Homeಮುಖಪುಟಆಂಬ್ಯುಲೆನ್ಸ್‌ಗೆ ಹಣ ಹೊಂದಿಸಲು ಸಾಧ್ಯವಾಗದೆ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

ಆಂಬ್ಯುಲೆನ್ಸ್‌ಗೆ ಹಣ ಹೊಂದಿಸಲು ಸಾಧ್ಯವಾಗದೆ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

- Advertisement -
- Advertisement -

ಆಂಬ್ಯುಲೆನ್ಸ್ ಪಡೆಯಲು ಸಾಧ್ಯವಾಗದ ಕಾರಣ ವ್ಯಕ್ತಿಯೊಬ್ಬರು ತನ್ನ 17 ವರ್ಷದ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಸುಮಾರು 7 ಕಿ.ಮೀ. ದೂರದಿಂದ ಮರಣೋತ್ತರ ಪರೀಕ್ಷೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಒಡಿಶಾದ ಬಾಲಸೋರ್‌ನ ಬಲಿಯಾಪಾಲ್‌ನಲ್ಲಿ ನಡೆದಿದೆ.

ಬಲಿಯಾಪಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ಡ್ಯೂಲಾ ಗ್ರಾಮದಲ್ಲಿ ಗುರುವಾರ (ಜು.18) ಮಧ್ಯಾಹ್ನ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿ ಆಶಾ ಬಿಂಧಾನಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಈ ಬಗ್ಗೆ ಸ್ಥಳೀಯರು ಕೆಲಸಕ್ಕೆ ಹೋಗಿದ್ದ ಆಕೆಯ ತಂದೆ ಮಧು ಬಿಂಧಾನಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು.

ದಿನಗೂಲಿ ಕಾರ್ಮಿಕ ಮಧು ಸ್ಥಳಕ್ಕೆ ಧಾವಿಸಿ ನೋಡಿದಾಗ ಅವರ ಮಗಳು ಮೃತಪಟ್ಟಿರುವುದು ಕಂಡುಬಂದಿದೆ. ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬಲಿಯಾಪಾಲ್ ಸಮುದಾಯ ಆರೋಗ್ಯಕ್ಕೆ ಕೊಂಡೊಯ್ಯಲು ಮಧು ಅವರಿಗೆ ಸೂಚಿಸಿದ್ದರು.

ಹಾಗಾಗಿ, ಮಧು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದರು. ಆದರೆ, ಚಾಲಕ ‘ಮೃತದೇಹ’ವನ್ನು ಸಾಗಿಸಲು 1,200 ರೂಪಾಯಿ ಕೇಳಿದ್ದಾರೆ ಎನ್ನಲಾಗಿದೆ. ಅಷ್ಟು ಹಣ ಹೊಂದಿಸಲು ಸಾಧ್ಯವಾಗದೆ ಹತಾಶೆಗೊಂಡ ಮಧು, ಸರ್ಕಾರದ ಉಚಿತ ಆಂಬ್ಯುಲೆನ್ಸ್ ಸೇವೆಯಾದ 108ಕ್ಕೆ ಕರೆ ಮಾಡಿ ಸಹಾಯ ಕೋರಿದ್ದರು. ಆದರೆ, 108 ಅಂಬ್ಯುಲೆನ್ಸ್‌ನವರು ನಾವು ಶವ ಸಾಗಿಸುವುದಿಲ್ಲ. ತುರ್ತಾಗಿ ಆಸ್ಪತ್ರೆಗೆ ಸೇರಿಸುವ ಸೇವೆಯನ್ನು ಮಾತ್ರ ಒದಗಿಸುತ್ತೇವೆ ಎಂದಿದ್ದಾರೆ.

ಇತ್ತ ಹಣ ಹೊಂದಿಸಲಾಗದೆ, ಅತ್ತ ಬೇರೆ ಆಯ್ಕೆ ಇಲ್ಲದ ಕಾರಣ ಮಧು ಅವರು ಸ್ಥಳೀಯರಲ್ಲಿ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ, ಸ್ಥಳೀಯ ರಿಕ್ಷಾ ಚಾಲಕರೊಬ್ಬರು ಮಧ್ಯಪ್ರವೇಶಿಸಿ ಶವವನ್ನು ಸಾಗಿಸಲು ತನ್ನ ಮೂರು ಚಕ್ರದ ವಾಹನವನ್ನು ನೀಡಿದ್ದಾರೆ.

ಮಧು ತನ್ನ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದರು, ಅಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಅದೇ ರಿಕ್ಷಾದಲ್ಲಿಅಂತಿಮ ವಿಧಿವಿಧಾನಗಳಿಗಾಗಿ ಶವವನ್ನು ಡ್ಯೂಲಾ ಗ್ರಾಮಕ್ಕೆ ತರಲಾಗಿದೆ.

“ನಾನು ಬಡ ದಿನಗೂಲಿ ಕಾರ್ಮಿಕ. ನನ್ನ ಮಗಳ ಶವವನ್ನು ಆಸ್ಪತ್ರೆಗೆ ಕೊಂಡೊಯ್ಯಲು ಆಂಬ್ಯುಲೆನ್ಸ್‌ಗೆ 1,200 ರೂಪಾಯಿ ವ್ಯವಸ್ಥೆ ಮಾಡಲು ನನ್ನಿಂದ ಸಾಧ್ಯವಾಗಲಿಲ್ಲ. ಒಬ್ಬ ದಯಾಳು ವ್ಯಕ್ತಿ ತನ್ನ ಟ್ರಾಲಿ ರಿಕ್ಷಾವನ್ನು ನನಗೆ ಕೊಟ್ಟರು. ನನ್ನ ಮಗಳ ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದು, ನಂತರ ಅಂತಿಮ ವಿಧಿವಿಧಾನಗಳಿಗಾಗಿ ಮನೆಗೆ ತೆಗೆದುಕೊಂಡು ಬರಲು ಅದೊಂದೇ ಮಾರ್ಗವಾಗಿತ್ತು” ಎಂದು ಮಧು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶುಕ್ರವಾರ, ಮಧು ತನ್ನ ಮಗಳ ಶವವನ್ನು ಟ್ರಾಲಿ ರಿಕ್ಷಾದ ಮೇಲೆ ಇಟ್ಟು ಕೊಂಡೊಯ್ದ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ನಾವು ಸ್ಥಳೀಯ ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದೆವು. ಆದರೆ, ಅದು ಸಾಧ್ಯವಾಗಿಲ್ಲ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

ಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ – ಕೇಂದ್ರದ ಮಧ್ಯಪ್ರವೇಶಕ್ಕೆ ಜಮಿಯತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...