ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಐಎನ್ಎಕ್ಸ್ ಮೀಡಿಯಾ ಹಗರಣದ ಕುಣಿಕೆ ಬಿಗಿಯಾಗುತ್ತಲೇ ಇದೆ. ಚಿದಂಬರಂ ಅವರನ್ನು ನವೆಂಬರ್ 14ರವರೆಗೆ ತಿಹಾರ್ ಜೈಲಿಗೆ ಕಳುಹಿಸುವಂತೆ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಅಕ್ಟೋಬರ್ ಆರಂಭದಲ್ಲಿ ಪಿ.ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದಾಗ ಅವರನ್ನು ಜೈಲಿನಿಂದ ಸ್ಥಳಾಂತರಿಸಲಾಗಿತ್ತು. ತಿಹಾರ್ ಜೈಲಿನಲ್ಲಿ ಪ್ರತ್ಯೇಕ ಕೊಠಡಿ, ಶೌಚಾಲಯ, ಮನೆಯಲ್ಲಿ ತಯಾರಿಸಿದ ಆಹಾರ, ಔಷಧಿ ನೀಡಲಾಗುತ್ತದೆ ಎಂದು ಕೋರ್ಟ್ ಹೇಳಿದೆ.
ಅಕ್ಟೋಬರ್ 30ರವರೆಗೂ ಕೋರ್ಟ್ ಪಿ.ಚಿದಂಬರಂ ಅವರನ್ನು ಇಡಿ ವಶಕ್ಕೆ ನೀಡುವಂತೆ ಹೇಳಿತ್ತು. ಇಂದು ವಿಚಾರಣೆ ವೇಳೆ ಇಡಿ ಅಧಿಕಾರಿಗಳು ಇನ್ನೂ ಒಂದು ದಿನ ಕಸ್ಟಡಿಗೆ ನೀಡುವಂತೆ ಕೇಳಿದ್ರು. ಆದರೆ ಇದಕ್ಕೆ ಸಮ್ಮತಿ ಸೂಚಿಸದ ನ್ಯಾಯಾಧೀಶರು, ನ್ಯಾಯಾಂಗ ಬಂಧನಕ್ಕೊಳಪಡಿಸುವಂತೆ ತಿಳಿಸಿದರು.
ಇತ್ತ ಕಾಂಗ್ರೆಸ್ ನಾಯಕರು, ಪಿ.ಚಿದಂಬರಂ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು. ಅವರ ಆರೋಗ್ಯ ಸರಿಯಾಗಿಲ್ಲ. ಅನಾರೋಗ್ಯ ಹಿನ್ನೆಲೆ ಏಮ್ಸ್ ಗೆ ದಾಖಲಿಸುವ ಅಗತ್ಯವಿದೆ. ವೈದ್ಯರನ್ನು ಸಂಪರ್ಕಿಸಲು ಹೈಕೋರ್ಟ್ ಅನುಮತಿ ಕೋರಿದರು.
ಇನ್ನು ಐಎನ್ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಅಂಶಗಳನ್ನು ಪರಿಶೀಲಿಸುತ್ತಿದೆ. ಸಿಬಿಐ ಪ್ರಕರಣದಲ್ಲಿ ಈಗಾಗಲೇ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.