Homeಮುಖಪುಟಒಡಿಸ್ಸಾ ರೈಲು ದುರಂತ ನಿರ್ಲಕ್ಷ್ಯದಿಂದ ಸಂಭವಿಸಿದೆ; ಅಪರಿಚಿತರ ವಿರುದ್ಧ ಎಫ್‌ಐಆರ್‌

ಒಡಿಸ್ಸಾ ರೈಲು ದುರಂತ ನಿರ್ಲಕ್ಷ್ಯದಿಂದ ಸಂಭವಿಸಿದೆ; ಅಪರಿಚಿತರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಒಡಿಸ್ಸಾದ ಬಾಲಸೋರ್‌ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಸೋಮವಾರ ಎಫ್‌ಐಆರ್‌ ದಾಖಲಾಗಿದ್ದು, “ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ” ಎಂದು ಉಲ್ಲೇಖಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಒಡಿಶಾದ ಸರ್ಕಾರಿ ರೈಲ್ವೆ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ, ಅಪರಿಚಿತ ವ್ಯಕ್ತಿಗಳನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಲಾಗಿದೆ.

ಭಾರತದಲ್ಲಿ ನಡೆದ ಅತ್ಯಂತ ಭೀಕರ ರೈಲು ಅಪಘಾತಗಳಲ್ಲಿ ಒಂದಾದ ಬಾಲಸೋರ್‌ ದುರಂತದಲ್ಲಿ 288 ಪ್ರಯಾಣಿಕರು ಸಾವನ್ನಪ್ಪಿದರು ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡರು.

ಐಪಿಸಿ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು), ದುಷ್ಕೃತ್ಯ ಅಥವಾ ನಿರ್ಲಕ್ಷ್ಯದ ಕ್ರಿಯೆಯ ಮೂಲಕ ಜೀವಕ್ಕೆ ಹಾನಿ, ಅಪಾಯವನ್ನುಂಟುಮಾಡುವ ಆರೋಪಗಳಿಗೆ ಸಂಬಂಧಿಸಿದ ಸೆಕ್ಷನ್ 37, 38 ಮತ್ತು ಸೆಕ್ಷನ್‌ 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರೈಲ್ವೆ ಕಾಯ್ದೆಯ ಸೆಕ್ಷನ್‌ 153 (ರೈಲ್ವೇ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟು ಮಾಡುವ ಕಾನೂನುಬಾಹಿರ ಮತ್ತು ನಿರ್ಲಕ್ಷ್ಯದ ಕ್ರಮ), 154 ಮತ್ತು 175 (ಜೀವಕ್ಕೆ ಅಪಾಯ ತಂದೊಡ್ಡುವುದು) ಅಡಿಯಲ್ಲೂ ಅಪರಿಚಿತ ವ್ಯಕ್ತಿಗಳ ವಿರುದ್ಧ ಆರೋಪಗಳನ್ನು ಹೊರಿಸಲಾಗಿದೆ.

“ಪ್ರಸ್ತುತ ನಿರ್ದಿಷ್ಟ ರೈಲ್ವೆ ಉದ್ಯೋಗಿಗಳ ಅಪರಾಧವನ್ನು ಖಚಿತಪಡಿಸಲಾಗಿಲ್ಲ, ಇದು ತನಿಖೆಯ ಸಮಯದಲ್ಲಿ ಬೆಳಕಿಗೆ ಬರಲಿದೆ” ಎಂದು ಎಫ್‌ಐಆರ್ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಸಬ್ ಇನ್ಸ್ ಪೆಕ್ಟರ್ ಪಾಪುಕುಮಾರ್ ನಾಯ್ಕ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಜೂನ್ 2 ರಂದು ಹೌರಾದಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, ಒಡಿಶಾದ ಬಾಲಸೋರ್ ಬಳಿ ಲೂಪ್ ಲೈನ್‌ನಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಮೇಲ್ಮುಖ ಮಾರ್ಗವನ್ನು ಪ್ರವೇಶಿಸುವಂತೆ ಆರಂಭದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿತ್ತು, ಆದರೆ ನಂತರ ಸಿಗ್ನಲ್ ತೆಗೆಯಲಾಯಿತು. ಇದರ ಬೆನ್ನಲ್ಲೇ ಎಕ್ಸ್ ಪ್ರೆಸ್ ರೈಲು ಲೂಪ್ ಲೈನ್ ಪ್ರವೇಶಿಸಿತು.

ಇದಾದ ನಂತರ ಹೌರಾ ಕಡೆಗೆ ಹೊರಟಿದ್ದ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಬಂದಿತ್ತು. ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆಯಿತು. ಸಿಗ್ನಲ್ ದೋಷದಿಂದ ಅಪಘಾತ ಸಂಭವಿಸಿರಬಹುದು ಎಂದು ರೈಲ್ವೆಯ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕೇಂದ್ರೀಯ ತನಿಖಾ ದಳದ 10 ಸದಸ್ಯರ ತಂಡವು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅದರ ತನಿಖೆಯನ್ನು ಸೋಮವಾರ ಪ್ರಾರಂಭಿಸಿತು ಎಂದು ಪಿಟಿಐ ವರದಿ ಮಾಡಿದೆ.

ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಭಾನುವಾರ ಶಿಫಾರಸು ಮಾಡಿದೆ. ಈ ಕ್ರಮವನ್ನು ಕಾಂಗ್ರೆಸ್ ಸೇರಿದಂತೆ 12 ರಾಜಕೀಯ ಪಕ್ಷಗಳು ಪ್ರಶ್ನಿಸಿದ್ದು, “ತಾಂತ್ರಿಕ, ಸಾಂಸ್ಥಿಕ ಮತ್ತು ರಾಜಕೀಯ ವೈಫಲ್ಯಗಳಿಗೆ ಕಾನೂನು ಜಾರಿ ಸಂಸ್ಥೆಗಳ ತನಿಖೆ ಸರಿಯಲ್ಲ” ಎಂದು ಹೇಳಿವೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, “ಸಿಬಿಐ ಅಪರಾಧಗಳನ್ನು ತನಿಖೆ ಮಾಡಲು ಇದೆ, ರೈಲ್ವೆ ಅಪಘಾತಗಳನ್ನಲ್ಲ” ಎಂದು ಟೀಕಿಸಿದ್ದಾರೆ.

“…ಹೆಚ್ಚುವರಿಯಾಗಿ, ಸಿಬಿಐನವರು ರೈಲ್ವೆ ಸುರಕ್ಷತೆ, ಸಿಗ್ನಲಿಂಗ್ ಮತ್ತು ನಿರ್ವಹಣೆ ವಿಚಾರಗಳಲ್ಲಿ ತಾಂತ್ರಿಕ ಪರಿಣತಿಯನ್ನು ಹೊಂದಿರುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಒಡಿಶಾ ರೈಲು ಅಪಘಾತದಲ್ಲಿ ಸತ್ತವರ ಸಂಖ್ಯೆ 500 ರಷ್ಟಿದೆ, ಆದರೆ ಕೇಂದ್ರ ಕಡಿಮೆ ಲೆಕ್ಕ ತೋರಿಸುತ್ತಿದೆ: ಮಮತಾ ಬ್ಯಾನರ್ಜಿ ಆರೋಪ

ಕಾನ್ಪುರದಲ್ಲಿ 2016ರಲ್ಲಿ ರೈಲು ಹಳಿ ತಪ್ಪಿ 150 ಪ್ರಯಾಣಿಕರು ಸಾವಿಗೀಡಾಗಿದ್ದನ್ನು ಖರ್ಗೆ ಉಲ್ಲೇಖಿಸಿದ್ದಾರೆ. ಆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿದ್ದನ್ನು ಅವರು ಪ್ರಸ್ತಾಪಿಸಿದ್ದಾರೆ.

“2017ರ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ, ‘ಪಿತೂರಿ’ ನಡೆದಿದೆ ಎಂದು ತಮ್ಮಷ್ಟಕ್ಕೆ ತಾವೇ ಹೇಳಿಕೊಂಡಿರಿ. ಕಠಿಣ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ದೇಶಕ್ಕೆ ಭರವಸೆ ನೀಡಲಾಯಿತು. ಆದರೆ 2018ರಲ್ಲಿ ಎನ್ಐಎ ತನಿಖೆಯನ್ನು ಮುಕ್ತಾಯಗೊಳಿಸಿತು. ಆರೋಪಪಟ್ಟಿ ಸಲ್ಲಿಸಲು ನಿರಾಕರಿಸಿತು. ರಾಷ್ಟ್ರವು ಇನ್ನೂ ಕತ್ತಲೆಯಲ್ಲಿದೆ. 150 ಸಾವುಗಳಿಗೆ ಯಾರು ಹೊಣೆ?” ಎಂದು ಖರ್ಗೆ ಕೇಳಿದ್ದಾರೆ.

ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕು ಮತ್ತು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.

ಇದರ ನಡುವೆ ತನ್ನ ಸಿಗ್ನಲಿಂಗ್ ವ್ಯವಸ್ಥೆಗಳ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ ರಾಷ್ಟ್ರವ್ಯಾಪಿ ಸುರಕ್ಷತಾ ಅಭಿಯಾನವನ್ನು ರೈಲ್ವೆ ಇಲಾಖೆ ಪ್ರಾರಂಭಿಸಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...