Homeಕರ್ನಾಟಕಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

ಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

- Advertisement -
- Advertisement -

ಕೋವಿಡ್‌ ವೇಳೆ ಕರ್ತವ್ಯ ನಿರ್ವಹಿಸಿ ಮರಣ ಹೊಂದಿದ ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಹೇಳಿತ್ತು. ಕೋವಿಡ್‌ ಕರ್ತವ್ಯ ವೇಳೆ ಜೀವ ಕಳೆದುಕೊಂಡ 368 ಮಂದಿ ಸಾರಿಗೆ ನೌಕರರಲ್ಲಿ 11 ಮಂದಿಗೆ ಮಾತ್ರ ಪರಿಹಾರ ಧನ ದೊರೆತಿದೆ ಎಂಬುದು ಬೆಳಕಿಗೆ ಬಂದಿದೆ.

ಎಷ್ಟು ಮಂದಿಗೆ ಪರಿಹಾರ ದೊರೆತಿದೆ ಎಂದು ಆರ್‌ಟಿಐ ಮೂಲಕ ಕೇಳಲಾಗಿತ್ತು. ಸರ್ಕಾರ ಬಹಿರಂಗಪಡಿಸಿರುವ ಮಾಹಿತಿಯು ಟೈಮ್ಸ್‌ ನೌ ನೆಟ್‌ವರ್ಕ್‌‌ಗೆ ಲಭ್ಯವಾಗಿದ್ದು, 11 ಮಂದಿಗೆ ಮಾತ್ರ ಈವರೆಗೆ ಪರಿಹಾರ ದೊರೆತಿದೆ ಎಂಬುದು ತಿಳಿದುಬಂದಿದೆ.

ಕೋವಿಡ್‌‌ ಎಲ್ಲೆಡೆ ಆತಂಕ ಸೃಷ್ಟಿಸಿ, ಜೀವಕ್ಕೆ ಅಪಾಯ ತಂದಿದ್ದ ಸಂದರ್ಭದಲ್ಲಿ ಜನರಿಗಾಗಿ ಸೇವೆ ಸಲ್ಲಿಸಿದ ಕೋವಿಡ್‌ ವಾರಿಯರ್‌ಗಳಲ್ಲಿ ಸಾರಿಗೆ ಸಿಬ್ಬಂದಿಗಳು ಸೇರಿದ್ದಾರೆ. ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಪ್ರಯಾಣ ಬೆಳೆಸಲು ಒದ್ದಾಡುತ್ತಿದ್ದ ಸಂದರ್ಭದಲ್ಲಿ, ಊರಿಗೆ ಮರಳಲು ಸಾಧ್ಯವಾಗದೆ ಕಾರ್ಮಿಕರು ಕಾಲ್ನಡಿಗೆ ಆರಂಭಿಸಿದ್ದಾಗ ಸಾರಿಗೆ ನೌಕರರ ಸೇವೆಯು ಮಹತ್ವದ್ದಾಗಿತ್ತು.

ಶಾಸಕರಿಗೆ ಬೇಕಾದದ್ದನ್ನು ಮಾಡಿಕೊಳ್ಳುವ ಸರ್ಕಾರ, ಸಾರ್ವಜನಿಕ ಸೇವೆಯಲ್ಲಿರುವವರ ಸಾವಿಗೆ ಪರಿಹಾರ ನೀಡುವುದನ್ನು ಮರೆತಿದೆ. ಕೋವಿಡ್‌ ವೇಳೆ ಸೇವೆ ಸಲ್ಲಿಸಿದ ಸಾರಿಗೆ ಸಿಬ್ಬಂದಿಗೆ ಸಾವನ್ನಪ್ಪಿದರೆ 30 ಲಕ್ಷ ರೂ. ನೀಡುವುದಾಗಿ ಸರ್ಕಾರ ತಿಳಿಸಿತ್ತು. ಆದರೆ ಎರಡು ವರ್ಷಗಳಾದರೂ ಪರಿಹಾರ ಧನ ಬಿಡುಗಡೆಯಾಗಿಲ್ಲ.

ಟೈಮ್ಸ್‌ನೌ ನೆಟ್‌ವರ್ಕ್‌ಗೆ ಲಭ್ಯವಾಗಿರುವ ಮಾಹಿತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ ಹೊರಬಂದಿದ್ದು, “ಇದು ನಿಜಕ್ಕೂ ದುರಂತ. ಸರ್ಕಾರ ಇದಕ್ಕೆ ನೇರ ಹೊಣೆ. ಇದು ಸರ್ಕಾರದಿಂದ ಆದ ಕೊಲೆಯಲ್ಲದೆ ಮತ್ತೇನೂ ಅಲ್ಲ. ಜಾಹೀರಾತು ಹಾಗೂ ಇತರೆ ಮುಖ್ಯವಲ್ಲದ ವಿಚಾರಗಳಿಗೆ ಸರ್ಕಾರ ಹಣ ವಿನಿಯೋಗಿಸುತ್ತಿದೆ. ಆದರೆ ಇಂತಹ ಸಂಗತಿಗಳಿಗೆ ಆದ್ಯತೆ ನೀಡಬೇಕಿದೆ” ಎಂದು ವೆಲ್‌ಫೇರ್‌ ಪಾರ್ಟಿ ಆಫ್‌ ಇಂಡಿಯಾದ ಆರ್‌‌ಟಿಐ ಕಾರ್ಯಕರ್ತ ತಾಹಿರ್‌ ಹುಸೇನ್‌ ಒತ್ತಾಯಿಸಿದ್ದಾರೆ.

 ಇದನ್ನೂ ಓದಿರಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ಕಾಂಗ್ರೆಸ್‌ ಮುಖಂಡ ಬ್ರಿಜೇಶ್‌ ಕಾಳಪ್ಪ ಪ್ರತಿಕ್ರಿಯಿಸಿ, “ಕೆಲವೇ ಕೆಲವರಿಗೆ ಮಾತ್ರ ಸರ್ಕಾರ ಪರಿಹಾರ ನೀಡಿದೆ ಎಂಬುದು ಆತಂಕಕಾರಿ ಸಂಗತಿ. ಇದು ಅಪರಾಧ ಕೃತ್ಯವೂ ಹೌದು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಶ್ರೀರಾಮುಲು ಪ್ರತಿಕ್ರಿಯೆ

ಟೈಮ್ಸ್‌ನೌಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, “ಸೇವೆಯಲ್ಲಿದ್ದಾಗ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಮನೆಯಲ್ಲಿದ್ದು ಸಾವನ್ನಪ್ಪಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಎಲ್ಲ ಎಂ.ಡಿ.ಗಳಿಗೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಶೀಘ್ರವಾಗಿ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ತಾಹೀರ್‌ ಹುಸೇನ್‌ ಅವರು ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳಿಗೂ ಆರ್‌ಟಿಐ ಅರ್ಜಿ ಸಲ್ಲಿಸಿ ಪಡೆದಿರುವ ಮಾಹಿತಿಯನ್ನು ‘ನಾನುಗೌರಿ.ಕಾಂ’ ಕಲೆ ಹಾಕಿದೆ.

ಕಲಬುರಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ನೀಡಿರುವ ಪ್ರತಿಕ್ರಿಯೆಯಲ್ಲಿ, “ಕೋವಿಡ್‌ನಿಂದ ಸಾವನ್ನಪ್ಪಿದ 24 ಸಿಬ್ಬಂದಿಯ ದಾಖಲೆಗಳು ಸಲ್ಲಿಕೆಯಾಗಿವೆ. ಪರಿಹಾರದ ಮೊತ್ತದ ಕ್ರಮ ಪರಿಶೀಲನೆಯಲ್ಲಿದೆ” ಎಂದು ತಿಳಿಸಲಾಗಿದೆ.

***

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ಬಂದಿರುವ ಉತ್ತರದಲ್ಲಿ, “ಮೊದಲನೇ ಅಲೆಯಲ್ಲಿ 39 ಮಂದಿ, ಎರಡನೇ ಅಲೆಯಲ್ಲಿ 57 ಮಂದಿ ಸಿಬ್ಬಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಅವರಲ್ಲಿ 7 ಮಂದಿಯ ಕುಟುಂಬಗಳಿಗೆ ಮಾತ್ರ ಪರಿಹಾರ ವಿತರಿಸಲಾಗಿದೆ” ಎಂದು ತಿಳಿಸಲಾಗಿದೆ.

***

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯು ನೀಡಿರುವ ಮಾಹಿತಿಯಲ್ಲಿ, “ಮಾರ್ಚ್ 2020ರಿಂದ ಮಾರ್ಚ್ 2021ರವರೆಗೆ ಒಟ್ಟು 32 ಸಿಬ್ಬಂದಿ, ಏಪ್ರಿಲ್‌ 2021ರಿಂದ ಜೂನ್‌ 21ರವರೆಗಿನ ಅವಧಿಯಲ್ಲಿ ಒಟ್ಟು 48 ಸಿಬ್ಬಂದಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಸದರಿ ಪ್ರಕರಣಗಳಲ್ಲಿ ನೌಕರರ ಅವಲಂಬಿತರಿಗೆ ಯಾವುದೇ ಪರಿಹಾರ ದೊರೆತ್ತಿಲ್ಲ” ಎಂದು ತಿಳಿಸಲಾಗಿದೆ.

***

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೀಡಿರುವ ಮಾಹಿತಿಯಲ್ಲಿ, “ಮಾರ್ಚ್‌ 2020ರಿಂದ ಜುಲೈ 2021ರ ಅವಧಿಯಲ್ಲಿ ಬಿಎಂಟಿಸಿಯ 108 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಅದರಲ್ಲಿ ನಾಲ್ಕು ಜನರ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ” ಎಂದು ತಿಳಿಸಲಾಗಿದೆ.


ಇದನ್ನೂ ಓದಿರಿ: ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...