Homeಚಳವಳಿಒಡಿಸ್ಸಾ; ಗಣಿಗಾರಿಕೆ ವಿರುದ್ಧ ಹೋರಾಡಿದ 16 ಆದಿವಾಸಿಗಳ ಬಂಧನ

ಒಡಿಸ್ಸಾ; ಗಣಿಗಾರಿಕೆ ವಿರುದ್ಧ ಹೋರಾಡಿದ 16 ಆದಿವಾಸಿಗಳ ಬಂಧನ

ಪ್ರತಿಭಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ರಾಜ್ಯ ಸರ್ಕಾರ ಸೆಕ್ಷನ್ 144 ಅನ್ನು ಜಾರಿಗೊಳಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -
- Advertisement -

ಒಡಿಸ್ಸಾದ ಸುಂದರ್‌ಗರ್ ಜಿಲ್ಲೆಯಲ್ಲಿನ ಕುಲ್ಡ ಗಣಿಗಾರಿಕೆ ವಿಸ್ತರಣೆಯ ವಿರುದ್ಧ ಪ್ರತಿಭಟಿಸುತ್ತಿದ್ದ 16 ಆದಿವಾಸಿಗಳು ಮತ್ತು ಮುಖಂಡರನ್ನು ಫೆಬ್ರವರಿ 14 ರಂದು ಬಂಧಿಸಲಾಗಿದೆ ಎಂದು ನ್ಯೂಸ್‌ಕ್ಲಿಕ್ ವರದಿ ಮಾಡಿದೆ.

ರಾಜ್ಯದ ತಾಪ್ರಿಯ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಆದಿವಾಸಿ ಸಮುದಾಯಗಳು ವಾಸವಿದ್ದರೂ ಸಹ ಅಲ್ಲಿ ಕೇಂದ್ರ ಸರ್ಕಾರ ಕಲ್ಲಿದ್ದಲು ಗಣಿಗಾರಿಕೆಗೆ ಅವಕಾಶ ನೀಡುತ್ತಿದೆ. ಇದರಿಂದ ಸುತ್ತಲಿನ ಪ್ರದೇಶಗಳಲ್ಲಿ ತೀವ್ರ ವಾಯುಮಾಲಿನ್ಯ, ಅಂತರ್ಜಲ ನಾಶವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಪ್ರದೇಶವು ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ (ಪಿವಿಟಿಜಿ) ನೆಲೆಯಾಗಿದೆ. ಅವರು ಜನವರಿ 19 ರಿಂದ ಗಣಿಗಳ ವಿಸ್ತರಣೆಯನ್ನು ವಿರೋಧಿಸುತ್ತಿದ್ದಾರೆ. ಆದರೆ ಆ ಜನರನ್ನೇ ಅಲ್ಲಿಂದ ತೆರವುಗೊಳಿಸುವ ಸುದ್ದಿ ಬಂದ ನಂತರ ಈ ಪ್ರದೇಶದ 18 ಹಳ್ಳಿಗಳಲ್ಲಿ ಪ್ರತಿಭಟನೆಗಳು ಜೋರಾಗಿವೆ. ಪ್ರತಿಭಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ರಾಜ್ಯ ಸರ್ಕಾರ ಸೆಕ್ಷನ್ 144 ಅನ್ನು ಜಾರಿಗೊಳಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ನಮ್ಮೆಲ್ಲರನ್ನೂ ತಡೆಯುವ ಉದ್ದೇಶದಿಂದ 16 ಜನರನ್ನು ಬಂಧಿಸಲಾಗಿದೆ. ಪ್ರತಿಭಟನಾ ನಿರತ ಕಾರ್ಯಕರ್ತರ ಮೇಲೆ ಪೊಲೀಸ್ ಪಡೆಗಳು ಹಲ್ಲೆ ನಡೆಸಿವೆ. ಪ್ರತಿಭಟನೆ ನಿಲ್ಲಿಸದಿದ್ದರೆ ಅವರನ್ನು ಕೊಲ್ಲಲಾಗುತ್ತದೆ ಎಂದು ಬೆದರಿಸಲಾಗಿದೆ. ಅಲ್ಲದೆ ಕೊಲೆ ಯತ್ನ ಆರೋಪದ ಸೆಕ್ಷನ್ 307 ಅನ್ನು ಕಾರ್ಯಕರ್ತರ ಮೇಲೆ ದಾಖಲಿಸಲಾಗಿದೆ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧರಿಸಿದ್ದೇವೆ” ಎಂದು ಪ್ರತಿಭಟನಾನಿರತ ಕಾರ್ಯಕರ್ತರು ತಿಳಿಸಿದ್ದಾರೆ.

ಈ ಹಳ್ಳಿಗಳು ಖಾದಿಯಾ ಬುಡಕಟ್ಟು ಸಮುದಾಯ ಮತ್ತು ಇತರ ಬುಡಕಟ್ಟು ಜನಾಂಗಗಳಾದ ಓರಂ ಮತ್ತು ಗೋಂಡ್ ಸಮುದಾಯಗಳಿಗೆ ನೆಲೆಯಾಗಿದೆ. ಈ ಗಣಿಯಿಂದ ಛತ್ತಿಸ್‌ಗಡಕ್ಕೆ ಸಾಗಿಸುವ ಕಲ್ಲಿದ್ದಲು ಮತ್ತು ಅದರಿಂದ ಉತ್ಪತ್ತಿಯಾಗುವ ನೊಣ ಬೂದಿ ತಮ್ಮ ಕೃಷಿ ಭೂಮಿಗಳನ್ನು ಮತ್ತು ಅವುಗಳ ಜಲಮೂಲಗಳನ್ನು ಕಲುಷಿತಗೊಳಿಸಿದೆ. ಅವರ ಮನೆಗಳಲ್ಲಿ ಮತ್ತು ಅಂಗನವಾಡಿ ಕೇಂದ್ರಗಳಲ್ಲಿನ ಕುಡಿಯುವ ನೀರಿನ ಮೇಲೂ ಪರಿಣಾಮ ಬೀರುತ್ತದೆ ಎಂದು ಆದಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಗಣಿ ಸಾಮರ್ಥ್ಯವು ಪ್ರಸ್ತುತ 14 ದಶಲಕ್ಷ ಟನ್‌ಗಳಷ್ಟು (ಎಂಟಿಪಿಎ) ಇದ್ದು, ಅದನ್ನು 19.60 ಎಂಟಿಪಿಎ ಸಾಮರ್ಥ್ಯಕ್ಕೆ ಹೆಚ್ಚಿಸಲು ಸಿದ್ದತೆ ನಡೆದಿದೆ ಎನ್ನಲಾಗಿದೆ. ಇದನ್ನು ವಿರೋಧಿಸಿ ತಿಂಗಳಿನಿಂದಲೂ ಆದಿವಾಸಿಗಳು ಹೋರಾಟ ನಡೆಸುತ್ತಿದ್ದಾರೆ. ಈ ಗಣಿಯನ್ನು 2007 ರಿಂದ ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ (ಎಂಸಿಎಲ್) ನಡೆಸುತ್ತಿದೆ. ಕಳೆದ ವರ್ಷ ಹಳ್ಳಿಗಳಲ್ಲಿನ ಜನರ ವಿರೋಧದ ನಡುವೆಯೂ ಮುಂದಿನ 30 ವರ್ಷಗಳವರೆಗೆ ಕಾರ್ಯನಿರ್ವಹಣೆಯ ವಿಸ್ತರಣೆಯನ್ನು ಪಡೆದುಕೊಂಡಿದೆ.


ಇದನ್ನೂ ಓದಿ; ಕೊಸೊವೊ ಚುನಾವಣೆ: ಎಡಪಕ್ಷ ವೆಟೆವೆಂಡೋಸ್ಜೆಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...