Homeಅಂಕಣಗಳುಓಡಿಒಪಿ: ಎಲ್ಲದರೊಳಗು ಸ್ವತಂತ್ರ ಬೇಕು ಅಂದ್ರ ಹೆಂಗ? 1947ರೊಳಗ ಸಿಕ್ಕದಲ್ಲಾ ಸಾಕು

ಓಡಿಒಪಿ: ಎಲ್ಲದರೊಳಗು ಸ್ವತಂತ್ರ ಬೇಕು ಅಂದ್ರ ಹೆಂಗ? 1947ರೊಳಗ ಸಿಕ್ಕದಲ್ಲಾ ಸಾಕು

ಕೇಂದ್ರ ಕೃಷಿ ಮಂತ್ರಿ ನರೇಂದ್ರ ಸಿಂಗ್ ತೋಮರ. ಪ್ರಧಾನಿಯವರ ಹೆಸರನ್ನೇ ಇಟ್ಟುಕೊಂಡ ಈ ಸಚಿವರು ಅವರ ಹಂಗೇನೇ ಒಂದು ಆನ್‌ಲೈನ್ ಭಾಷಣ ಮಾಡಿದರು. ಅದರೊಳಗ ನಾವು ಈಗ ಏನು ಮಾಡಲಿಕ್ಕ ಹೊಂಟೆವಿ ಅಂದ್ರ ಅದು ಬಹಳ ಮುಖ್ಯ ಅದ. ಅದು ರೈತರಿಗೆ ಒಳ್ಳೆಯದಾಗತದ. ಅದನ್ನು ಎಲ್ಲರೂ ಸ್ವಾಗತಿಸಬೇಕು, ಅಂತ ಅಂದ್ರು. ಅದು ಎನಪಾ ಅಂದ್ರ ಒನ್ ಡಿಸ್ಟ್ರಿಕ್ಟ್ ಒನ್ ಕ್ರಾಪ್ ಅರ್ಥಾತ್ ಒಂದು ಜಿಲ್ಲೆ ಒಂದು ಬೆಳೆ .

- Advertisement -
- Advertisement -

ಕೋವಿಡ್ ಅನ್ನೋದು ಜನರಿಗೆ ಭಾರಿ ಕಷ್ಟ ಕೊಡುವ ಭೂತ ಆಗಿದ್ದರೂ, ಸರ್ಕಾರಕ್ಕ ದೇವರು ಕೊಟ್ಟ ವರ ಆಗಿಬಿಟ್ಟದ.

ಮೊದಲಿಗೆಲ್ಲಾ ಏನಾದರೂ ಸರ್ಕಾರಿ ಯೋಜನೆ, ಕಾರ್ಯಕ್ರಮ ಮಾಡೋದಿದ್ದರ ಅದಕ್ಕೊಂದು ದೊಡ್ಡ ಪೆಂಡಾಲ ಹಾಕಿ, ಮೈಕು ಸೆಟ್ಟು ತಂದು, ಅದರಾಗ ಎಸ್.ಪಿ ಬಾಲಸುಬ್ರಮಣ್ಯಂ ಹಾಡು ಹಾಕಿಸಿ, ಮೈದಾನದಾಗ ಕುರ್ಚಿ ಹಾಕಿ, ಆ ಕುರ್ಚಿ ಮ್ಯಾಲೆ ಕೂಡಲಿಕ್ಕೆ ಸಾವಿರಾರು ಜನನ ಹಿಡಕೊಂಡು ಬಂದು ಕೂಡಿಸಿ, ಅವರಿಗೆ ಊಟದ ವ್ಯವಸ್ಥಾ ಮಾಡಿ, ಇಷ್ಟೆಲ್ಲಾ ಮಾಡಿದ ಮ್ಯಾಲೆ ಭಾಷಣ ಮಾಡೋರನ್ನ ಕರಕೊಂಡು ಬಂದು ಅವರಿಗೆ ಭಾಷಣ ಬರದುಕೊಟ್ಟು, ಅವರ ಕಡೆ ಮಾತು ಆಡಿಸಿ, ಸಾಲಿ ಹುಡುಗರ ಕಡೆ ಸ್ವಾಗತ ಗೀತೆ ಹೇಳಿಸಿ, ಉದ್ದನ ಜಡೆ ಹುಡುಗಿಯರ ಕಡೆ ಬಹುಮಾನದ ತಾಟು ಕೊಟ್ಟು, ಐದಾರು ಸರತೆ ಅಡ್ಡಾಡಿಸಿ, ಕಡಿಕೆ ಕನ್ನಡ ಸಾಲಿ ಮಾಸ್ಟರ್ ಕಡೆ ಅಭಿನಂದನಾ ಭಾಷಣ ಮಾಡಿಸಿ, ಅವರು ಎಲ್ಲಾರಿಗೆ ಧನ್ಯವಾದ ಹೇಳಿ ಜೈ ಹಿಂದ್ ಜೈ ಕರ್ನಾಟಕ ಹೇಳಿದ ಮ್ಯಾಲೆ ಕಾರ್ಯಕ್ರಮ ಮುಗುದ ಹೋಗತಿತ್ತು.

ಈಗ ಈ ಕೊರೊನಾ ರಾಕ್ಷಸನ ಸಲುವಾಗಿ ಎಲ್ಲಾ ಆಫ್‌ಲೈನ್ (ಅಂದ್ರ ಮೈದಾನದ ಒಳಗ ಎಲ್ಲಾರ ಮುಂದ ಖುಲ್ಲಮ ಖುಲ್ಲ ಕಾರ್ಯಕ್ರಮ) ಬಂದ್ ಆಗಿ ಬರೆ ಆನ್‌ಲೈನ್ (ಅಂದ್ರ ಬಾಗಿಲು ಮುಚ್ಚಿಕೊಂಡು ಕಂಪ್ಯೂಟರ್‌ದಾಗ ಮಾತಾಡೋದು) ಚಾಲೂ ಆಗಿಬಿಟ್ಟಾವು.

ಮೈದಾನದ ಕಾರ್ಯಕ್ರಮ ಆದರ ಪೇಪರ್, ಟಿವಿಯವರು ಬರತಿದ್ದರು, ಭಾಷಣ ಕೇಳತಿದ್ದರು, ಎನಾರ ಸುದ್ದಿ ಆಗತಿತ್ತು. ಈಗ ಮುಚ್ಚಿದ ಬಾಗಲ ಹಿಂದ ಏನು ನಡಿತದೋ ಏನೋ, ಗೊತ್ತಿಲ್ಲ. ಅವರು ಇದು ಸುದ್ದಿ ಅಂತ ಹೇಳಿದ್ದು, ಇದನ್ನ ಬರೀರಿ, ಇದನ್ನ ಬರಿಬೇಡ್ರಿ, ಅಂತ ಫರ್ಮಾನು ಹೊರಡಿಸಿಬಿಟ್ಟರ ಆತು. ಅದೇ ಸುದ್ದಿ. ಕಾರ್ಯಕ್ರಮ ಮುಗದು ಧನ್ಯವಾದ ಅಂತ ಹೇಳೋ ಮೊದಲೇ ಅದರ ಸುದ್ದಿ ನಮ್ಮ ಸಾಮಾಜಿಕ ಜಾಲತಾಣದಾಗ ಬಂದುಬಿಟ್ಟಿರತದ. ಅದಕ್ಕಿಂತ ಮೊದಲ ಅದರ ಪರ-ವಿರೋಧದ ಚರ್ಚೆ ಆರಂಭ ಆಗಿ ದೋಸ್ತರ ನಡುವೆ ಜಗಳ ಆಗಿಬಿಟ್ಟಿರತದ. ಇಂತಹುದೆ ಒಂದು ಆನ್‌ಲೈನ್ ಕಾರ್ಯಕ್ರಮ ದೆಹಲಿಯ ದಂತ ಗೋಪುರದ ಯಾವುದೋ ಒಂದು ಕೋಣೆಯ ಒಂದು ಮುಚ್ಚಿದ ಬಾಗಿಲ ಹಿಂದೆ ನಡೆಯಿತು. ಅದರ ಹೆಸರು ಓಡಿಒಪಿ. ಅದನ್ನ ಮಾಡಿ ಓಡಿಹೋದವರು ಕೇಂದ್ರ ಕೃಷಿ ಮಂತ್ರಿ ನರೇಂದ್ರ ಸಿಂಗ್ ತೋಮರ. ಪ್ರಧಾನಿಯವರ ಹೆಸರನ್ನೇ ಇಟ್ಟುಕೊಂಡ ಈ ಸಚಿವರು ಅವರ ಹಂಗೇನೇ ಒಂದು ಆನ್‌ಲೈನ್ ಭಾಷಣ ಮಾಡಿದರು.

ಅದರೊಳಗ ನಾವು ಈಗ ಏನು ಮಾಡಲಿಕ್ಕ ಹೊಂಟೆವಿ ಅಂದ್ರ ಅದು ಬಹಳ ಮುಖ್ಯ ಅದ. ಅದು ರೈತರಿಗೆ ಒಳ್ಳೆಯದಾಗತದ. ಅದನ್ನು ಎಲ್ಲರೂ ಸ್ವಾಗತಿಸಬೇಕು, ಅಂತ ಅಂದ್ರು. ಅದು ಎನಪಾ ಅಂದ್ರ ಒನ್ ಡಿಸ್ಟ್ರಿಕ್ಟ್ ಒನ್ ಕ್ರಾಪ್ ಅರ್ಥಾತ್ ಒಂದು ಜಿಲ್ಲೆ ಒಂದು ಬೆಳೆ.

ಅದೇ ಧಾಟಿಯೊಳಗ ನಮ್ಮ ತೆರೆಯ ಮೇಲಿನ ಕೌರವ ಹಾಗೂ ತೆರೆಯ ಹಿಂದಿನ ನಾಯಕನಾದ ಬಸನಗೌಡ ಚನ್ನ ಬಸನಗೌಡ ಪಾಟೀಲ್, ಕೃಷಿ ಮಂತ್ರಿಗಳು ಸಾಕಿನ ಹೀರೆಕೆರೂರು – ಬ್ಯಾಡಗಿಲ್ಲಿ ಒಂದು ಖತರನಾಕ ಡೈಲಾಗ್ ಹೊಡೆದರು. ರೈತರು ವೀಕ್ ಮೈಂಡ್ ಆಗಿ ಸೆಲ್ಫ್ ಸೂಯಿಸೈಡ್ ಮಾಡಿಕೊಳತಾರ ಅಂತ ಒಂದು ಬಿಟ್ಟು ಎರಡು ಸಾರಿ ಹೇಳಿದರು. ಅದಕ್ಕೆ ಸರ್ಕಾರದ ನೀತಿ ಕಾರಣ ಅಲ್ಲ ಅಂತನೂ ಹೇಳಿದರು.

PC : KNN India

ಇವೆಲ್ಲ ಬಿಡಿ. ಅವರು ಹೇಳಿದ ದೊಡ್ಡ ಮಾತು ಅಂದ್ರ ಓಡಿಒಪಿ ಅನ್ನುವುದು ರೈತರ ಕಲ್ಯಾಣಕ್ಕಾಗಿ ಆಕಾಶದಿಂದ ಇಳಿದುಬಂದ ಯೋಜನೆ ಅಂತ.

ಹಂಗಾರ ಈ ಯೋಜನೆ ಏನು? ಎಲ್ಲಿಂದ ಬಂತು? ಇದರಾಗ ಒಂದು ಮಾತು ಎನಪಾ ಅಂದ್ರ ಖಾಸಗಿ ಕಂಪನಿಯವರು ನಾವು ಈ ವರ್ಷ ಈ ಆಹಾರ ಖಾದ್ಯವನ್ನು ಪ್ಲಾಸ್ಟಿಕ್ ಚೀಲದೊಳಗ ಪ್ಯಾಕ್ ಮಾಡಿ ಮಾರಾಟ ಮಾಡಬೇಕು ಅಂತ ಮಾಡೇವಿ ಅಂತ ಸರ್ಕಾರಕ್ಕ ಹೇಳತಾರ. ಸರಕಾರ ಜಿ ಹಾಂ ಅಂತ ಹೇಳಿ ರೈತರಿಗೆ ಇದನ್ನ ಬೆಳೆಯಿರಿ ಅಂತ ಹೇಳತದ. ಸರಕಾರ ಹೇಳತದ ಅಂತ ನಮ್ಮವರು ಬೆಳಿತಾರ. ಅದನ್ನ ಆ ಕಂಪನಿಯವರು ಖರೀದಿ ಮಾಡಿ ಅದನ್ನ ಒಣಗಿಸಿ, ಉಪ್ಪು ಖಾರ ಹಾಕಿ ಮಾರಾಟ ಮಾಡತಾರ. ಇದರೊಳಗ ಪ್ಲಾಸ್ಟಿಕ್ ಚೀಲ ಮಾಡಿದವರು ಒಬ್ಬರು, ಆಹಾರ ಧಾನ್ಯ ಬೆಳೆದವರು ಇನ್ನೊಬ್ಬರು, ಉಪ್ಪು ಖಾರ ಹಾಕುವ ಜಾಬ್ ವರ್ಕ್ ಮಾಡಿವರು ಮತ್ತೊಬ್ಬರು. ಆದರ ಫಾಯದಾ ಮಾಡಿಕೊಂಡವರು ಮಾತ್ರ ಸರ್ಕಾರದ ಗೆಳೆಯರಾಗಿರುವ ಕಂಪನಿಯವರು.

ಆ ಕಂಪನಿಗಳಿಗೆ ಬಹಳ ಓಡಾಟ ಆಗಬಾರದು. ಅವರಿಗೆ ಬ್ಯಾರೆ ಬ್ಯಾರೆ ಊರಿನ ನೀರು ಕುಡಿದು ನೆಗಡಿ-ಕೆಮ್ಮ ಆಗಬಾರದು ಅಂತ ಸರ್ಕಾರದವರು ಒಂದು ಜಿಲ್ಲೆಗೆ ಒಂದು ಬೆಳೆ ಸಿಗೋ ಹಂಗ ಆಗಬೇಕು ಅಂತ ಹೇಳಿ ರೈತರಿಗೆ ಈ ಯೋಜನೆ ತೊಗೊಂಡು ಬಂದಾರ.

ರೈತರು ಎನಂದರೂ ಶ್ರಮ ಜೀವಿಗಳು, ಬಿಸಿಲು-ಮಳೆ-ಚಳಿ-ಗಾಳಿ ಒಳಗ ಕೆಲಸ ಮಾಡಿ ಅಭ್ಯಾಸ ಇದ್ದವರು. ಪಾಪ, ಕಂಪನಿ ಒಳಗ ಕೆಲಸ ಮಾಡೋ ಎಂಬಿಎಗಳಿಗೆ ಜಮೀನಿಗೆ ಹೋಗು ಅಂದ್ರ ಹೆಂಗ? ಕೆಲಸ ಮಾಡೋ ಮುಂದ ಅವರ ಸೂಟು-ಬೂಟು ಟೈ ತೆಗೆದು ಇಡಲಿಕ್ಕೆ ಜಮೀನು ಒಳಗ ಶುಭ್ರ ವಾದ ಸ್ವಚ್ಛ ಜಾಗ ಎಲ್ಲೆ ಸಿಗಬೇಕು?

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದ ಕೃಷಿ ಸಚಿವ ಬಿ.ಸಿ.ಪಾಟೀಲ್
ಬಿ.ಸಿ. ಪಾಟೀಲ್.

ಸರಕಾರ ಹೇಳಿದ ಹಂಗ ಕೇಳಿದರ ಸರಕಾರ ಎಲ್ಲಾ ರೀತಿಯ ತರಬೇತಿ-ಸಹಕಾರ ಕೊಡತದ. ಅಮೆರಿಕ-ಯೂರೋಪುನಲ್ಲಿ ಓದಿ ಓಡೋಡಿ ಬಂದ, ತಮ್ಮ ಜೀವನದಲ್ಲಿ ಕೇವಲ ಯೂಟ್ಯೂಬುಗಳಲ್ಲಿ ಮಾತ್ರ ಜಮೀನು ನೋಡಿ ಎಲ್ಲಾ ಕಲೆ ಕಲಿತುಕೊಂಡಿರುವ ಕೃಷಿ ಪಂಡಿತರು ತಲೆತಲಾಂತರದಿಂದ ಕೃಷಿ ಮಾಡುತ್ತಿರುವ ರೈತರಿಗೆ ತರಬೇತಿ ಕೊಡತಾರ. ಪೂರ್ತಿ ಇಂಗ್ಲಿಷಿನಲ್ಲಿ ಮಾತ ಆಡೋದಿಲ್ಲ. ನಡುನಡುವೆ ಕನ್ನಡ ಮಾತು ಅಡತಾರ. ‘ನಾ ಹೇಳ್ತಾ ಇರೋದು ತಿಳಿತಲ್ಲಾ, ಇಟ್ ಈಸ್ ವೆರೀ ಸಿಂಪಲ್’ ಅಂತ ಎಲ್ಲಾ ಕನ್ನಡ ಮಾತಾಡತಾರ.

ಕಂಪನಿಯವರು ಬೀಜ ಕೊಡತಾರ, ಗೊಬ್ಬರ ಕೊಡತಾರ, ಸಾಲ ಕೊಡತಾರ, ಡ್ರಿಪ್ ಇರಿಗೇಷನ್ ಕೊಡತಾರ, ಅವರ ಮಾತು ಕೇಳಿದರ ಇಸ್ರೇಲಿಗೆ ಕರಕೊಂಡು ಹೋಗತಾರ.

ಹಂಗ ಅಂತ ಯಾರಾದರೂ ರೈತರು ಅವರ ಮಾತು ಕೇಳಲೆ ಇಲ್ಲ ಅಂದ್ರ ಏನು ಮಾಡತಾರ? ಏನು ಮಾಡೋದಿಲ್ಲ. ಬಹಳ ಅಂದ್ರ ಸರಳ ಸಾಲ ಸಿಗಲಿಕ್ಕೆ ಇಲ್ಲ, ಬೀಜ ಗೊಬ್ಬರ ಕಷ್ಟ ಆಗಬಹುದು, ಬೆಳೆ ವಿಮೆ ಕಷ್ಟ ಆಗಬಹುದು, ಅಷ್ಟ. ಅಥವಾ ರೈತರಿಗೆ ತಮಗೆ ಬೇಕಾದ ಬೆಳೆ ಬೆಳಿಯಲಿಕ್ಕೆ ಆಗಲಿಕ್ಕಿಲ್ಲ. ಎಲ್ಲದರೊಳಗು ಸ್ವತಂತ್ರ ಬೇಕು ಅಂದ್ರ ಹೆಂಗ? 1947ರೊಳಗ ಸಿಕ್ಕದಲ್ಲಾ ಸಾಕು.

ರೊಕ್ಕ ಅನ್ನೋದು ಎಲ್ಲಕ್ಕಿಂತ ದೊಡ್ಡದು. ಸ್ವಾತಂತ್ರ ಯಾರಿಗೆ ಬೇಕು? ಅಷ್ಟೂ ಗೊತ್ತಿಲ್ಲ ಅಂದ್ರ ಹೆಂಗ?


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....