Homeಕರ್ನಾಟಕಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

ಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

- Advertisement -
- Advertisement -

ಕೋವಿಡ್‌ ವೇಳೆ ಕರ್ತವ್ಯ ನಿರ್ವಹಿಸಿ ಮರಣ ಹೊಂದಿದ ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಹೇಳಿತ್ತು. ಕೋವಿಡ್‌ ಕರ್ತವ್ಯ ವೇಳೆ ಜೀವ ಕಳೆದುಕೊಂಡ 368 ಮಂದಿ ಸಾರಿಗೆ ನೌಕರರಲ್ಲಿ 11 ಮಂದಿಗೆ ಮಾತ್ರ ಪರಿಹಾರ ಧನ ದೊರೆತಿದೆ ಎಂಬುದು ಬೆಳಕಿಗೆ ಬಂದಿದೆ.

ಎಷ್ಟು ಮಂದಿಗೆ ಪರಿಹಾರ ದೊರೆತಿದೆ ಎಂದು ಆರ್‌ಟಿಐ ಮೂಲಕ ಕೇಳಲಾಗಿತ್ತು. ಸರ್ಕಾರ ಬಹಿರಂಗಪಡಿಸಿರುವ ಮಾಹಿತಿಯು ಟೈಮ್ಸ್‌ ನೌ ನೆಟ್‌ವರ್ಕ್‌‌ಗೆ ಲಭ್ಯವಾಗಿದ್ದು, 11 ಮಂದಿಗೆ ಮಾತ್ರ ಈವರೆಗೆ ಪರಿಹಾರ ದೊರೆತಿದೆ ಎಂಬುದು ತಿಳಿದುಬಂದಿದೆ.

ಕೋವಿಡ್‌‌ ಎಲ್ಲೆಡೆ ಆತಂಕ ಸೃಷ್ಟಿಸಿ, ಜೀವಕ್ಕೆ ಅಪಾಯ ತಂದಿದ್ದ ಸಂದರ್ಭದಲ್ಲಿ ಜನರಿಗಾಗಿ ಸೇವೆ ಸಲ್ಲಿಸಿದ ಕೋವಿಡ್‌ ವಾರಿಯರ್‌ಗಳಲ್ಲಿ ಸಾರಿಗೆ ಸಿಬ್ಬಂದಿಗಳು ಸೇರಿದ್ದಾರೆ. ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಪ್ರಯಾಣ ಬೆಳೆಸಲು ಒದ್ದಾಡುತ್ತಿದ್ದ ಸಂದರ್ಭದಲ್ಲಿ, ಊರಿಗೆ ಮರಳಲು ಸಾಧ್ಯವಾಗದೆ ಕಾರ್ಮಿಕರು ಕಾಲ್ನಡಿಗೆ ಆರಂಭಿಸಿದ್ದಾಗ ಸಾರಿಗೆ ನೌಕರರ ಸೇವೆಯು ಮಹತ್ವದ್ದಾಗಿತ್ತು.

ಶಾಸಕರಿಗೆ ಬೇಕಾದದ್ದನ್ನು ಮಾಡಿಕೊಳ್ಳುವ ಸರ್ಕಾರ, ಸಾರ್ವಜನಿಕ ಸೇವೆಯಲ್ಲಿರುವವರ ಸಾವಿಗೆ ಪರಿಹಾರ ನೀಡುವುದನ್ನು ಮರೆತಿದೆ. ಕೋವಿಡ್‌ ವೇಳೆ ಸೇವೆ ಸಲ್ಲಿಸಿದ ಸಾರಿಗೆ ಸಿಬ್ಬಂದಿಗೆ ಸಾವನ್ನಪ್ಪಿದರೆ 30 ಲಕ್ಷ ರೂ. ನೀಡುವುದಾಗಿ ಸರ್ಕಾರ ತಿಳಿಸಿತ್ತು. ಆದರೆ ಎರಡು ವರ್ಷಗಳಾದರೂ ಪರಿಹಾರ ಧನ ಬಿಡುಗಡೆಯಾಗಿಲ್ಲ.

ಟೈಮ್ಸ್‌ನೌ ನೆಟ್‌ವರ್ಕ್‌ಗೆ ಲಭ್ಯವಾಗಿರುವ ಮಾಹಿತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ ಹೊರಬಂದಿದ್ದು, “ಇದು ನಿಜಕ್ಕೂ ದುರಂತ. ಸರ್ಕಾರ ಇದಕ್ಕೆ ನೇರ ಹೊಣೆ. ಇದು ಸರ್ಕಾರದಿಂದ ಆದ ಕೊಲೆಯಲ್ಲದೆ ಮತ್ತೇನೂ ಅಲ್ಲ. ಜಾಹೀರಾತು ಹಾಗೂ ಇತರೆ ಮುಖ್ಯವಲ್ಲದ ವಿಚಾರಗಳಿಗೆ ಸರ್ಕಾರ ಹಣ ವಿನಿಯೋಗಿಸುತ್ತಿದೆ. ಆದರೆ ಇಂತಹ ಸಂಗತಿಗಳಿಗೆ ಆದ್ಯತೆ ನೀಡಬೇಕಿದೆ” ಎಂದು ವೆಲ್‌ಫೇರ್‌ ಪಾರ್ಟಿ ಆಫ್‌ ಇಂಡಿಯಾದ ಆರ್‌‌ಟಿಐ ಕಾರ್ಯಕರ್ತ ತಾಹಿರ್‌ ಹುಸೇನ್‌ ಒತ್ತಾಯಿಸಿದ್ದಾರೆ.

 ಇದನ್ನೂ ಓದಿರಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ಕಾಂಗ್ರೆಸ್‌ ಮುಖಂಡ ಬ್ರಿಜೇಶ್‌ ಕಾಳಪ್ಪ ಪ್ರತಿಕ್ರಿಯಿಸಿ, “ಕೆಲವೇ ಕೆಲವರಿಗೆ ಮಾತ್ರ ಸರ್ಕಾರ ಪರಿಹಾರ ನೀಡಿದೆ ಎಂಬುದು ಆತಂಕಕಾರಿ ಸಂಗತಿ. ಇದು ಅಪರಾಧ ಕೃತ್ಯವೂ ಹೌದು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಶ್ರೀರಾಮುಲು ಪ್ರತಿಕ್ರಿಯೆ

ಟೈಮ್ಸ್‌ನೌಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, “ಸೇವೆಯಲ್ಲಿದ್ದಾಗ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಮನೆಯಲ್ಲಿದ್ದು ಸಾವನ್ನಪ್ಪಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಎಲ್ಲ ಎಂ.ಡಿ.ಗಳಿಗೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಶೀಘ್ರವಾಗಿ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ತಾಹೀರ್‌ ಹುಸೇನ್‌ ಅವರು ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳಿಗೂ ಆರ್‌ಟಿಐ ಅರ್ಜಿ ಸಲ್ಲಿಸಿ ಪಡೆದಿರುವ ಮಾಹಿತಿಯನ್ನು ‘ನಾನುಗೌರಿ.ಕಾಂ’ ಕಲೆ ಹಾಕಿದೆ.

ಕಲಬುರಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ನೀಡಿರುವ ಪ್ರತಿಕ್ರಿಯೆಯಲ್ಲಿ, “ಕೋವಿಡ್‌ನಿಂದ ಸಾವನ್ನಪ್ಪಿದ 24 ಸಿಬ್ಬಂದಿಯ ದಾಖಲೆಗಳು ಸಲ್ಲಿಕೆಯಾಗಿವೆ. ಪರಿಹಾರದ ಮೊತ್ತದ ಕ್ರಮ ಪರಿಶೀಲನೆಯಲ್ಲಿದೆ” ಎಂದು ತಿಳಿಸಲಾಗಿದೆ.

***

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ಬಂದಿರುವ ಉತ್ತರದಲ್ಲಿ, “ಮೊದಲನೇ ಅಲೆಯಲ್ಲಿ 39 ಮಂದಿ, ಎರಡನೇ ಅಲೆಯಲ್ಲಿ 57 ಮಂದಿ ಸಿಬ್ಬಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಅವರಲ್ಲಿ 7 ಮಂದಿಯ ಕುಟುಂಬಗಳಿಗೆ ಮಾತ್ರ ಪರಿಹಾರ ವಿತರಿಸಲಾಗಿದೆ” ಎಂದು ತಿಳಿಸಲಾಗಿದೆ.

***

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯು ನೀಡಿರುವ ಮಾಹಿತಿಯಲ್ಲಿ, “ಮಾರ್ಚ್ 2020ರಿಂದ ಮಾರ್ಚ್ 2021ರವರೆಗೆ ಒಟ್ಟು 32 ಸಿಬ್ಬಂದಿ, ಏಪ್ರಿಲ್‌ 2021ರಿಂದ ಜೂನ್‌ 21ರವರೆಗಿನ ಅವಧಿಯಲ್ಲಿ ಒಟ್ಟು 48 ಸಿಬ್ಬಂದಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಸದರಿ ಪ್ರಕರಣಗಳಲ್ಲಿ ನೌಕರರ ಅವಲಂಬಿತರಿಗೆ ಯಾವುದೇ ಪರಿಹಾರ ದೊರೆತ್ತಿಲ್ಲ” ಎಂದು ತಿಳಿಸಲಾಗಿದೆ.

***

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೀಡಿರುವ ಮಾಹಿತಿಯಲ್ಲಿ, “ಮಾರ್ಚ್‌ 2020ರಿಂದ ಜುಲೈ 2021ರ ಅವಧಿಯಲ್ಲಿ ಬಿಎಂಟಿಸಿಯ 108 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಅದರಲ್ಲಿ ನಾಲ್ಕು ಜನರ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ” ಎಂದು ತಿಳಿಸಲಾಗಿದೆ.


ಇದನ್ನೂ ಓದಿರಿ: ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...