Homeಕರ್ನಾಟಕಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

ಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

- Advertisement -
- Advertisement -

ಕೋವಿಡ್‌ ವೇಳೆ ಕರ್ತವ್ಯ ನಿರ್ವಹಿಸಿ ಮರಣ ಹೊಂದಿದ ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಹೇಳಿತ್ತು. ಕೋವಿಡ್‌ ಕರ್ತವ್ಯ ವೇಳೆ ಜೀವ ಕಳೆದುಕೊಂಡ 368 ಮಂದಿ ಸಾರಿಗೆ ನೌಕರರಲ್ಲಿ 11 ಮಂದಿಗೆ ಮಾತ್ರ ಪರಿಹಾರ ಧನ ದೊರೆತಿದೆ ಎಂಬುದು ಬೆಳಕಿಗೆ ಬಂದಿದೆ.

ಎಷ್ಟು ಮಂದಿಗೆ ಪರಿಹಾರ ದೊರೆತಿದೆ ಎಂದು ಆರ್‌ಟಿಐ ಮೂಲಕ ಕೇಳಲಾಗಿತ್ತು. ಸರ್ಕಾರ ಬಹಿರಂಗಪಡಿಸಿರುವ ಮಾಹಿತಿಯು ಟೈಮ್ಸ್‌ ನೌ ನೆಟ್‌ವರ್ಕ್‌‌ಗೆ ಲಭ್ಯವಾಗಿದ್ದು, 11 ಮಂದಿಗೆ ಮಾತ್ರ ಈವರೆಗೆ ಪರಿಹಾರ ದೊರೆತಿದೆ ಎಂಬುದು ತಿಳಿದುಬಂದಿದೆ.

ಕೋವಿಡ್‌‌ ಎಲ್ಲೆಡೆ ಆತಂಕ ಸೃಷ್ಟಿಸಿ, ಜೀವಕ್ಕೆ ಅಪಾಯ ತಂದಿದ್ದ ಸಂದರ್ಭದಲ್ಲಿ ಜನರಿಗಾಗಿ ಸೇವೆ ಸಲ್ಲಿಸಿದ ಕೋವಿಡ್‌ ವಾರಿಯರ್‌ಗಳಲ್ಲಿ ಸಾರಿಗೆ ಸಿಬ್ಬಂದಿಗಳು ಸೇರಿದ್ದಾರೆ. ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಪ್ರಯಾಣ ಬೆಳೆಸಲು ಒದ್ದಾಡುತ್ತಿದ್ದ ಸಂದರ್ಭದಲ್ಲಿ, ಊರಿಗೆ ಮರಳಲು ಸಾಧ್ಯವಾಗದೆ ಕಾರ್ಮಿಕರು ಕಾಲ್ನಡಿಗೆ ಆರಂಭಿಸಿದ್ದಾಗ ಸಾರಿಗೆ ನೌಕರರ ಸೇವೆಯು ಮಹತ್ವದ್ದಾಗಿತ್ತು.

ಶಾಸಕರಿಗೆ ಬೇಕಾದದ್ದನ್ನು ಮಾಡಿಕೊಳ್ಳುವ ಸರ್ಕಾರ, ಸಾರ್ವಜನಿಕ ಸೇವೆಯಲ್ಲಿರುವವರ ಸಾವಿಗೆ ಪರಿಹಾರ ನೀಡುವುದನ್ನು ಮರೆತಿದೆ. ಕೋವಿಡ್‌ ವೇಳೆ ಸೇವೆ ಸಲ್ಲಿಸಿದ ಸಾರಿಗೆ ಸಿಬ್ಬಂದಿಗೆ ಸಾವನ್ನಪ್ಪಿದರೆ 30 ಲಕ್ಷ ರೂ. ನೀಡುವುದಾಗಿ ಸರ್ಕಾರ ತಿಳಿಸಿತ್ತು. ಆದರೆ ಎರಡು ವರ್ಷಗಳಾದರೂ ಪರಿಹಾರ ಧನ ಬಿಡುಗಡೆಯಾಗಿಲ್ಲ.

ಟೈಮ್ಸ್‌ನೌ ನೆಟ್‌ವರ್ಕ್‌ಗೆ ಲಭ್ಯವಾಗಿರುವ ಮಾಹಿತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ ಹೊರಬಂದಿದ್ದು, “ಇದು ನಿಜಕ್ಕೂ ದುರಂತ. ಸರ್ಕಾರ ಇದಕ್ಕೆ ನೇರ ಹೊಣೆ. ಇದು ಸರ್ಕಾರದಿಂದ ಆದ ಕೊಲೆಯಲ್ಲದೆ ಮತ್ತೇನೂ ಅಲ್ಲ. ಜಾಹೀರಾತು ಹಾಗೂ ಇತರೆ ಮುಖ್ಯವಲ್ಲದ ವಿಚಾರಗಳಿಗೆ ಸರ್ಕಾರ ಹಣ ವಿನಿಯೋಗಿಸುತ್ತಿದೆ. ಆದರೆ ಇಂತಹ ಸಂಗತಿಗಳಿಗೆ ಆದ್ಯತೆ ನೀಡಬೇಕಿದೆ” ಎಂದು ವೆಲ್‌ಫೇರ್‌ ಪಾರ್ಟಿ ಆಫ್‌ ಇಂಡಿಯಾದ ಆರ್‌‌ಟಿಐ ಕಾರ್ಯಕರ್ತ ತಾಹಿರ್‌ ಹುಸೇನ್‌ ಒತ್ತಾಯಿಸಿದ್ದಾರೆ.

 ಇದನ್ನೂ ಓದಿರಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ಕಾಂಗ್ರೆಸ್‌ ಮುಖಂಡ ಬ್ರಿಜೇಶ್‌ ಕಾಳಪ್ಪ ಪ್ರತಿಕ್ರಿಯಿಸಿ, “ಕೆಲವೇ ಕೆಲವರಿಗೆ ಮಾತ್ರ ಸರ್ಕಾರ ಪರಿಹಾರ ನೀಡಿದೆ ಎಂಬುದು ಆತಂಕಕಾರಿ ಸಂಗತಿ. ಇದು ಅಪರಾಧ ಕೃತ್ಯವೂ ಹೌದು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಶ್ರೀರಾಮುಲು ಪ್ರತಿಕ್ರಿಯೆ

ಟೈಮ್ಸ್‌ನೌಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, “ಸೇವೆಯಲ್ಲಿದ್ದಾಗ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಮನೆಯಲ್ಲಿದ್ದು ಸಾವನ್ನಪ್ಪಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಎಲ್ಲ ಎಂ.ಡಿ.ಗಳಿಗೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಶೀಘ್ರವಾಗಿ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ತಾಹೀರ್‌ ಹುಸೇನ್‌ ಅವರು ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳಿಗೂ ಆರ್‌ಟಿಐ ಅರ್ಜಿ ಸಲ್ಲಿಸಿ ಪಡೆದಿರುವ ಮಾಹಿತಿಯನ್ನು ‘ನಾನುಗೌರಿ.ಕಾಂ’ ಕಲೆ ಹಾಕಿದೆ.

ಕಲಬುರಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ನೀಡಿರುವ ಪ್ರತಿಕ್ರಿಯೆಯಲ್ಲಿ, “ಕೋವಿಡ್‌ನಿಂದ ಸಾವನ್ನಪ್ಪಿದ 24 ಸಿಬ್ಬಂದಿಯ ದಾಖಲೆಗಳು ಸಲ್ಲಿಕೆಯಾಗಿವೆ. ಪರಿಹಾರದ ಮೊತ್ತದ ಕ್ರಮ ಪರಿಶೀಲನೆಯಲ್ಲಿದೆ” ಎಂದು ತಿಳಿಸಲಾಗಿದೆ.

***

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ಬಂದಿರುವ ಉತ್ತರದಲ್ಲಿ, “ಮೊದಲನೇ ಅಲೆಯಲ್ಲಿ 39 ಮಂದಿ, ಎರಡನೇ ಅಲೆಯಲ್ಲಿ 57 ಮಂದಿ ಸಿಬ್ಬಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಅವರಲ್ಲಿ 7 ಮಂದಿಯ ಕುಟುಂಬಗಳಿಗೆ ಮಾತ್ರ ಪರಿಹಾರ ವಿತರಿಸಲಾಗಿದೆ” ಎಂದು ತಿಳಿಸಲಾಗಿದೆ.

***

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯು ನೀಡಿರುವ ಮಾಹಿತಿಯಲ್ಲಿ, “ಮಾರ್ಚ್ 2020ರಿಂದ ಮಾರ್ಚ್ 2021ರವರೆಗೆ ಒಟ್ಟು 32 ಸಿಬ್ಬಂದಿ, ಏಪ್ರಿಲ್‌ 2021ರಿಂದ ಜೂನ್‌ 21ರವರೆಗಿನ ಅವಧಿಯಲ್ಲಿ ಒಟ್ಟು 48 ಸಿಬ್ಬಂದಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಸದರಿ ಪ್ರಕರಣಗಳಲ್ಲಿ ನೌಕರರ ಅವಲಂಬಿತರಿಗೆ ಯಾವುದೇ ಪರಿಹಾರ ದೊರೆತ್ತಿಲ್ಲ” ಎಂದು ತಿಳಿಸಲಾಗಿದೆ.

***

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೀಡಿರುವ ಮಾಹಿತಿಯಲ್ಲಿ, “ಮಾರ್ಚ್‌ 2020ರಿಂದ ಜುಲೈ 2021ರ ಅವಧಿಯಲ್ಲಿ ಬಿಎಂಟಿಸಿಯ 108 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಅದರಲ್ಲಿ ನಾಲ್ಕು ಜನರ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ” ಎಂದು ತಿಳಿಸಲಾಗಿದೆ.


ಇದನ್ನೂ ಓದಿರಿ: ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...