Homeಕರ್ನಾಟಕಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

ಕೋವಿಡ್‌ನಿಂದ ಸಾವನ್ನಪ್ಪಿದ 368 ‍ಸಾರಿಗೆ ಸಿಬ್ಬಂದಿಯಲ್ಲಿ ಪರಿಹಾರ ನೀಡಿದ್ದು 11 ಮಂದಿಗೆ ಮಾತ್ರ

- Advertisement -
- Advertisement -

ಕೋವಿಡ್‌ ವೇಳೆ ಕರ್ತವ್ಯ ನಿರ್ವಹಿಸಿ ಮರಣ ಹೊಂದಿದ ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಹೇಳಿತ್ತು. ಕೋವಿಡ್‌ ಕರ್ತವ್ಯ ವೇಳೆ ಜೀವ ಕಳೆದುಕೊಂಡ 368 ಮಂದಿ ಸಾರಿಗೆ ನೌಕರರಲ್ಲಿ 11 ಮಂದಿಗೆ ಮಾತ್ರ ಪರಿಹಾರ ಧನ ದೊರೆತಿದೆ ಎಂಬುದು ಬೆಳಕಿಗೆ ಬಂದಿದೆ.

ಎಷ್ಟು ಮಂದಿಗೆ ಪರಿಹಾರ ದೊರೆತಿದೆ ಎಂದು ಆರ್‌ಟಿಐ ಮೂಲಕ ಕೇಳಲಾಗಿತ್ತು. ಸರ್ಕಾರ ಬಹಿರಂಗಪಡಿಸಿರುವ ಮಾಹಿತಿಯು ಟೈಮ್ಸ್‌ ನೌ ನೆಟ್‌ವರ್ಕ್‌‌ಗೆ ಲಭ್ಯವಾಗಿದ್ದು, 11 ಮಂದಿಗೆ ಮಾತ್ರ ಈವರೆಗೆ ಪರಿಹಾರ ದೊರೆತಿದೆ ಎಂಬುದು ತಿಳಿದುಬಂದಿದೆ.

ಕೋವಿಡ್‌‌ ಎಲ್ಲೆಡೆ ಆತಂಕ ಸೃಷ್ಟಿಸಿ, ಜೀವಕ್ಕೆ ಅಪಾಯ ತಂದಿದ್ದ ಸಂದರ್ಭದಲ್ಲಿ ಜನರಿಗಾಗಿ ಸೇವೆ ಸಲ್ಲಿಸಿದ ಕೋವಿಡ್‌ ವಾರಿಯರ್‌ಗಳಲ್ಲಿ ಸಾರಿಗೆ ಸಿಬ್ಬಂದಿಗಳು ಸೇರಿದ್ದಾರೆ. ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಪ್ರಯಾಣ ಬೆಳೆಸಲು ಒದ್ದಾಡುತ್ತಿದ್ದ ಸಂದರ್ಭದಲ್ಲಿ, ಊರಿಗೆ ಮರಳಲು ಸಾಧ್ಯವಾಗದೆ ಕಾರ್ಮಿಕರು ಕಾಲ್ನಡಿಗೆ ಆರಂಭಿಸಿದ್ದಾಗ ಸಾರಿಗೆ ನೌಕರರ ಸೇವೆಯು ಮಹತ್ವದ್ದಾಗಿತ್ತು.

ಶಾಸಕರಿಗೆ ಬೇಕಾದದ್ದನ್ನು ಮಾಡಿಕೊಳ್ಳುವ ಸರ್ಕಾರ, ಸಾರ್ವಜನಿಕ ಸೇವೆಯಲ್ಲಿರುವವರ ಸಾವಿಗೆ ಪರಿಹಾರ ನೀಡುವುದನ್ನು ಮರೆತಿದೆ. ಕೋವಿಡ್‌ ವೇಳೆ ಸೇವೆ ಸಲ್ಲಿಸಿದ ಸಾರಿಗೆ ಸಿಬ್ಬಂದಿಗೆ ಸಾವನ್ನಪ್ಪಿದರೆ 30 ಲಕ್ಷ ರೂ. ನೀಡುವುದಾಗಿ ಸರ್ಕಾರ ತಿಳಿಸಿತ್ತು. ಆದರೆ ಎರಡು ವರ್ಷಗಳಾದರೂ ಪರಿಹಾರ ಧನ ಬಿಡುಗಡೆಯಾಗಿಲ್ಲ.

ಟೈಮ್ಸ್‌ನೌ ನೆಟ್‌ವರ್ಕ್‌ಗೆ ಲಭ್ಯವಾಗಿರುವ ಮಾಹಿತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ ಹೊರಬಂದಿದ್ದು, “ಇದು ನಿಜಕ್ಕೂ ದುರಂತ. ಸರ್ಕಾರ ಇದಕ್ಕೆ ನೇರ ಹೊಣೆ. ಇದು ಸರ್ಕಾರದಿಂದ ಆದ ಕೊಲೆಯಲ್ಲದೆ ಮತ್ತೇನೂ ಅಲ್ಲ. ಜಾಹೀರಾತು ಹಾಗೂ ಇತರೆ ಮುಖ್ಯವಲ್ಲದ ವಿಚಾರಗಳಿಗೆ ಸರ್ಕಾರ ಹಣ ವಿನಿಯೋಗಿಸುತ್ತಿದೆ. ಆದರೆ ಇಂತಹ ಸಂಗತಿಗಳಿಗೆ ಆದ್ಯತೆ ನೀಡಬೇಕಿದೆ” ಎಂದು ವೆಲ್‌ಫೇರ್‌ ಪಾರ್ಟಿ ಆಫ್‌ ಇಂಡಿಯಾದ ಆರ್‌‌ಟಿಐ ಕಾರ್ಯಕರ್ತ ತಾಹಿರ್‌ ಹುಸೇನ್‌ ಒತ್ತಾಯಿಸಿದ್ದಾರೆ.

 ಇದನ್ನೂ ಓದಿರಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ಕಾಂಗ್ರೆಸ್‌ ಮುಖಂಡ ಬ್ರಿಜೇಶ್‌ ಕಾಳಪ್ಪ ಪ್ರತಿಕ್ರಿಯಿಸಿ, “ಕೆಲವೇ ಕೆಲವರಿಗೆ ಮಾತ್ರ ಸರ್ಕಾರ ಪರಿಹಾರ ನೀಡಿದೆ ಎಂಬುದು ಆತಂಕಕಾರಿ ಸಂಗತಿ. ಇದು ಅಪರಾಧ ಕೃತ್ಯವೂ ಹೌದು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಶ್ರೀರಾಮುಲು ಪ್ರತಿಕ್ರಿಯೆ

ಟೈಮ್ಸ್‌ನೌಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, “ಸೇವೆಯಲ್ಲಿದ್ದಾಗ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಮನೆಯಲ್ಲಿದ್ದು ಸಾವನ್ನಪ್ಪಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಎಲ್ಲ ಎಂ.ಡಿ.ಗಳಿಗೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಶೀಘ್ರವಾಗಿ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ತಾಹೀರ್‌ ಹುಸೇನ್‌ ಅವರು ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳಿಗೂ ಆರ್‌ಟಿಐ ಅರ್ಜಿ ಸಲ್ಲಿಸಿ ಪಡೆದಿರುವ ಮಾಹಿತಿಯನ್ನು ‘ನಾನುಗೌರಿ.ಕಾಂ’ ಕಲೆ ಹಾಕಿದೆ.

ಕಲಬುರಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ನೀಡಿರುವ ಪ್ರತಿಕ್ರಿಯೆಯಲ್ಲಿ, “ಕೋವಿಡ್‌ನಿಂದ ಸಾವನ್ನಪ್ಪಿದ 24 ಸಿಬ್ಬಂದಿಯ ದಾಖಲೆಗಳು ಸಲ್ಲಿಕೆಯಾಗಿವೆ. ಪರಿಹಾರದ ಮೊತ್ತದ ಕ್ರಮ ಪರಿಶೀಲನೆಯಲ್ಲಿದೆ” ಎಂದು ತಿಳಿಸಲಾಗಿದೆ.

***

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು ಕೇಂದ್ರ ಕಚೇರಿಗೆ ಸಲ್ಲಿಸಿರುವ ಅರ್ಜಿಗೆ ಬಂದಿರುವ ಉತ್ತರದಲ್ಲಿ, “ಮೊದಲನೇ ಅಲೆಯಲ್ಲಿ 39 ಮಂದಿ, ಎರಡನೇ ಅಲೆಯಲ್ಲಿ 57 ಮಂದಿ ಸಿಬ್ಬಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಅವರಲ್ಲಿ 7 ಮಂದಿಯ ಕುಟುಂಬಗಳಿಗೆ ಮಾತ್ರ ಪರಿಹಾರ ವಿತರಿಸಲಾಗಿದೆ” ಎಂದು ತಿಳಿಸಲಾಗಿದೆ.

***

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯು ನೀಡಿರುವ ಮಾಹಿತಿಯಲ್ಲಿ, “ಮಾರ್ಚ್ 2020ರಿಂದ ಮಾರ್ಚ್ 2021ರವರೆಗೆ ಒಟ್ಟು 32 ಸಿಬ್ಬಂದಿ, ಏಪ್ರಿಲ್‌ 2021ರಿಂದ ಜೂನ್‌ 21ರವರೆಗಿನ ಅವಧಿಯಲ್ಲಿ ಒಟ್ಟು 48 ಸಿಬ್ಬಂದಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಸದರಿ ಪ್ರಕರಣಗಳಲ್ಲಿ ನೌಕರರ ಅವಲಂಬಿತರಿಗೆ ಯಾವುದೇ ಪರಿಹಾರ ದೊರೆತ್ತಿಲ್ಲ” ಎಂದು ತಿಳಿಸಲಾಗಿದೆ.

***

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೀಡಿರುವ ಮಾಹಿತಿಯಲ್ಲಿ, “ಮಾರ್ಚ್‌ 2020ರಿಂದ ಜುಲೈ 2021ರ ಅವಧಿಯಲ್ಲಿ ಬಿಎಂಟಿಸಿಯ 108 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಅದರಲ್ಲಿ ನಾಲ್ಕು ಜನರ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ” ಎಂದು ತಿಳಿಸಲಾಗಿದೆ.


ಇದನ್ನೂ ಓದಿರಿ: ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...