Homeಮುಖಪುಟಆಂಬ್ಯುಲೆನ್ಸ್‌ಗೆ ಹಣ ಹೊಂದಿಸಲು ಸಾಧ್ಯವಾಗದೆ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

ಆಂಬ್ಯುಲೆನ್ಸ್‌ಗೆ ಹಣ ಹೊಂದಿಸಲು ಸಾಧ್ಯವಾಗದೆ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

- Advertisement -
- Advertisement -

ಆಂಬ್ಯುಲೆನ್ಸ್ ಪಡೆಯಲು ಸಾಧ್ಯವಾಗದ ಕಾರಣ ವ್ಯಕ್ತಿಯೊಬ್ಬರು ತನ್ನ 17 ವರ್ಷದ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಸುಮಾರು 7 ಕಿ.ಮೀ. ದೂರದಿಂದ ಮರಣೋತ್ತರ ಪರೀಕ್ಷೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಒಡಿಶಾದ ಬಾಲಸೋರ್‌ನ ಬಲಿಯಾಪಾಲ್‌ನಲ್ಲಿ ನಡೆದಿದೆ.

ಬಲಿಯಾಪಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ಡ್ಯೂಲಾ ಗ್ರಾಮದಲ್ಲಿ ಗುರುವಾರ (ಜು.18) ಮಧ್ಯಾಹ್ನ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿ ಆಶಾ ಬಿಂಧಾನಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಈ ಬಗ್ಗೆ ಸ್ಥಳೀಯರು ಕೆಲಸಕ್ಕೆ ಹೋಗಿದ್ದ ಆಕೆಯ ತಂದೆ ಮಧು ಬಿಂಧಾನಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು.

ದಿನಗೂಲಿ ಕಾರ್ಮಿಕ ಮಧು ಸ್ಥಳಕ್ಕೆ ಧಾವಿಸಿ ನೋಡಿದಾಗ ಅವರ ಮಗಳು ಮೃತಪಟ್ಟಿರುವುದು ಕಂಡುಬಂದಿದೆ. ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬಲಿಯಾಪಾಲ್ ಸಮುದಾಯ ಆರೋಗ್ಯಕ್ಕೆ ಕೊಂಡೊಯ್ಯಲು ಮಧು ಅವರಿಗೆ ಸೂಚಿಸಿದ್ದರು.

ಹಾಗಾಗಿ, ಮಧು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದರು. ಆದರೆ, ಚಾಲಕ ‘ಮೃತದೇಹ’ವನ್ನು ಸಾಗಿಸಲು 1,200 ರೂಪಾಯಿ ಕೇಳಿದ್ದಾರೆ ಎನ್ನಲಾಗಿದೆ. ಅಷ್ಟು ಹಣ ಹೊಂದಿಸಲು ಸಾಧ್ಯವಾಗದೆ ಹತಾಶೆಗೊಂಡ ಮಧು, ಸರ್ಕಾರದ ಉಚಿತ ಆಂಬ್ಯುಲೆನ್ಸ್ ಸೇವೆಯಾದ 108ಕ್ಕೆ ಕರೆ ಮಾಡಿ ಸಹಾಯ ಕೋರಿದ್ದರು. ಆದರೆ, 108 ಅಂಬ್ಯುಲೆನ್ಸ್‌ನವರು ನಾವು ಶವ ಸಾಗಿಸುವುದಿಲ್ಲ. ತುರ್ತಾಗಿ ಆಸ್ಪತ್ರೆಗೆ ಸೇರಿಸುವ ಸೇವೆಯನ್ನು ಮಾತ್ರ ಒದಗಿಸುತ್ತೇವೆ ಎಂದಿದ್ದಾರೆ.

ಇತ್ತ ಹಣ ಹೊಂದಿಸಲಾಗದೆ, ಅತ್ತ ಬೇರೆ ಆಯ್ಕೆ ಇಲ್ಲದ ಕಾರಣ ಮಧು ಅವರು ಸ್ಥಳೀಯರಲ್ಲಿ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ, ಸ್ಥಳೀಯ ರಿಕ್ಷಾ ಚಾಲಕರೊಬ್ಬರು ಮಧ್ಯಪ್ರವೇಶಿಸಿ ಶವವನ್ನು ಸಾಗಿಸಲು ತನ್ನ ಮೂರು ಚಕ್ರದ ವಾಹನವನ್ನು ನೀಡಿದ್ದಾರೆ.

ಮಧು ತನ್ನ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದರು, ಅಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಅದೇ ರಿಕ್ಷಾದಲ್ಲಿಅಂತಿಮ ವಿಧಿವಿಧಾನಗಳಿಗಾಗಿ ಶವವನ್ನು ಡ್ಯೂಲಾ ಗ್ರಾಮಕ್ಕೆ ತರಲಾಗಿದೆ.

“ನಾನು ಬಡ ದಿನಗೂಲಿ ಕಾರ್ಮಿಕ. ನನ್ನ ಮಗಳ ಶವವನ್ನು ಆಸ್ಪತ್ರೆಗೆ ಕೊಂಡೊಯ್ಯಲು ಆಂಬ್ಯುಲೆನ್ಸ್‌ಗೆ 1,200 ರೂಪಾಯಿ ವ್ಯವಸ್ಥೆ ಮಾಡಲು ನನ್ನಿಂದ ಸಾಧ್ಯವಾಗಲಿಲ್ಲ. ಒಬ್ಬ ದಯಾಳು ವ್ಯಕ್ತಿ ತನ್ನ ಟ್ರಾಲಿ ರಿಕ್ಷಾವನ್ನು ನನಗೆ ಕೊಟ್ಟರು. ನನ್ನ ಮಗಳ ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದು, ನಂತರ ಅಂತಿಮ ವಿಧಿವಿಧಾನಗಳಿಗಾಗಿ ಮನೆಗೆ ತೆಗೆದುಕೊಂಡು ಬರಲು ಅದೊಂದೇ ಮಾರ್ಗವಾಗಿತ್ತು” ಎಂದು ಮಧು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶುಕ್ರವಾರ, ಮಧು ತನ್ನ ಮಗಳ ಶವವನ್ನು ಟ್ರಾಲಿ ರಿಕ್ಷಾದ ಮೇಲೆ ಇಟ್ಟು ಕೊಂಡೊಯ್ದ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ನಾವು ಸ್ಥಳೀಯ ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದೆವು. ಆದರೆ, ಅದು ಸಾಧ್ಯವಾಗಿಲ್ಲ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

ಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ – ಕೇಂದ್ರದ ಮಧ್ಯಪ್ರವೇಶಕ್ಕೆ ಜಮಿಯತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...