Homeಮುಖಪುಟಒಡಿಶಾ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ

ಒಡಿಶಾ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ

- Advertisement -
- Advertisement -

ಒಡಿಶಾದ ಸಂಬಲ್‌ಪುರದಲ್ಲಿ ಬಿಜೆಪಿ ಪಕ್ಷದವರು ಪ್ರತಿಭಟನೆ ನಡೆಸುತ್ತಿರುವ ವೇಳೆ ವಿರೋಧ ಪಕ್ಷದ ನಾಯಕ ಜಯನಾರಾಯಣ ಮಿಶ್ರಾ ಅವರು, ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಲ್ಲದೇ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಆದಾಗ್ಯೂ, ಜಯನಾರಾಯಣ ಮಿಶ್ರಾ ಅವರು, ”ತಾವು ಹಲ್ಲೆ ನಡೆಸಿಲ್ಲ, ಧನುಪಾಲಿ ಪೊಲೀಸ್ ಠಾಣೆ ಪ್ರಭಾರಿ ಇನ್‌ಸ್ಪೆಕ್ಟರ್ ಅನಿತಾ ಪ್ರಧಾನ್ ಅವರೇ ನನ್ನನ್ನು ತಳ್ಳಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜ್ಯಾದ್ಯಂತ “ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ” ವಿಚಾರಕ್ಕೆ ಪ್ರತಿಭಟನೆ ನಡೆಸಲಾಗುತ್ತಿತ್ತು. ಅದರ ಭಾಗವಾಗಿ ಸಂಬಲ್ಪುರದ ಜಿಲ್ಲಾಧಿಕಾರಿಗಳ ಕಚೇರಿಯ ಹೊರಗೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ಬುಧವಾರ ಸಂಭವಿಸಿದ ಘಟನೆ ಬಗ್ಗೆ ಇಬ್ಬರೂ ಪೊಲೀಸ್ ದೂರುಗಳನ್ನು ದಾಖಲಿಸಿದ್ದಾರೆ.

ಮಹಿಳಾ ಪೊಲೀಸ್ ಅಧಿಕಾರಿ ಅನಿತಾ ಪ್ರಧಾನ್ ಪ್ರಕಾರ, ”ಬಿಜೆಪಿ ಕಾರ್ಯಕರ್ತರು ಆವರಣಕ್ಕೆ ನುಗ್ಗಲು ಪ್ರಯತ್ನಿಸುತ್ತಿರುವಾಗ, ಮಿಶ್ರಾ ಅವರು ನನಗೆ ಎದುರಾದರು, ಆಗ ಅವರು ನನ್ನನ್ನು ತೋರಿಸಿ ಆಕೆ ಯಾರು ಎಂದು ಕೇಳಿದರು. ಮತ್ತೆ ನಾನು ಲಂಚ ತೆಗೆದುಕೊಳ್ಳುತ್ತಿದ್ದೇನೆ ಎಂದು ಅವರು ಆರೋಪಿಸಿದರು. ಅಷ್ಟೇ ಅಲ್ಲದೇ ನನ್ನನ್ನು ಡಕಾಯಿತ ಎಂದು ಕರೆದರು. ಆಗ ನಾನು ಅವರನ್ನು ಪ್ರಶ್ನೆ ಮಾಡಿದಾಗ, ಅವರು ನನ್ನ ಮುಖದ ಮೇಲೆ ಕೈಯಿಟ್ಟು ತಳ್ಳಿದರು” ಎಂದು ಮಹಿಳಾ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದು ಕೊಲೆಗೆ ಕರೆ ಕೊಟ್ಟ ಅಶ್ವತ್ಥ ನಾರಾಯಣ: ಬೊಮ್ಮಾಯಿಯ ಮೌನ, ಸಮ್ಮತಿಯ ಲಕ್ಷಣವೇ?; ಸಿದ್ದರಾಮಯ್ಯ ಪ್ರತಿಕ್ರಿಯೆ

ಮಹಿಳಾ ಅಧಿಕಾರಿಯ ಆರೋಪ ತಳ್ಳಿಹಾಕಿದ ಬಿಜೆಪಿ ನಾಯಕ, ”ಪೊಲೀಸರು ಮಹಿಳಾ ಕಾರ್ಮಿಕರಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಅದನ್ನು ಪ್ರಶ್ನೆ ಮಾಡಲು ನಾನು ಮುಂದೆ ಬಂದು ಪೊಲೀಸರ ವಿರುದ್ಧ ಸಾಕಷ್ಟು ವಾಗ್ದಾಳಿ ನಡೆಸಿದೆನು. ಆಗ ಪೊಲೀಸರು ನನ್ನನ್ನೇ ತಳ್ಳಿದ್ದಾರೆ, ಆದರೆ ನಾನು ಅವರನ್ನು ತಳ್ಳಲಿಲ್ಲ. ಪೊಲೀಸರ ವಿರುದ್ಧ ಆರೋಪಗಳನ್ನು ಹೊರಿಸಿದ್ದರಿಂದ, ಅವರು ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ.. ನನಗೆ ಆಕೆಯ ಪರಿಚಯವೂ ಇಲ್ಲ” ಎಂದು ಪ್ರತಿಪಕ್ಷದ ನಾಯಕ ಹೇಳಿದ್ದಾರೆ.

ಸಂಬಲ್ಪುರ ಪೊಲೀಸ್ ವರಿಷ್ಠಾಧಿಕಾರಿ ಬಿ ಗಂಗಾಧರ್ ಅವರು ಘಟನೆಯ ವರದಿಯನ್ನು ಕೇಳಿದ್ದು, ಈ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮಿಶ್ರಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಒಡಿಶಾ ಪೊಲೀಸ್ ಸರ್ವಿಸ್ ಅಸೋಸಿಯೇಷನ್, ಸಂಬಲ್‌ಪುರ ವಿಭಾಗವು ಉತ್ತರ ವಲಯದ ಡಿಐಜಿಗೆ ಮನವಿ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...