Homeಮುಖಪುಟಆಂಬ್ಯುಲೆನ್ಸ್‌ಗೆ ಹಣ ಹೊಂದಿಸಲು ಸಾಧ್ಯವಾಗದೆ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

ಆಂಬ್ಯುಲೆನ್ಸ್‌ಗೆ ಹಣ ಹೊಂದಿಸಲು ಸಾಧ್ಯವಾಗದೆ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

- Advertisement -
- Advertisement -

ಆಂಬ್ಯುಲೆನ್ಸ್ ಪಡೆಯಲು ಸಾಧ್ಯವಾಗದ ಕಾರಣ ವ್ಯಕ್ತಿಯೊಬ್ಬರು ತನ್ನ 17 ವರ್ಷದ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಸುಮಾರು 7 ಕಿ.ಮೀ. ದೂರದಿಂದ ಮರಣೋತ್ತರ ಪರೀಕ್ಷೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಒಡಿಶಾದ ಬಾಲಸೋರ್‌ನ ಬಲಿಯಾಪಾಲ್‌ನಲ್ಲಿ ನಡೆದಿದೆ.

ಬಲಿಯಾಪಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ಡ್ಯೂಲಾ ಗ್ರಾಮದಲ್ಲಿ ಗುರುವಾರ (ಜು.18) ಮಧ್ಯಾಹ್ನ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿ ಆಶಾ ಬಿಂಧಾನಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಈ ಬಗ್ಗೆ ಸ್ಥಳೀಯರು ಕೆಲಸಕ್ಕೆ ಹೋಗಿದ್ದ ಆಕೆಯ ತಂದೆ ಮಧು ಬಿಂಧಾನಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು.

ದಿನಗೂಲಿ ಕಾರ್ಮಿಕ ಮಧು ಸ್ಥಳಕ್ಕೆ ಧಾವಿಸಿ ನೋಡಿದಾಗ ಅವರ ಮಗಳು ಮೃತಪಟ್ಟಿರುವುದು ಕಂಡುಬಂದಿದೆ. ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬಲಿಯಾಪಾಲ್ ಸಮುದಾಯ ಆರೋಗ್ಯಕ್ಕೆ ಕೊಂಡೊಯ್ಯಲು ಮಧು ಅವರಿಗೆ ಸೂಚಿಸಿದ್ದರು.

ಹಾಗಾಗಿ, ಮಧು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದರು. ಆದರೆ, ಚಾಲಕ ‘ಮೃತದೇಹ’ವನ್ನು ಸಾಗಿಸಲು 1,200 ರೂಪಾಯಿ ಕೇಳಿದ್ದಾರೆ ಎನ್ನಲಾಗಿದೆ. ಅಷ್ಟು ಹಣ ಹೊಂದಿಸಲು ಸಾಧ್ಯವಾಗದೆ ಹತಾಶೆಗೊಂಡ ಮಧು, ಸರ್ಕಾರದ ಉಚಿತ ಆಂಬ್ಯುಲೆನ್ಸ್ ಸೇವೆಯಾದ 108ಕ್ಕೆ ಕರೆ ಮಾಡಿ ಸಹಾಯ ಕೋರಿದ್ದರು. ಆದರೆ, 108 ಅಂಬ್ಯುಲೆನ್ಸ್‌ನವರು ನಾವು ಶವ ಸಾಗಿಸುವುದಿಲ್ಲ. ತುರ್ತಾಗಿ ಆಸ್ಪತ್ರೆಗೆ ಸೇರಿಸುವ ಸೇವೆಯನ್ನು ಮಾತ್ರ ಒದಗಿಸುತ್ತೇವೆ ಎಂದಿದ್ದಾರೆ.

ಇತ್ತ ಹಣ ಹೊಂದಿಸಲಾಗದೆ, ಅತ್ತ ಬೇರೆ ಆಯ್ಕೆ ಇಲ್ಲದ ಕಾರಣ ಮಧು ಅವರು ಸ್ಥಳೀಯರಲ್ಲಿ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ, ಸ್ಥಳೀಯ ರಿಕ್ಷಾ ಚಾಲಕರೊಬ್ಬರು ಮಧ್ಯಪ್ರವೇಶಿಸಿ ಶವವನ್ನು ಸಾಗಿಸಲು ತನ್ನ ಮೂರು ಚಕ್ರದ ವಾಹನವನ್ನು ನೀಡಿದ್ದಾರೆ.

ಮಧು ತನ್ನ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದರು, ಅಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಅದೇ ರಿಕ್ಷಾದಲ್ಲಿಅಂತಿಮ ವಿಧಿವಿಧಾನಗಳಿಗಾಗಿ ಶವವನ್ನು ಡ್ಯೂಲಾ ಗ್ರಾಮಕ್ಕೆ ತರಲಾಗಿದೆ.

“ನಾನು ಬಡ ದಿನಗೂಲಿ ಕಾರ್ಮಿಕ. ನನ್ನ ಮಗಳ ಶವವನ್ನು ಆಸ್ಪತ್ರೆಗೆ ಕೊಂಡೊಯ್ಯಲು ಆಂಬ್ಯುಲೆನ್ಸ್‌ಗೆ 1,200 ರೂಪಾಯಿ ವ್ಯವಸ್ಥೆ ಮಾಡಲು ನನ್ನಿಂದ ಸಾಧ್ಯವಾಗಲಿಲ್ಲ. ಒಬ್ಬ ದಯಾಳು ವ್ಯಕ್ತಿ ತನ್ನ ಟ್ರಾಲಿ ರಿಕ್ಷಾವನ್ನು ನನಗೆ ಕೊಟ್ಟರು. ನನ್ನ ಮಗಳ ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದು, ನಂತರ ಅಂತಿಮ ವಿಧಿವಿಧಾನಗಳಿಗಾಗಿ ಮನೆಗೆ ತೆಗೆದುಕೊಂಡು ಬರಲು ಅದೊಂದೇ ಮಾರ್ಗವಾಗಿತ್ತು” ಎಂದು ಮಧು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶುಕ್ರವಾರ, ಮಧು ತನ್ನ ಮಗಳ ಶವವನ್ನು ಟ್ರಾಲಿ ರಿಕ್ಷಾದ ಮೇಲೆ ಇಟ್ಟು ಕೊಂಡೊಯ್ದ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ನಾವು ಸ್ಥಳೀಯ ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದೆವು. ಆದರೆ, ಅದು ಸಾಧ್ಯವಾಗಿಲ್ಲ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

ಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ – ಕೇಂದ್ರದ ಮಧ್ಯಪ್ರವೇಶಕ್ಕೆ ಜಮಿಯತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...