HomeಮುಖಪುಟSIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಒಡಿಶಾದ ಮುಖ್ಯ ಚುನಾವಣಾಧಿಕಾರಿ (ಸಿಇಒ) ಆರ್. ಎಸ್. ಗೋಪಾಲನ್ ಅವರು ಮೇ 20ರಂದು ಮತದಾರರ ಪಟ್ಟಿಯನ್ನು ಅಂತಿಮಗೊಳಿಸಿದಾಗ (ಫ್ರೀಝ್ ಮಾಡಿದಾಗ) ರಾಜ್ಯದಲ್ಲಿ 3.33 ಕೋಟಿ ನೋಂದಾಯಿತ ಮತದಾರರಿದ್ದರು ಎಂದು ತಿಳಿಸಿದ್ದಾರೆ.

ಮೇ 30 ಮತ್ತು ಜೂನ್ 28 ರ ನಡುವೆ ನಡೆದ ಗಣತಿ ಪ್ರಕ್ರಿಯೆಯ ನಂತರ, ಕರಡು ಮತದಾರರ ಪಟ್ಟಿಯು ಈಗ 3.13 ಕೋಟಿ ಮತದಾರರನ್ನು ಹೊಂದಿದೆ. ಇದರಲ್ಲಿ 1.60 ಕೋಟಿ ಪುರುಷರು, 1.53 ಕೋಟಿ ಮಹಿಳೆಯರು ಮತ್ತು 2,775 ತೃತೀಯ ಲಿಂಗಿ ಮತದಾರರು ಸೇರಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯ ಚುನಾವಣಾಧಿಕಾರಿಯ ಪ್ರಕಾರ, ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 20 ಲಕ್ಷಕ್ಕೂ ಹೆಚ್ಚು ಹೆಸರುಗಳಲ್ಲಿ, 8.32 ಲಕ್ಷ ಮೃತಪಟ್ಟವರಾಗಿದ್ದಾರೆ. ಇನ್ನುಳಿದಂತೆ 10.07 ಲಕ್ಷ ಮತದಾರರು ಬೇರೆಡೆಗೆ ವಲಸೆ ಹೋಗಿದ್ದಾರೆ ಅಥವಾ ಗಣತಿ ಪ್ರಕ್ರಿಯೆಯ ಸಮಯದಲ್ಲಿ ಗೈರುಹಾಜರಾಗಿದ್ದರು ಮತ್ತು 1.58 ಲಕ್ಷ ಮತದಾರರು ವಿವಿಧ ಸ್ಥಳಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ನೋಂದಾಯಿಸಿಕೊಂಡಿರುವುದು ಕಂಡುಬಂದಿದೆ.

ಗಣತಿ ಪ್ರಕ್ರಿಯೆಯ ಸಮಯದಲ್ಲಿ ಸುಮಾರು 14,000 ಮತದಾರರು ತಮ್ಮ ಗಣತಿ ನಮೂನೆಗಳನ್ನು (ಫಾರ್ಮ್‌ಗಳನ್ನು) ಬೂತ್ ಮಟ್ಟದ ಅಧಿಕಾರಿಗಳಿಗೆ ಮರಳಿ ನೀಡಿಲ್ಲ ಎಂದು ಅವರು ತಿಳಿಸಿದ್ದಾರೆ.

“ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಮತದಾರರು, ತಮ್ಮ ಹಕ್ಕು ಅಥವಾ ಆಕ್ಷೇಪಣೆಯನ್ನು ಬಿಎಲ್‌ಒ ಮೂಲಕ ಅಥವಾ ಇಸಿಐನೆಟ್ ಮೊಬೈಲ್ ಆಪ್ ಅಥವಾ voters.eci.gov.in ವೆಬ್‌ಸೈಟ್ ಮೂಲಕ ಸಲ್ಲಿಸಬಹುದು” ಎಂದು ಗೋಪಾಲನ್ ಸುದ್ದಿಗಾರರಿಗೆ ಹೇಳಿದ್ದಾರೆ.

ಆಗಸ್ಟ್ 4ರವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು ಹಾಗೂ ಅಂತಿಮ ಮತದಾರರ ಪಟ್ಟಿಯನ್ನು ಸೆಪ್ಟೆಂಬರ್ 6ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

“ಯಾರಾದರೂ ತಮ್ಮ ಹೆಸರನ್ನು ಕರಡು ಮತದಾರರ ಪಟ್ಟಿಯಲ್ಲಿ ಹೊಂದಿಲ್ಲದಿದ್ದರೆ, ಅವರು ನಿಗದಿತ ನಮೂನೆಯನ್ನು (ಫಾರ್ಮ್) ಭರ್ತಿ ಮಾಡಿ, ಘೋಷಣಾ ಪತ್ರ ಮತ್ತು ಇತರ ದಾಖಲೆಗಳೊಂದಿಗೆ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕು” ಎಂದು ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ.

ಜುಲೈ 5ರಿಂದ ಆಗಸ್ಟ್ 4ರವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುತ್ತದೆ. ಆನಂತರ, 147 ಚುನಾವಣಾ ನೋಂದಣಿ ಅಧಿಕಾರಿಗಳು (EROs) ಮತ್ತು 994 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳು (AEROs) ಸೆಪ್ಟೆಂಬರ್ 2 ರೊಳಗೆ ಅರ್ಜಿಗಳನ್ನು ಪರಿಶೀಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

“ನಿಗದಿತ ಸಮಯದೊಳಗೆ ಎಲ್ಲಾ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುವುದನ್ನು ಖಚಿತಪಡಿಸಿಕೊಳ್ಳಲು, ಅಗತ್ಯವಿದ್ದರೆ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಲಾಗುವುದು” ಎಂದು ಗೋಪಾಲನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...