Homeಮುಖಪುಟನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ನಲ್ಲಿ ಭಾಗವಹಿಸಲು ಭಾರತದಿಂದ ಶಾಲಾ ತಂಡವನ್ನು ಆಯ್ಕೆ ಮಾಡಿರುವುದು ಇದೆ ಮೊದಲು.

- Advertisement -
- Advertisement -

ಏಪ್ರಿಲ್‌ನಲ್ಲಿ ನಡೆಯಲಿರುವ ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್ 2021 ರಲ್ಲಿ ಭಾಗವಹಿಸಲು ಒಡಿಶಾದ 10 ಶಾಲಾ ವಿದ್ಯಾರ್ಥಿಗಳನ್ನು ಒಳಗೊಂಡ ನವೋನ್‌ಮೇಶ್ ಪ್ರಸಾರ್ ಸ್ಟೂಡೆಂಟ್ಸ್ ಅಸ್ಟ್ರೋನಮಿ ಟೀಮ್ (NaPSAT) ಆಯ್ಕೆಯಾಗಿದೆ.

ಭುವನೇಶ್ವರ ಮೂಲದ ನವೋನ್‌ಮೇಶ್ ಪ್ರಸಾರ್ ಫೌಂಡೇಶನ್‌ನ ಬಾಹ್ಯಾಕಾಶ ಉತ್ಸಾಹಿಗಳ ತಂಡವೇ NaPSAT. ಈ ಉತ್ಸಾಹಿಗಳ ತಂಡ ಬಾಹ್ಯಾಕಾಶ ವ್ಯವಸ್ಥೆಗಳು, ರೋವರ್‌ಗಳು, ರಾಕೆಟ್‌ಗಳು, ಉಪಗ್ರಹಗಳು ಮತ್ತು ಖಗೋಳವಿಜ್ಞಾನದ ವಿನ್ಯಾಸಗಳ ಕುರಿತು ಪ್ರಾಜೆಕ್ಟ್ ಮಾಡಿ ವಿವಿಧ ಅಂತರರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತದೆ.

ಈ ಬಾರಿ ನಾಸಾದ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಭಾರತದಿಂದ ಶಾಲಾ ತಂಡವನ್ನು ಆಯ್ಕೆ ಮಾಡಿರುವುದು ಇದೆ ಮೊದಲು ಎಂದು ನವೋನ್‌ಮೇಶ್ ಪ್ರಸಾರ್ ಫೌಂಡೇಶನ್ ಸಂಸ್ಥಾಪಕ ಅನಿಲ್ ಪ್ರಧಾನ್ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

“ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ನಲ್ಲಿ ಭಾಗವಹಿಸಲು ಭಾರತದಿಂದ ಶಾಲಾ ತಂಡವನ್ನು ಆಯ್ಕೆ ಮಾಡಿರುವುದು ಇದೆ ಮೊದಲು. ನಾವು ಕೊರೊನಾ ಸಮಯದಲ್ಲಿ ಈ ತಂಡವನ್ನು ರಚಿಸಿದ್ದೇವೆ. ಒಡಿಶಾದ 10 ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ತರಬೇತಿ ನೀಡಿ, ನಂತರ ನಾಸಾದ ರೋವರ್ ಚಾಲೆಂಜ್‌ಗೆ ಅರ್ಜಿ ಸಲ್ಲಿಸಿದ್ದೇವೆ” ಎಂದು ಅನಿಲ್ ಪ್ರಧಾನ್ ಮಾಹಿತಿ ನೀಡಿದ್ದಾರೆ.

ಜೊತೆಗೆ, “ಈ ತಂಡವು ಶಾಲಾ ವಿದ್ಯಾರ್ಥಿಗಳನ್ನು ಮತ್ತು ಐಟಿಐ ವಿದ್ಯಾರ್ಥಿಗಳನ್ನು ಹೊಂದಿದೆ. ಅವರು ಮಂಗಳ ಗ್ರಹದ ಮೇಲ್ಮೈಯಲ್ಲಿ ಚಲಿಸಬಲ್ಲ ರೋವರ್ ತಯಾರಿಸುತ್ತಿದ್ದಾರೆ ಮತ್ತು ಅದು ಮಾನವ-ಚಾಲಿತ ರೋವರ್ ಆಗಿರುತ್ತದೆ “ಎಂದು ಅನಿಲ್ ಪ್ರಧಾನ್ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

’ನಮಗೆ ನಾಸಾದಿಂದ ಆಹ್ವಾನ ಬಂದಿದೆ ಮತ್ತು ಕಾರ್ಯಕ್ರಮ 2021ರ ಏಪ್ರಿಲ್‌ನಲ್ಲಿ ನಡೆಯಲಿದೆ. ನಾವು ರೋವರ್ ತಯಾರಿಸುತ್ತಿದ್ದೇವೆ ಮತ್ತು ಅದನ್ನು ನಾಸಾಗೆ ಕಳುಹಿಸುತ್ತೇವೆ. ನಾಸಾಗೆ ಹೋಗಿ ಇತರ ತಂಡಗಳೊಂದಿಗೆ ಸ್ಪರ್ಧಿಸುತ್ತೇವೆ. ಅದಕ್ಕಾಗಿ ನಾವು ಕೂಡ ಹಣವನ್ನು ಸಂಗ್ರಹಿಸುತ್ತಿದ್ದೇವೆ” ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

NaPSAT ತಂಡದ ಭಾಗವಾಗಿರುವ 9 ನೇ ತರಗತಿ ವಿದ್ಯಾರ್ಥಿ ತನ್ವಿ ಮಲ್ಲಿಕ್ ತಮ್ಮ ತಂಡ ನಾಸಾ ರೋವರ್‌ ಚಾಲೆಂಜ್‌ಗೆ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ನಾನು ನಾಪ್ಸಾಟ್ ಬಗ್ಗೆ ತಿಳಿದಿದ್ದೆ. ಈ ತಂಡವನ್ನು ಸೇರಲು ನಾನು ಪ್ರಯತ್ನಿಸಿದ್ದೆ. ಈಗ ನಾನು ಆಯ್ಕೆಯಾಗಿದ್ದೇನೆ. ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್ 2021ಕ್ಕೆ ನಮ್ಮನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಹೆಮ್ಮೆಯಿದೆ’ ಎಂದಿದ್ದಾರೆ.

’ನಾವು ನಾಸಾಗೆ ಆಯ್ಕೆಯಾದ ಒಡಿಶಾದ ಮೊದಲ ತಂಡ ಮತ್ತು ಭಾರತದಿಂದ ಮೊದಲ ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ. ನಾವು 2021 ಏಪ್ರಿಲ್‌ನಲ್ಲಿ ಅಮೆರಿಕಾದ ಅಲಬಾಮಾಕ್ಕೆ ಹೋಗುತ್ತಿದ್ದೇವೆ ಮತ್ತು ಈ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತೇವೆ” ಎಂದು ತನ್ವಿ ಮಲ್ಲಿಕ್ ಹೇಳಿದ್ದಾರೆ.


ಇದನ್ನೂ ಓದಿ: ಚಂದ್ರಯಾನ-2ರ ರೋವರ್ ಚಂದ್ರನ ಮೇಲಿದೆ: ಚೆನ್ನೈ ಮೂಲದ ಟೆಕ್ಕಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...