊಂದರೆಯನ್ನುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಎರಸಮ ಬ್ಲಾಕ್‌ನ ತಹಸೀಲ್ದಾರ್ ಪ್ರಜ್ಞಾನಂದ ದಾಸ್ ಹೇಳಿದ್ದಾರೆ.

ಜಗತ್‌ಸಿಂಗ್‌ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮೇಶ್ ಪಾಂಡಾ ಮಾತನಾಡಿ, ಸರ್ಕಾರಿ ಜಮೀನುಗಳಲ್ಲಿರುವ ವೀಳ್ಯದೆಲೆ ತೋಟಗಳನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವಂತೆ ಆಡಳಿತವು ಎಲ್ಲಾ ವೀಳ್ಯದೆಲೆ ರೈತರಿಗೆ ಜನವರಿ 14 ರಂದು ಮನವಿ ಮಾಡಿದೆ. ದಿಂಕಿಯಾದಲ್ಲಿ ನಡೆಯುತ್ತಿದ್ದ ಭೂಸ್ವಾಧೀನ ಕಾಮಗಾರಿಯನ್ನು ಕೆಲವು ದುರುದ್ದೇಶದಿಂದ ವಿರೋಧಿಸಿದ್ದಾರೆ, ಇದಕ್ಕಾಗಿ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರತಿಭಟನಾಕಾರರು ದಳಿ ನಡೆಸಿದ್ದರಿಂದ ಕೆಲವು ಪೊಲೀಸರಿಗೆ ಗಾಯಗಳಾಗಿವೆ” ಎಂದಿದ್ದಾರೆ.

ಗ್ರಾಮಸ್ಥರು ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಗಳ ಬಳಿಕ ಶನಿವಾರದಿಂದ ಗ್ರಾಮದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಲವು ಭೂಸ್ವಾಧೀನ ವಿರೋಧಿ ಗ್ರಾಮಸ್ಥರ ಬೆದರಿಕೆಯ ದೃಷ್ಟಿಯಿಂದ ಸುಗಮವಾಗಿ ಭೂಸ್ವಾಧೀನ ಕಾರ್ಯ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಉದ್ದೇಶಿತ ಉಕ್ಕಿನ ಸ್ಥಾವರದ ಸ್ಥಳದಲ್ಲಿ 12 ಪೊಲೀಸರ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಪಾಂಡಾ ಹೇಳಿದ್ದಾರೆ.


ಇದನ್ನೂ ಓದಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...