Homeಮುಖಪುಟಒಡಿಶಾ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ

ಒಡಿಶಾ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ

- Advertisement -
- Advertisement -

ಒಡಿಶಾದ ಸಂಬಲ್‌ಪುರದಲ್ಲಿ ಬಿಜೆಪಿ ಪಕ್ಷದವರು ಪ್ರತಿಭಟನೆ ನಡೆಸುತ್ತಿರುವ ವೇಳೆ ವಿರೋಧ ಪಕ್ಷದ ನಾಯಕ ಜಯನಾರಾಯಣ ಮಿಶ್ರಾ ಅವರು, ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಲ್ಲದೇ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಆದಾಗ್ಯೂ, ಜಯನಾರಾಯಣ ಮಿಶ್ರಾ ಅವರು, ”ತಾವು ಹಲ್ಲೆ ನಡೆಸಿಲ್ಲ, ಧನುಪಾಲಿ ಪೊಲೀಸ್ ಠಾಣೆ ಪ್ರಭಾರಿ ಇನ್‌ಸ್ಪೆಕ್ಟರ್ ಅನಿತಾ ಪ್ರಧಾನ್ ಅವರೇ ನನ್ನನ್ನು ತಳ್ಳಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜ್ಯಾದ್ಯಂತ “ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ” ವಿಚಾರಕ್ಕೆ ಪ್ರತಿಭಟನೆ ನಡೆಸಲಾಗುತ್ತಿತ್ತು. ಅದರ ಭಾಗವಾಗಿ ಸಂಬಲ್ಪುರದ ಜಿಲ್ಲಾಧಿಕಾರಿಗಳ ಕಚೇರಿಯ ಹೊರಗೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ಬುಧವಾರ ಸಂಭವಿಸಿದ ಘಟನೆ ಬಗ್ಗೆ ಇಬ್ಬರೂ ಪೊಲೀಸ್ ದೂರುಗಳನ್ನು ದಾಖಲಿಸಿದ್ದಾರೆ.

ಮಹಿಳಾ ಪೊಲೀಸ್ ಅಧಿಕಾರಿ ಅನಿತಾ ಪ್ರಧಾನ್ ಪ್ರಕಾರ, ”ಬಿಜೆಪಿ ಕಾರ್ಯಕರ್ತರು ಆವರಣಕ್ಕೆ ನುಗ್ಗಲು ಪ್ರಯತ್ನಿಸುತ್ತಿರುವಾಗ, ಮಿಶ್ರಾ ಅವರು ನನಗೆ ಎದುರಾದರು, ಆಗ ಅವರು ನನ್ನನ್ನು ತೋರಿಸಿ ಆಕೆ ಯಾರು ಎಂದು ಕೇಳಿದರು. ಮತ್ತೆ ನಾನು ಲಂಚ ತೆಗೆದುಕೊಳ್ಳುತ್ತಿದ್ದೇನೆ ಎಂದು ಅವರು ಆರೋಪಿಸಿದರು. ಅಷ್ಟೇ ಅಲ್ಲದೇ ನನ್ನನ್ನು ಡಕಾಯಿತ ಎಂದು ಕರೆದರು. ಆಗ ನಾನು ಅವರನ್ನು ಪ್ರಶ್ನೆ ಮಾಡಿದಾಗ, ಅವರು ನನ್ನ ಮುಖದ ಮೇಲೆ ಕೈಯಿಟ್ಟು ತಳ್ಳಿದರು” ಎಂದು ಮಹಿಳಾ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದು ಕೊಲೆಗೆ ಕರೆ ಕೊಟ್ಟ ಅಶ್ವತ್ಥ ನಾರಾಯಣ: ಬೊಮ್ಮಾಯಿಯ ಮೌನ, ಸಮ್ಮತಿಯ ಲಕ್ಷಣವೇ?; ಸಿದ್ದರಾಮಯ್ಯ ಪ್ರತಿಕ್ರಿಯೆ

ಮಹಿಳಾ ಅಧಿಕಾರಿಯ ಆರೋಪ ತಳ್ಳಿಹಾಕಿದ ಬಿಜೆಪಿ ನಾಯಕ, ”ಪೊಲೀಸರು ಮಹಿಳಾ ಕಾರ್ಮಿಕರಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಅದನ್ನು ಪ್ರಶ್ನೆ ಮಾಡಲು ನಾನು ಮುಂದೆ ಬಂದು ಪೊಲೀಸರ ವಿರುದ್ಧ ಸಾಕಷ್ಟು ವಾಗ್ದಾಳಿ ನಡೆಸಿದೆನು. ಆಗ ಪೊಲೀಸರು ನನ್ನನ್ನೇ ತಳ್ಳಿದ್ದಾರೆ, ಆದರೆ ನಾನು ಅವರನ್ನು ತಳ್ಳಲಿಲ್ಲ. ಪೊಲೀಸರ ವಿರುದ್ಧ ಆರೋಪಗಳನ್ನು ಹೊರಿಸಿದ್ದರಿಂದ, ಅವರು ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ.. ನನಗೆ ಆಕೆಯ ಪರಿಚಯವೂ ಇಲ್ಲ” ಎಂದು ಪ್ರತಿಪಕ್ಷದ ನಾಯಕ ಹೇಳಿದ್ದಾರೆ.

ಸಂಬಲ್ಪುರ ಪೊಲೀಸ್ ವರಿಷ್ಠಾಧಿಕಾರಿ ಬಿ ಗಂಗಾಧರ್ ಅವರು ಘಟನೆಯ ವರದಿಯನ್ನು ಕೇಳಿದ್ದು, ಈ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮಿಶ್ರಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಒಡಿಶಾ ಪೊಲೀಸ್ ಸರ್ವಿಸ್ ಅಸೋಸಿಯೇಷನ್, ಸಂಬಲ್‌ಪುರ ವಿಭಾಗವು ಉತ್ತರ ವಲಯದ ಡಿಐಜಿಗೆ ಮನವಿ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...