Homeಕರ್ನಾಟಕಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

ಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

- Advertisement -
- Advertisement -

ಕೋವಿಡ್‌ ವೇಳೆ ಕರ್ತವ್ಯ ನಿರ್ವಹಿಸಿ ಮರಣ ಹೊಂದಿದ ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಹೇಳಿತ್ತು. ಕೋವಿಡ್‌ ಕರ್ತವ್ಯ ವೇಳೆ ಜೀವ ಕಳೆದುಕೊಂಡ 368 ಮಂದಿ ಸಾರಿಗೆ ನೌಕರರಲ್ಲಿ 11 ಮಂದಿಗೆ ಮಾತ್ರ ಪರಿಹಾರ ಧನ ದೊರೆತಿದೆ ಎಂಬುದು ಬೆಳಕಿಗೆ ಬಂದಿದೆ.

ಎಷ್ಟು ಮಂದಿಗೆ ಪರಿಹಾರ ದೊರೆತಿದೆ ಎಂದು ಆರ್‌ಟಿಐ ಮೂಲಕ ಕೇಳಲಾಗಿತ್ತು. ಸರ್ಕಾರ ಬಹಿರಂಗಪಡಿಸಿರುವ ಮಾಹಿತಿಯು ಟೈಮ್ಸ್‌ ನೌ ನೆಟ್‌ವರ್ಕ್‌‌ಗೆ ಲಭ್ಯವಾಗಿದ್ದು, 11 ಮಂದಿಗೆ ಮಾತ್ರ ಈವರೆಗೆ ಪರಿಹಾರ ದೊರೆತಿದೆ ಎಂಬುದು ತಿಳಿದುಬಂದಿದೆ.

ಕೋವಿಡ್‌‌ ಎಲ್ಲೆಡೆ ಆತಂಕ ಸೃಷ್ಟಿಸಿ, ಜೀವಕ್ಕೆ ಅಪಾಯ ತಂದಿದ್ದ ಸಂದರ್ಭದಲ್ಲಿ ಜನರಿಗಾಗಿ ಸೇವೆ ಸಲ್ಲಿಸಿದ ಕೋವಿಡ್‌ ವಾರಿಯರ್‌ಗಳಲ್ಲಿ ಸಾರಿಗೆ ಸಿಬ್ಬಂದಿಗಳು ಸೇರಿದ್ದಾರೆ. ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಪ್ರಯಾಣ ಬೆಳೆಸಲು ಒದ್ದಾಡುತ್ತಿದ್ದ ಸಂದರ್ಭದಲ್ಲಿ, ಊರಿಗೆ ಮರಳಲು ಸಾಧ್ಯವಾಗದೆ ಕಾರ್ಮಿಕರು ಕಾಲ್ನಡಿಗೆ ಆರಂಭಿಸಿದ್ದಾಗ ಸಾರಿಗೆ ನೌಕರರ ಸೇವೆಯು ಮಹತ್ವದ್ದಾಗಿತ್ತು.

ಶಾಸಕರಿಗೆ ಬೇಕಾದದ್ದನ್ನು ಮಾಡಿಕೊಳ್ಳುವ ಸರ್ಕಾರ, ಸಾರ್ವಜನಿಕ ಸೇವೆಯಲ್ಲಿರುವವರ ಸಾವಿಗೆ ಪರಿಹಾರ ನೀಡುವುದನ್ನು ಮರೆತಿದೆ. ಕೋವಿಡ್‌ ವೇಳೆ ಸೇವೆ ಸಲ್ಲಿಸಿದ ಸಾರಿಗೆ ಸಿಬ್ಬಂದಿಗೆ ಸಾವನ್ನಪ್ಪಿದರೆ 30 ಲಕ್ಷ ರೂ. ನೀಡುವುದಾಗಿ ಸರ್ಕಾರ ತಿಳಿಸಿತ್ತು. ಆದರೆ ಎರಡು ವರ್ಷಗಳಾದರೂ ಪರಿಹಾರ ಧನ ಬಿಡುಗಡೆಯಾಗಿಲ್ಲ.

ಟೈಮ್ಸ್‌ನೌ ನೆಟ್‌ವರ್ಕ್‌ಗೆ ಲಭ್ಯವಾಗಿರುವ ಮಾಹಿತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ ಹೊರಬಂದಿದ್ದು, “ಇದು ನಿಜಕ್ಕೂ ದುರಂತ. ಸರ್ಕಾರ ಇದಕ್ಕೆ ನೇರ ಹೊಣೆ. ಇದು ಸರ್ಕಾರದಿಂದ ಆದ ಕೊಲೆಯಲ್ಲದೆ ಮತ್ತೇನೂ ಅಲ್ಲ. ಜಾಹೀರಾತು ಹಾಗೂ ಇತರೆ ಮುಖ್ಯವಲ್ಲದ ವಿಚಾರಗಳಿಗೆ ಸರ್ಕಾರ ಹಣ ವಿನಿಯೋಗಿಸುತ್ತಿದೆ. ಆದರೆ ಇಂತಹ ಸಂಗತಿಗಳಿಗೆ ಆದ್ಯತೆ ನೀಡಬೇಕಿದೆ” ಎಂದು ವೆಲ್‌ಫೇರ್‌ ಪಾರ್ಟಿ ಆಫ್‌ ಇಂಡಿಯಾದ ಆರ್‌‌ಟಿಐ ಕಾರ್ಯಕರ್ತ ತಾಹಿರ್‌ ಹುಸೇನ್‌ ಒತ್ತಾಯಿಸಿದ್ದಾರೆ.

 ಇದನ್ನೂ ಓದಿರಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ಕಾಂಗ್ರೆಸ್‌ ಮುಖಂಡ ಬ್ರಿಜೇಶ್‌ ಕಾಳಪ್ಪ ಪ್ರತಿಕ್ರಿಯಿಸಿ, “ಕೆಲವೇ ಕೆಲವರಿಗೆ ಮಾತ್ರ ಸರ್ಕಾರ ಪರಿಹಾರ ನೀಡಿದೆ ಎಂಬುದು ಆತಂಕಕಾರಿ ಸಂಗತಿ. ಇದು ಅಪರಾಧ ಕೃತ್ಯವೂ ಹೌದು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಶ್ರೀರಾಮುಲು ಪ್ರತಿಕ್ರಿಯೆ

ಟೈಮ್ಸ್‌ನೌಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, “ಸೇವೆಯಲ್ಲಿದ್ದಾಗ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಮನೆಯಲ್ಲಿದ್ದು ಸಾವನ್ನಪ್ಪಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಎಲ್ಲ ಎಂ.ಡಿ.ಗಳಿಗೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಶೀಘ್ರವಾಗಿ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ತಾಹೀರ್‌ ಹುಸೇನ್‌ ಅವರು ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳಿಗೂ ಆರ್‌ಟಿಐ ಅರ್ಜಿ ಸಲ್ಲಿಸಿ ಪಡೆದಿರುವ ಮಾಹಿತಿಯನ್ನು ‘ನಾನುಗೌರಿ.ಕಾಂ’ ಕಲೆ ಹಾಕಿದೆ.

ಕಲಬುರಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ನೀಡಿರುವ ಪ್ರತಿಕ್ರಿಯೆಯಲ್ಲಿ, “ಕೋವಿಡ್‌ನಿಂದ ಸಾವನ್ನಪ್ಪಿದ 24 ಸಿಬ್ಬಂದಿಯ ದಾಖಲೆಗಳು ಸಲ್ಲಿಕೆಯಾಗಿವೆ. ಪರಿಹಾರದ ಮೊತ್ತದ ಕ್ರಮ ಪರಿಶೀಲನೆಯಲ್ಲಿದೆ” ಎಂದು ತಿಳಿಸಲಾಗಿದೆ.

***

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ಬಂದಿರುವ ಉತ್ತರದಲ್ಲಿ, “ಮೊದಲನೇ ಅಲೆಯಲ್ಲಿ 39 ಮಂದಿ, ಎರಡನೇ ಅಲೆಯಲ್ಲಿ 57 ಮಂದಿ ಸಿಬ್ಬಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಅವರಲ್ಲಿ 7 ಮಂದಿಯ ಕುಟುಂಬಗಳಿಗೆ ಮಾತ್ರ ಪರಿಹಾರ ವಿತರಿಸಲಾಗಿದೆ” ಎಂದು ತಿಳಿಸಲಾಗಿದೆ.

***

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯು ನೀಡಿರುವ ಮಾಹಿತಿಯಲ್ಲಿ, “ಮಾರ್ಚ್ 2020ರಿಂದ ಮಾರ್ಚ್ 2021ರವರೆಗೆ ಒಟ್ಟು 32 ಸಿಬ್ಬಂದಿ, ಏಪ್ರಿಲ್‌ 2021ರಿಂದ ಜೂನ್‌ 21ರವರೆಗಿನ ಅವಧಿಯಲ್ಲಿ ಒಟ್ಟು 48 ಸಿಬ್ಬಂದಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಸದರಿ ಪ್ರಕರಣಗಳಲ್ಲಿ ನೌಕರರ ಅವಲಂಬಿತರಿಗೆ ಯಾವುದೇ ಪರಿಹಾರ ದೊರೆತ್ತಿಲ್ಲ” ಎಂದು ತಿಳಿಸಲಾಗಿದೆ.

***

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೀಡಿರುವ ಮಾಹಿತಿಯಲ್ಲಿ, “ಮಾರ್ಚ್‌ 2020ರಿಂದ ಜುಲೈ 2021ರ ಅವಧಿಯಲ್ಲಿ ಬಿಎಂಟಿಸಿಯ 108 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಅದರಲ್ಲಿ ನಾಲ್ಕು ಜನರ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ” ಎಂದು ತಿಳಿಸಲಾಗಿದೆ.


ಇದನ್ನೂ ಓದಿರಿ: ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...