Homeಚಳವಳಿಒಡಿಸ್ಸಾ; ಗಣಿಗಾರಿಕೆ ವಿರುದ್ಧ ಹೋರಾಡಿದ 16 ಆದಿವಾಸಿಗಳ ಬಂಧನ

ಒಡಿಸ್ಸಾ; ಗಣಿಗಾರಿಕೆ ವಿರುದ್ಧ ಹೋರಾಡಿದ 16 ಆದಿವಾಸಿಗಳ ಬಂಧನ

ಪ್ರತಿಭಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ರಾಜ್ಯ ಸರ್ಕಾರ ಸೆಕ್ಷನ್ 144 ಅನ್ನು ಜಾರಿಗೊಳಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -
- Advertisement -

ಒಡಿಸ್ಸಾದ ಸುಂದರ್‌ಗರ್ ಜಿಲ್ಲೆಯಲ್ಲಿನ ಕುಲ್ಡ ಗಣಿಗಾರಿಕೆ ವಿಸ್ತರಣೆಯ ವಿರುದ್ಧ ಪ್ರತಿಭಟಿಸುತ್ತಿದ್ದ 16 ಆದಿವಾಸಿಗಳು ಮತ್ತು ಮುಖಂಡರನ್ನು ಫೆಬ್ರವರಿ 14 ರಂದು ಬಂಧಿಸಲಾಗಿದೆ ಎಂದು ನ್ಯೂಸ್‌ಕ್ಲಿಕ್ ವರದಿ ಮಾಡಿದೆ.

ರಾಜ್ಯದ ತಾಪ್ರಿಯ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಆದಿವಾಸಿ ಸಮುದಾಯಗಳು ವಾಸವಿದ್ದರೂ ಸಹ ಅಲ್ಲಿ ಕೇಂದ್ರ ಸರ್ಕಾರ ಕಲ್ಲಿದ್ದಲು ಗಣಿಗಾರಿಕೆಗೆ ಅವಕಾಶ ನೀಡುತ್ತಿದೆ. ಇದರಿಂದ ಸುತ್ತಲಿನ ಪ್ರದೇಶಗಳಲ್ಲಿ ತೀವ್ರ ವಾಯುಮಾಲಿನ್ಯ, ಅಂತರ್ಜಲ ನಾಶವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಪ್ರದೇಶವು ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ (ಪಿವಿಟಿಜಿ) ನೆಲೆಯಾಗಿದೆ. ಅವರು ಜನವರಿ 19 ರಿಂದ ಗಣಿಗಳ ವಿಸ್ತರಣೆಯನ್ನು ವಿರೋಧಿಸುತ್ತಿದ್ದಾರೆ. ಆದರೆ ಆ ಜನರನ್ನೇ ಅಲ್ಲಿಂದ ತೆರವುಗೊಳಿಸುವ ಸುದ್ದಿ ಬಂದ ನಂತರ ಈ ಪ್ರದೇಶದ 18 ಹಳ್ಳಿಗಳಲ್ಲಿ ಪ್ರತಿಭಟನೆಗಳು ಜೋರಾಗಿವೆ. ಪ್ರತಿಭಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ರಾಜ್ಯ ಸರ್ಕಾರ ಸೆಕ್ಷನ್ 144 ಅನ್ನು ಜಾರಿಗೊಳಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ನಮ್ಮೆಲ್ಲರನ್ನೂ ತಡೆಯುವ ಉದ್ದೇಶದಿಂದ 16 ಜನರನ್ನು ಬಂಧಿಸಲಾಗಿದೆ. ಪ್ರತಿಭಟನಾ ನಿರತ ಕಾರ್ಯಕರ್ತರ ಮೇಲೆ ಪೊಲೀಸ್ ಪಡೆಗಳು ಹಲ್ಲೆ ನಡೆಸಿವೆ. ಪ್ರತಿಭಟನೆ ನಿಲ್ಲಿಸದಿದ್ದರೆ ಅವರನ್ನು ಕೊಲ್ಲಲಾಗುತ್ತದೆ ಎಂದು ಬೆದರಿಸಲಾಗಿದೆ. ಅಲ್ಲದೆ ಕೊಲೆ ಯತ್ನ ಆರೋಪದ ಸೆಕ್ಷನ್ 307 ಅನ್ನು ಕಾರ್ಯಕರ್ತರ ಮೇಲೆ ದಾಖಲಿಸಲಾಗಿದೆ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧರಿಸಿದ್ದೇವೆ” ಎಂದು ಪ್ರತಿಭಟನಾನಿರತ ಕಾರ್ಯಕರ್ತರು ತಿಳಿಸಿದ್ದಾರೆ.

ಈ ಹಳ್ಳಿಗಳು ಖಾದಿಯಾ ಬುಡಕಟ್ಟು ಸಮುದಾಯ ಮತ್ತು ಇತರ ಬುಡಕಟ್ಟು ಜನಾಂಗಗಳಾದ ಓರಂ ಮತ್ತು ಗೋಂಡ್ ಸಮುದಾಯಗಳಿಗೆ ನೆಲೆಯಾಗಿದೆ. ಈ ಗಣಿಯಿಂದ ಛತ್ತಿಸ್‌ಗಡಕ್ಕೆ ಸಾಗಿಸುವ ಕಲ್ಲಿದ್ದಲು ಮತ್ತು ಅದರಿಂದ ಉತ್ಪತ್ತಿಯಾಗುವ ನೊಣ ಬೂದಿ ತಮ್ಮ ಕೃಷಿ ಭೂಮಿಗಳನ್ನು ಮತ್ತು ಅವುಗಳ ಜಲಮೂಲಗಳನ್ನು ಕಲುಷಿತಗೊಳಿಸಿದೆ. ಅವರ ಮನೆಗಳಲ್ಲಿ ಮತ್ತು ಅಂಗನವಾಡಿ ಕೇಂದ್ರಗಳಲ್ಲಿನ ಕುಡಿಯುವ ನೀರಿನ ಮೇಲೂ ಪರಿಣಾಮ ಬೀರುತ್ತದೆ ಎಂದು ಆದಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಗಣಿ ಸಾಮರ್ಥ್ಯವು ಪ್ರಸ್ತುತ 14 ದಶಲಕ್ಷ ಟನ್‌ಗಳಷ್ಟು (ಎಂಟಿಪಿಎ) ಇದ್ದು, ಅದನ್ನು 19.60 ಎಂಟಿಪಿಎ ಸಾಮರ್ಥ್ಯಕ್ಕೆ ಹೆಚ್ಚಿಸಲು ಸಿದ್ದತೆ ನಡೆದಿದೆ ಎನ್ನಲಾಗಿದೆ. ಇದನ್ನು ವಿರೋಧಿಸಿ ತಿಂಗಳಿನಿಂದಲೂ ಆದಿವಾಸಿಗಳು ಹೋರಾಟ ನಡೆಸುತ್ತಿದ್ದಾರೆ. ಈ ಗಣಿಯನ್ನು 2007 ರಿಂದ ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ (ಎಂಸಿಎಲ್) ನಡೆಸುತ್ತಿದೆ. ಕಳೆದ ವರ್ಷ ಹಳ್ಳಿಗಳಲ್ಲಿನ ಜನರ ವಿರೋಧದ ನಡುವೆಯೂ ಮುಂದಿನ 30 ವರ್ಷಗಳವರೆಗೆ ಕಾರ್ಯನಿರ್ವಹಣೆಯ ವಿಸ್ತರಣೆಯನ್ನು ಪಡೆದುಕೊಂಡಿದೆ.


ಇದನ್ನೂ ಓದಿ; ಕೊಸೊವೊ ಚುನಾವಣೆ: ಎಡಪಕ್ಷ ವೆಟೆವೆಂಡೋಸ್ಜೆಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...