Homeಕರ್ನಾಟಕಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

ಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

- Advertisement -
- Advertisement -

ಕೋವಿಡ್‌ ವೇಳೆ ಕರ್ತವ್ಯ ನಿರ್ವಹಿಸಿ ಮರಣ ಹೊಂದಿದ ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಹೇಳಿತ್ತು. ಕೋವಿಡ್‌ ಕರ್ತವ್ಯ ವೇಳೆ ಜೀವ ಕಳೆದುಕೊಂಡ 368 ಮಂದಿ ಸಾರಿಗೆ ನೌಕರರಲ್ಲಿ 11 ಮಂದಿಗೆ ಮಾತ್ರ ಪರಿಹಾರ ಧನ ದೊರೆತಿದೆ ಎಂಬುದು ಬೆಳಕಿಗೆ ಬಂದಿದೆ.

ಎಷ್ಟು ಮಂದಿಗೆ ಪರಿಹಾರ ದೊರೆತಿದೆ ಎಂದು ಆರ್‌ಟಿಐ ಮೂಲಕ ಕೇಳಲಾಗಿತ್ತು. ಸರ್ಕಾರ ಬಹಿರಂಗಪಡಿಸಿರುವ ಮಾಹಿತಿಯು ಟೈಮ್ಸ್‌ ನೌ ನೆಟ್‌ವರ್ಕ್‌‌ಗೆ ಲಭ್ಯವಾಗಿದ್ದು, 11 ಮಂದಿಗೆ ಮಾತ್ರ ಈವರೆಗೆ ಪರಿಹಾರ ದೊರೆತಿದೆ ಎಂಬುದು ತಿಳಿದುಬಂದಿದೆ.

ಕೋವಿಡ್‌‌ ಎಲ್ಲೆಡೆ ಆತಂಕ ಸೃಷ್ಟಿಸಿ, ಜೀವಕ್ಕೆ ಅಪಾಯ ತಂದಿದ್ದ ಸಂದರ್ಭದಲ್ಲಿ ಜನರಿಗಾಗಿ ಸೇವೆ ಸಲ್ಲಿಸಿದ ಕೋವಿಡ್‌ ವಾರಿಯರ್‌ಗಳಲ್ಲಿ ಸಾರಿಗೆ ಸಿಬ್ಬಂದಿಗಳು ಸೇರಿದ್ದಾರೆ. ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಪ್ರಯಾಣ ಬೆಳೆಸಲು ಒದ್ದಾಡುತ್ತಿದ್ದ ಸಂದರ್ಭದಲ್ಲಿ, ಊರಿಗೆ ಮರಳಲು ಸಾಧ್ಯವಾಗದೆ ಕಾರ್ಮಿಕರು ಕಾಲ್ನಡಿಗೆ ಆರಂಭಿಸಿದ್ದಾಗ ಸಾರಿಗೆ ನೌಕರರ ಸೇವೆಯು ಮಹತ್ವದ್ದಾಗಿತ್ತು.

ಶಾಸಕರಿಗೆ ಬೇಕಾದದ್ದನ್ನು ಮಾಡಿಕೊಳ್ಳುವ ಸರ್ಕಾರ, ಸಾರ್ವಜನಿಕ ಸೇವೆಯಲ್ಲಿರುವವರ ಸಾವಿಗೆ ಪರಿಹಾರ ನೀಡುವುದನ್ನು ಮರೆತಿದೆ. ಕೋವಿಡ್‌ ವೇಳೆ ಸೇವೆ ಸಲ್ಲಿಸಿದ ಸಾರಿಗೆ ಸಿಬ್ಬಂದಿಗೆ ಸಾವನ್ನಪ್ಪಿದರೆ 30 ಲಕ್ಷ ರೂ. ನೀಡುವುದಾಗಿ ಸರ್ಕಾರ ತಿಳಿಸಿತ್ತು. ಆದರೆ ಎರಡು ವರ್ಷಗಳಾದರೂ ಪರಿಹಾರ ಧನ ಬಿಡುಗಡೆಯಾಗಿಲ್ಲ.

ಟೈಮ್ಸ್‌ನೌ ನೆಟ್‌ವರ್ಕ್‌ಗೆ ಲಭ್ಯವಾಗಿರುವ ಮಾಹಿತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ ಹೊರಬಂದಿದ್ದು, “ಇದು ನಿಜಕ್ಕೂ ದುರಂತ. ಸರ್ಕಾರ ಇದಕ್ಕೆ ನೇರ ಹೊಣೆ. ಇದು ಸರ್ಕಾರದಿಂದ ಆದ ಕೊಲೆಯಲ್ಲದೆ ಮತ್ತೇನೂ ಅಲ್ಲ. ಜಾಹೀರಾತು ಹಾಗೂ ಇತರೆ ಮುಖ್ಯವಲ್ಲದ ವಿಚಾರಗಳಿಗೆ ಸರ್ಕಾರ ಹಣ ವಿನಿಯೋಗಿಸುತ್ತಿದೆ. ಆದರೆ ಇಂತಹ ಸಂಗತಿಗಳಿಗೆ ಆದ್ಯತೆ ನೀಡಬೇಕಿದೆ” ಎಂದು ವೆಲ್‌ಫೇರ್‌ ಪಾರ್ಟಿ ಆಫ್‌ ಇಂಡಿಯಾದ ಆರ್‌‌ಟಿಐ ಕಾರ್ಯಕರ್ತ ತಾಹಿರ್‌ ಹುಸೇನ್‌ ಒತ್ತಾಯಿಸಿದ್ದಾರೆ.

 ಇದನ್ನೂ ಓದಿರಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ಕಾಂಗ್ರೆಸ್‌ ಮುಖಂಡ ಬ್ರಿಜೇಶ್‌ ಕಾಳಪ್ಪ ಪ್ರತಿಕ್ರಿಯಿಸಿ, “ಕೆಲವೇ ಕೆಲವರಿಗೆ ಮಾತ್ರ ಸರ್ಕಾರ ಪರಿಹಾರ ನೀಡಿದೆ ಎಂಬುದು ಆತಂಕಕಾರಿ ಸಂಗತಿ. ಇದು ಅಪರಾಧ ಕೃತ್ಯವೂ ಹೌದು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಶ್ರೀರಾಮುಲು ಪ್ರತಿಕ್ರಿಯೆ

ಟೈಮ್ಸ್‌ನೌಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, “ಸೇವೆಯಲ್ಲಿದ್ದಾಗ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಮನೆಯಲ್ಲಿದ್ದು ಸಾವನ್ನಪ್ಪಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಎಲ್ಲ ಎಂ.ಡಿ.ಗಳಿಗೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಶೀಘ್ರವಾಗಿ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ತಾಹೀರ್‌ ಹುಸೇನ್‌ ಅವರು ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳಿಗೂ ಆರ್‌ಟಿಐ ಅರ್ಜಿ ಸಲ್ಲಿಸಿ ಪಡೆದಿರುವ ಮಾಹಿತಿಯನ್ನು ‘ನಾನುಗೌರಿ.ಕಾಂ’ ಕಲೆ ಹಾಕಿದೆ.

ಕಲಬುರಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ನೀಡಿರುವ ಪ್ರತಿಕ್ರಿಯೆಯಲ್ಲಿ, “ಕೋವಿಡ್‌ನಿಂದ ಸಾವನ್ನಪ್ಪಿದ 24 ಸಿಬ್ಬಂದಿಯ ದಾಖಲೆಗಳು ಸಲ್ಲಿಕೆಯಾಗಿವೆ. ಪರಿಹಾರದ ಮೊತ್ತದ ಕ್ರಮ ಪರಿಶೀಲನೆಯಲ್ಲಿದೆ” ಎಂದು ತಿಳಿಸಲಾಗಿದೆ.

***

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ಬಂದಿರುವ ಉತ್ತರದಲ್ಲಿ, “ಮೊದಲನೇ ಅಲೆಯಲ್ಲಿ 39 ಮಂದಿ, ಎರಡನೇ ಅಲೆಯಲ್ಲಿ 57 ಮಂದಿ ಸಿಬ್ಬಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಅವರಲ್ಲಿ 7 ಮಂದಿಯ ಕುಟುಂಬಗಳಿಗೆ ಮಾತ್ರ ಪರಿಹಾರ ವಿತರಿಸಲಾಗಿದೆ” ಎಂದು ತಿಳಿಸಲಾಗಿದೆ.

***

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯು ನೀಡಿರುವ ಮಾಹಿತಿಯಲ್ಲಿ, “ಮಾರ್ಚ್ 2020ರಿಂದ ಮಾರ್ಚ್ 2021ರವರೆಗೆ ಒಟ್ಟು 32 ಸಿಬ್ಬಂದಿ, ಏಪ್ರಿಲ್‌ 2021ರಿಂದ ಜೂನ್‌ 21ರವರೆಗಿನ ಅವಧಿಯಲ್ಲಿ ಒಟ್ಟು 48 ಸಿಬ್ಬಂದಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಸದರಿ ಪ್ರಕರಣಗಳಲ್ಲಿ ನೌಕರರ ಅವಲಂಬಿತರಿಗೆ ಯಾವುದೇ ಪರಿಹಾರ ದೊರೆತ್ತಿಲ್ಲ” ಎಂದು ತಿಳಿಸಲಾಗಿದೆ.

***

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೀಡಿರುವ ಮಾಹಿತಿಯಲ್ಲಿ, “ಮಾರ್ಚ್‌ 2020ರಿಂದ ಜುಲೈ 2021ರ ಅವಧಿಯಲ್ಲಿ ಬಿಎಂಟಿಸಿಯ 108 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಅದರಲ್ಲಿ ನಾಲ್ಕು ಜನರ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ” ಎಂದು ತಿಳಿಸಲಾಗಿದೆ.


ಇದನ್ನೂ ಓದಿರಿ: ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...