Homeಮುಖಪುಟಆಂಬ್ಯುಲೆನ್ಸ್‌ಗೆ ಹಣ ಹೊಂದಿಸಲು ಸಾಧ್ಯವಾಗದೆ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

ಆಂಬ್ಯುಲೆನ್ಸ್‌ಗೆ ಹಣ ಹೊಂದಿಸಲು ಸಾಧ್ಯವಾಗದೆ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

- Advertisement -
- Advertisement -

ಆಂಬ್ಯುಲೆನ್ಸ್ ಪಡೆಯಲು ಸಾಧ್ಯವಾಗದ ಕಾರಣ ವ್ಯಕ್ತಿಯೊಬ್ಬರು ತನ್ನ 17 ವರ್ಷದ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಸುಮಾರು 7 ಕಿ.ಮೀ. ದೂರದಿಂದ ಮರಣೋತ್ತರ ಪರೀಕ್ಷೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಒಡಿಶಾದ ಬಾಲಸೋರ್‌ನ ಬಲಿಯಾಪಾಲ್‌ನಲ್ಲಿ ನಡೆದಿದೆ.

ಬಲಿಯಾಪಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ಡ್ಯೂಲಾ ಗ್ರಾಮದಲ್ಲಿ ಗುರುವಾರ (ಜು.18) ಮಧ್ಯಾಹ್ನ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿ ಆಶಾ ಬಿಂಧಾನಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಈ ಬಗ್ಗೆ ಸ್ಥಳೀಯರು ಕೆಲಸಕ್ಕೆ ಹೋಗಿದ್ದ ಆಕೆಯ ತಂದೆ ಮಧು ಬಿಂಧಾನಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು.

ದಿನಗೂಲಿ ಕಾರ್ಮಿಕ ಮಧು ಸ್ಥಳಕ್ಕೆ ಧಾವಿಸಿ ನೋಡಿದಾಗ ಅವರ ಮಗಳು ಮೃತಪಟ್ಟಿರುವುದು ಕಂಡುಬಂದಿದೆ. ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬಲಿಯಾಪಾಲ್ ಸಮುದಾಯ ಆರೋಗ್ಯಕ್ಕೆ ಕೊಂಡೊಯ್ಯಲು ಮಧು ಅವರಿಗೆ ಸೂಚಿಸಿದ್ದರು.

ಹಾಗಾಗಿ, ಮಧು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದರು. ಆದರೆ, ಚಾಲಕ ‘ಮೃತದೇಹ’ವನ್ನು ಸಾಗಿಸಲು 1,200 ರೂಪಾಯಿ ಕೇಳಿದ್ದಾರೆ ಎನ್ನಲಾಗಿದೆ. ಅಷ್ಟು ಹಣ ಹೊಂದಿಸಲು ಸಾಧ್ಯವಾಗದೆ ಹತಾಶೆಗೊಂಡ ಮಧು, ಸರ್ಕಾರದ ಉಚಿತ ಆಂಬ್ಯುಲೆನ್ಸ್ ಸೇವೆಯಾದ 108ಕ್ಕೆ ಕರೆ ಮಾಡಿ ಸಹಾಯ ಕೋರಿದ್ದರು. ಆದರೆ, 108 ಅಂಬ್ಯುಲೆನ್ಸ್‌ನವರು ನಾವು ಶವ ಸಾಗಿಸುವುದಿಲ್ಲ. ತುರ್ತಾಗಿ ಆಸ್ಪತ್ರೆಗೆ ಸೇರಿಸುವ ಸೇವೆಯನ್ನು ಮಾತ್ರ ಒದಗಿಸುತ್ತೇವೆ ಎಂದಿದ್ದಾರೆ.

ಇತ್ತ ಹಣ ಹೊಂದಿಸಲಾಗದೆ, ಅತ್ತ ಬೇರೆ ಆಯ್ಕೆ ಇಲ್ಲದ ಕಾರಣ ಮಧು ಅವರು ಸ್ಥಳೀಯರಲ್ಲಿ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ, ಸ್ಥಳೀಯ ರಿಕ್ಷಾ ಚಾಲಕರೊಬ್ಬರು ಮಧ್ಯಪ್ರವೇಶಿಸಿ ಶವವನ್ನು ಸಾಗಿಸಲು ತನ್ನ ಮೂರು ಚಕ್ರದ ವಾಹನವನ್ನು ನೀಡಿದ್ದಾರೆ.

ಮಧು ತನ್ನ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದರು, ಅಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಅದೇ ರಿಕ್ಷಾದಲ್ಲಿಅಂತಿಮ ವಿಧಿವಿಧಾನಗಳಿಗಾಗಿ ಶವವನ್ನು ಡ್ಯೂಲಾ ಗ್ರಾಮಕ್ಕೆ ತರಲಾಗಿದೆ.

“ನಾನು ಬಡ ದಿನಗೂಲಿ ಕಾರ್ಮಿಕ. ನನ್ನ ಮಗಳ ಶವವನ್ನು ಆಸ್ಪತ್ರೆಗೆ ಕೊಂಡೊಯ್ಯಲು ಆಂಬ್ಯುಲೆನ್ಸ್‌ಗೆ 1,200 ರೂಪಾಯಿ ವ್ಯವಸ್ಥೆ ಮಾಡಲು ನನ್ನಿಂದ ಸಾಧ್ಯವಾಗಲಿಲ್ಲ. ಒಬ್ಬ ದಯಾಳು ವ್ಯಕ್ತಿ ತನ್ನ ಟ್ರಾಲಿ ರಿಕ್ಷಾವನ್ನು ನನಗೆ ಕೊಟ್ಟರು. ನನ್ನ ಮಗಳ ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದು, ನಂತರ ಅಂತಿಮ ವಿಧಿವಿಧಾನಗಳಿಗಾಗಿ ಮನೆಗೆ ತೆಗೆದುಕೊಂಡು ಬರಲು ಅದೊಂದೇ ಮಾರ್ಗವಾಗಿತ್ತು” ಎಂದು ಮಧು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶುಕ್ರವಾರ, ಮಧು ತನ್ನ ಮಗಳ ಶವವನ್ನು ಟ್ರಾಲಿ ರಿಕ್ಷಾದ ಮೇಲೆ ಇಟ್ಟು ಕೊಂಡೊಯ್ದ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ನಾವು ಸ್ಥಳೀಯ ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದೆವು. ಆದರೆ, ಅದು ಸಾಧ್ಯವಾಗಿಲ್ಲ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

ಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ – ಕೇಂದ್ರದ ಮಧ್ಯಪ್ರವೇಶಕ್ಕೆ ಜಮಿಯತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...