Homeಕರ್ನಾಟಕಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

ಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

- Advertisement -
- Advertisement -

ಕೋವಿಡ್‌ ವೇಳೆ ಕರ್ತವ್ಯ ನಿರ್ವಹಿಸಿ ಮರಣ ಹೊಂದಿದ ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಹೇಳಿತ್ತು. ಕೋವಿಡ್‌ ಕರ್ತವ್ಯ ವೇಳೆ ಜೀವ ಕಳೆದುಕೊಂಡ 368 ಮಂದಿ ಸಾರಿಗೆ ನೌಕರರಲ್ಲಿ 11 ಮಂದಿಗೆ ಮಾತ್ರ ಪರಿಹಾರ ಧನ ದೊರೆತಿದೆ ಎಂಬುದು ಬೆಳಕಿಗೆ ಬಂದಿದೆ.

ಎಷ್ಟು ಮಂದಿಗೆ ಪರಿಹಾರ ದೊರೆತಿದೆ ಎಂದು ಆರ್‌ಟಿಐ ಮೂಲಕ ಕೇಳಲಾಗಿತ್ತು. ಸರ್ಕಾರ ಬಹಿರಂಗಪಡಿಸಿರುವ ಮಾಹಿತಿಯು ಟೈಮ್ಸ್‌ ನೌ ನೆಟ್‌ವರ್ಕ್‌‌ಗೆ ಲಭ್ಯವಾಗಿದ್ದು, 11 ಮಂದಿಗೆ ಮಾತ್ರ ಈವರೆಗೆ ಪರಿಹಾರ ದೊರೆತಿದೆ ಎಂಬುದು ತಿಳಿದುಬಂದಿದೆ.

ಕೋವಿಡ್‌‌ ಎಲ್ಲೆಡೆ ಆತಂಕ ಸೃಷ್ಟಿಸಿ, ಜೀವಕ್ಕೆ ಅಪಾಯ ತಂದಿದ್ದ ಸಂದರ್ಭದಲ್ಲಿ ಜನರಿಗಾಗಿ ಸೇವೆ ಸಲ್ಲಿಸಿದ ಕೋವಿಡ್‌ ವಾರಿಯರ್‌ಗಳಲ್ಲಿ ಸಾರಿಗೆ ಸಿಬ್ಬಂದಿಗಳು ಸೇರಿದ್ದಾರೆ. ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಪ್ರಯಾಣ ಬೆಳೆಸಲು ಒದ್ದಾಡುತ್ತಿದ್ದ ಸಂದರ್ಭದಲ್ಲಿ, ಊರಿಗೆ ಮರಳಲು ಸಾಧ್ಯವಾಗದೆ ಕಾರ್ಮಿಕರು ಕಾಲ್ನಡಿಗೆ ಆರಂಭಿಸಿದ್ದಾಗ ಸಾರಿಗೆ ನೌಕರರ ಸೇವೆಯು ಮಹತ್ವದ್ದಾಗಿತ್ತು.

ಶಾಸಕರಿಗೆ ಬೇಕಾದದ್ದನ್ನು ಮಾಡಿಕೊಳ್ಳುವ ಸರ್ಕಾರ, ಸಾರ್ವಜನಿಕ ಸೇವೆಯಲ್ಲಿರುವವರ ಸಾವಿಗೆ ಪರಿಹಾರ ನೀಡುವುದನ್ನು ಮರೆತಿದೆ. ಕೋವಿಡ್‌ ವೇಳೆ ಸೇವೆ ಸಲ್ಲಿಸಿದ ಸಾರಿಗೆ ಸಿಬ್ಬಂದಿಗೆ ಸಾವನ್ನಪ್ಪಿದರೆ 30 ಲಕ್ಷ ರೂ. ನೀಡುವುದಾಗಿ ಸರ್ಕಾರ ತಿಳಿಸಿತ್ತು. ಆದರೆ ಎರಡು ವರ್ಷಗಳಾದರೂ ಪರಿಹಾರ ಧನ ಬಿಡುಗಡೆಯಾಗಿಲ್ಲ.

ಟೈಮ್ಸ್‌ನೌ ನೆಟ್‌ವರ್ಕ್‌ಗೆ ಲಭ್ಯವಾಗಿರುವ ಮಾಹಿತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ ಹೊರಬಂದಿದ್ದು, “ಇದು ನಿಜಕ್ಕೂ ದುರಂತ. ಸರ್ಕಾರ ಇದಕ್ಕೆ ನೇರ ಹೊಣೆ. ಇದು ಸರ್ಕಾರದಿಂದ ಆದ ಕೊಲೆಯಲ್ಲದೆ ಮತ್ತೇನೂ ಅಲ್ಲ. ಜಾಹೀರಾತು ಹಾಗೂ ಇತರೆ ಮುಖ್ಯವಲ್ಲದ ವಿಚಾರಗಳಿಗೆ ಸರ್ಕಾರ ಹಣ ವಿನಿಯೋಗಿಸುತ್ತಿದೆ. ಆದರೆ ಇಂತಹ ಸಂಗತಿಗಳಿಗೆ ಆದ್ಯತೆ ನೀಡಬೇಕಿದೆ” ಎಂದು ವೆಲ್‌ಫೇರ್‌ ಪಾರ್ಟಿ ಆಫ್‌ ಇಂಡಿಯಾದ ಆರ್‌‌ಟಿಐ ಕಾರ್ಯಕರ್ತ ತಾಹಿರ್‌ ಹುಸೇನ್‌ ಒತ್ತಾಯಿಸಿದ್ದಾರೆ.

 ಇದನ್ನೂ ಓದಿರಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ಕಾಂಗ್ರೆಸ್‌ ಮುಖಂಡ ಬ್ರಿಜೇಶ್‌ ಕಾಳಪ್ಪ ಪ್ರತಿಕ್ರಿಯಿಸಿ, “ಕೆಲವೇ ಕೆಲವರಿಗೆ ಮಾತ್ರ ಸರ್ಕಾರ ಪರಿಹಾರ ನೀಡಿದೆ ಎಂಬುದು ಆತಂಕಕಾರಿ ಸಂಗತಿ. ಇದು ಅಪರಾಧ ಕೃತ್ಯವೂ ಹೌದು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಶ್ರೀರಾಮುಲು ಪ್ರತಿಕ್ರಿಯೆ

ಟೈಮ್ಸ್‌ನೌಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, “ಸೇವೆಯಲ್ಲಿದ್ದಾಗ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಮನೆಯಲ್ಲಿದ್ದು ಸಾವನ್ನಪ್ಪಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಎಲ್ಲ ಎಂ.ಡಿ.ಗಳಿಗೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಶೀಘ್ರವಾಗಿ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ತಾಹೀರ್‌ ಹುಸೇನ್‌ ಅವರು ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳಿಗೂ ಆರ್‌ಟಿಐ ಅರ್ಜಿ ಸಲ್ಲಿಸಿ ಪಡೆದಿರುವ ಮಾಹಿತಿಯನ್ನು ‘ನಾನುಗೌರಿ.ಕಾಂ’ ಕಲೆ ಹಾಕಿದೆ.

ಕಲಬುರಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ನೀಡಿರುವ ಪ್ರತಿಕ್ರಿಯೆಯಲ್ಲಿ, “ಕೋವಿಡ್‌ನಿಂದ ಸಾವನ್ನಪ್ಪಿದ 24 ಸಿಬ್ಬಂದಿಯ ದಾಖಲೆಗಳು ಸಲ್ಲಿಕೆಯಾಗಿವೆ. ಪರಿಹಾರದ ಮೊತ್ತದ ಕ್ರಮ ಪರಿಶೀಲನೆಯಲ್ಲಿದೆ” ಎಂದು ತಿಳಿಸಲಾಗಿದೆ.

***

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ಬಂದಿರುವ ಉತ್ತರದಲ್ಲಿ, “ಮೊದಲನೇ ಅಲೆಯಲ್ಲಿ 39 ಮಂದಿ, ಎರಡನೇ ಅಲೆಯಲ್ಲಿ 57 ಮಂದಿ ಸಿಬ್ಬಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಅವರಲ್ಲಿ 7 ಮಂದಿಯ ಕುಟುಂಬಗಳಿಗೆ ಮಾತ್ರ ಪರಿಹಾರ ವಿತರಿಸಲಾಗಿದೆ” ಎಂದು ತಿಳಿಸಲಾಗಿದೆ.

***

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯು ನೀಡಿರುವ ಮಾಹಿತಿಯಲ್ಲಿ, “ಮಾರ್ಚ್ 2020ರಿಂದ ಮಾರ್ಚ್ 2021ರವರೆಗೆ ಒಟ್ಟು 32 ಸಿಬ್ಬಂದಿ, ಏಪ್ರಿಲ್‌ 2021ರಿಂದ ಜೂನ್‌ 21ರವರೆಗಿನ ಅವಧಿಯಲ್ಲಿ ಒಟ್ಟು 48 ಸಿಬ್ಬಂದಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಸದರಿ ಪ್ರಕರಣಗಳಲ್ಲಿ ನೌಕರರ ಅವಲಂಬಿತರಿಗೆ ಯಾವುದೇ ಪರಿಹಾರ ದೊರೆತ್ತಿಲ್ಲ” ಎಂದು ತಿಳಿಸಲಾಗಿದೆ.

***

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೀಡಿರುವ ಮಾಹಿತಿಯಲ್ಲಿ, “ಮಾರ್ಚ್‌ 2020ರಿಂದ ಜುಲೈ 2021ರ ಅವಧಿಯಲ್ಲಿ ಬಿಎಂಟಿಸಿಯ 108 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಅದರಲ್ಲಿ ನಾಲ್ಕು ಜನರ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ” ಎಂದು ತಿಳಿಸಲಾಗಿದೆ.


ಇದನ್ನೂ ಓದಿರಿ: ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...