Homeಚಳವಳಿಒಡಿಸ್ಸಾ; ಗಣಿಗಾರಿಕೆ ವಿರುದ್ಧ ಹೋರಾಡಿದ 16 ಆದಿವಾಸಿಗಳ ಬಂಧನ

ಒಡಿಸ್ಸಾ; ಗಣಿಗಾರಿಕೆ ವಿರುದ್ಧ ಹೋರಾಡಿದ 16 ಆದಿವಾಸಿಗಳ ಬಂಧನ

ಪ್ರತಿಭಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ರಾಜ್ಯ ಸರ್ಕಾರ ಸೆಕ್ಷನ್ 144 ಅನ್ನು ಜಾರಿಗೊಳಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -
- Advertisement -

ಒಡಿಸ್ಸಾದ ಸುಂದರ್‌ಗರ್ ಜಿಲ್ಲೆಯಲ್ಲಿನ ಕುಲ್ಡ ಗಣಿಗಾರಿಕೆ ವಿಸ್ತರಣೆಯ ವಿರುದ್ಧ ಪ್ರತಿಭಟಿಸುತ್ತಿದ್ದ 16 ಆದಿವಾಸಿಗಳು ಮತ್ತು ಮುಖಂಡರನ್ನು ಫೆಬ್ರವರಿ 14 ರಂದು ಬಂಧಿಸಲಾಗಿದೆ ಎಂದು ನ್ಯೂಸ್‌ಕ್ಲಿಕ್ ವರದಿ ಮಾಡಿದೆ.

ರಾಜ್ಯದ ತಾಪ್ರಿಯ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಆದಿವಾಸಿ ಸಮುದಾಯಗಳು ವಾಸವಿದ್ದರೂ ಸಹ ಅಲ್ಲಿ ಕೇಂದ್ರ ಸರ್ಕಾರ ಕಲ್ಲಿದ್ದಲು ಗಣಿಗಾರಿಕೆಗೆ ಅವಕಾಶ ನೀಡುತ್ತಿದೆ. ಇದರಿಂದ ಸುತ್ತಲಿನ ಪ್ರದೇಶಗಳಲ್ಲಿ ತೀವ್ರ ವಾಯುಮಾಲಿನ್ಯ, ಅಂತರ್ಜಲ ನಾಶವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಪ್ರದೇಶವು ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ (ಪಿವಿಟಿಜಿ) ನೆಲೆಯಾಗಿದೆ. ಅವರು ಜನವರಿ 19 ರಿಂದ ಗಣಿಗಳ ವಿಸ್ತರಣೆಯನ್ನು ವಿರೋಧಿಸುತ್ತಿದ್ದಾರೆ. ಆದರೆ ಆ ಜನರನ್ನೇ ಅಲ್ಲಿಂದ ತೆರವುಗೊಳಿಸುವ ಸುದ್ದಿ ಬಂದ ನಂತರ ಈ ಪ್ರದೇಶದ 18 ಹಳ್ಳಿಗಳಲ್ಲಿ ಪ್ರತಿಭಟನೆಗಳು ಜೋರಾಗಿವೆ. ಪ್ರತಿಭಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ರಾಜ್ಯ ಸರ್ಕಾರ ಸೆಕ್ಷನ್ 144 ಅನ್ನು ಜಾರಿಗೊಳಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ನಮ್ಮೆಲ್ಲರನ್ನೂ ತಡೆಯುವ ಉದ್ದೇಶದಿಂದ 16 ಜನರನ್ನು ಬಂಧಿಸಲಾಗಿದೆ. ಪ್ರತಿಭಟನಾ ನಿರತ ಕಾರ್ಯಕರ್ತರ ಮೇಲೆ ಪೊಲೀಸ್ ಪಡೆಗಳು ಹಲ್ಲೆ ನಡೆಸಿವೆ. ಪ್ರತಿಭಟನೆ ನಿಲ್ಲಿಸದಿದ್ದರೆ ಅವರನ್ನು ಕೊಲ್ಲಲಾಗುತ್ತದೆ ಎಂದು ಬೆದರಿಸಲಾಗಿದೆ. ಅಲ್ಲದೆ ಕೊಲೆ ಯತ್ನ ಆರೋಪದ ಸೆಕ್ಷನ್ 307 ಅನ್ನು ಕಾರ್ಯಕರ್ತರ ಮೇಲೆ ದಾಖಲಿಸಲಾಗಿದೆ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧರಿಸಿದ್ದೇವೆ” ಎಂದು ಪ್ರತಿಭಟನಾನಿರತ ಕಾರ್ಯಕರ್ತರು ತಿಳಿಸಿದ್ದಾರೆ.

ಈ ಹಳ್ಳಿಗಳು ಖಾದಿಯಾ ಬುಡಕಟ್ಟು ಸಮುದಾಯ ಮತ್ತು ಇತರ ಬುಡಕಟ್ಟು ಜನಾಂಗಗಳಾದ ಓರಂ ಮತ್ತು ಗೋಂಡ್ ಸಮುದಾಯಗಳಿಗೆ ನೆಲೆಯಾಗಿದೆ. ಈ ಗಣಿಯಿಂದ ಛತ್ತಿಸ್‌ಗಡಕ್ಕೆ ಸಾಗಿಸುವ ಕಲ್ಲಿದ್ದಲು ಮತ್ತು ಅದರಿಂದ ಉತ್ಪತ್ತಿಯಾಗುವ ನೊಣ ಬೂದಿ ತಮ್ಮ ಕೃಷಿ ಭೂಮಿಗಳನ್ನು ಮತ್ತು ಅವುಗಳ ಜಲಮೂಲಗಳನ್ನು ಕಲುಷಿತಗೊಳಿಸಿದೆ. ಅವರ ಮನೆಗಳಲ್ಲಿ ಮತ್ತು ಅಂಗನವಾಡಿ ಕೇಂದ್ರಗಳಲ್ಲಿನ ಕುಡಿಯುವ ನೀರಿನ ಮೇಲೂ ಪರಿಣಾಮ ಬೀರುತ್ತದೆ ಎಂದು ಆದಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಗಣಿ ಸಾಮರ್ಥ್ಯವು ಪ್ರಸ್ತುತ 14 ದಶಲಕ್ಷ ಟನ್‌ಗಳಷ್ಟು (ಎಂಟಿಪಿಎ) ಇದ್ದು, ಅದನ್ನು 19.60 ಎಂಟಿಪಿಎ ಸಾಮರ್ಥ್ಯಕ್ಕೆ ಹೆಚ್ಚಿಸಲು ಸಿದ್ದತೆ ನಡೆದಿದೆ ಎನ್ನಲಾಗಿದೆ. ಇದನ್ನು ವಿರೋಧಿಸಿ ತಿಂಗಳಿನಿಂದಲೂ ಆದಿವಾಸಿಗಳು ಹೋರಾಟ ನಡೆಸುತ್ತಿದ್ದಾರೆ. ಈ ಗಣಿಯನ್ನು 2007 ರಿಂದ ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ (ಎಂಸಿಎಲ್) ನಡೆಸುತ್ತಿದೆ. ಕಳೆದ ವರ್ಷ ಹಳ್ಳಿಗಳಲ್ಲಿನ ಜನರ ವಿರೋಧದ ನಡುವೆಯೂ ಮುಂದಿನ 30 ವರ್ಷಗಳವರೆಗೆ ಕಾರ್ಯನಿರ್ವಹಣೆಯ ವಿಸ್ತರಣೆಯನ್ನು ಪಡೆದುಕೊಂಡಿದೆ.


ಇದನ್ನೂ ಓದಿ; ಕೊಸೊವೊ ಚುನಾವಣೆ: ಎಡಪಕ್ಷ ವೆಟೆವೆಂಡೋಸ್ಜೆಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....