Homeಮುಖಪುಟಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ಸುಳ್ಳು ಹೇಳಲು 50 ಲಕ್ಷ ಆಮಿಷ- ಯುಪಿ ಪೊಲೀಸರು

ಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ಸುಳ್ಳು ಹೇಳಲು 50 ಲಕ್ಷ ಆಮಿಷ- ಯುಪಿ ಪೊಲೀಸರು

ಉತ್ತರ ಪ್ರದೇಶ ಪೊಲೀಸರು ಜಾತಿ ಹಿಂಸಾಚಾರ, ದೇಶದ್ರೋಹ, ಅಂತರಾಷ್ಟ್ರೀಯ ಪಿತೂರಿ, ಧಾರ್ಮಿಕ ದ್ವೇಷ ಹರಡುವುದು ಸೇರಿದಂತೆ ವಿವಿಧ ಆರೋಪಗಳಡಿ ರಾಜ್ಯಾದ್ಯಂತ ಕನಿಷ್ಠ 19 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

- Advertisement -
- Advertisement -

ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ಕೆಲವು ಅಪರಿಚಿತ ಗುಂಪುಗಳು ರಾಜ್ಯ ಸರ್ಕಾರದ ವಿರುದ್ಧ ಮಾತನಾಡಲು 50 ಲಕ್ಷ ರೂ ಆಮಿಷವೊಡ್ಡಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ. ಈ ಕುರಿತು 19ನೇ ಎಫ್‌ಐಆರ್‌ ದಾಖಲಿಸಿದ್ದಾರೆ.

ಪ್ರಕರಣವನ್ನು ಮುಂದಿಟ್ಟುಕೊಂಡು ಹಲವಾರು ಗುಂಪುಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಹಿಂಸಾಚಾರವನ್ನು ಪ್ರಚೋದಿಸಲು ಮತ್ತು ಜಾತಿ ದ್ವೇಷವನ್ನು ಹರಡಲು ಪ್ರಯತ್ನಿಸಿದವು ಎಂದು ಉತ್ತರ ಪ್ರದೇಶ ಪೊಲೀಸರು ಜಾತಿ ಹಿಂಸಾಚಾರ, ದೇಶದ್ರೋಹ, ಅಂತರಾಷ್ಟ್ರೀಯ ಪಿತೂರಿ, ಧಾರ್ಮಿಕ ದ್ವೇಷ ಹರಡುವುದು ಸೇರಿದಂತೆ ವಿವಿಧ ಆರೋಪಗಳಡಿ ರಾಜ್ಯಾದ್ಯಂತ ಕನಿಷ್ಠ 19 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

19 ಪ್ರಕರಣಗಳಲ್ಲಿ ಆರು ಪ್ರಕರಣಗಳನ್ನು ಹತ್ರಾಸ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಲಾಗಿದ್ದು, ಉಳಿದ ಎಫ್‌ಐಆರ್‌ಗಳನ್ನು ವಾತಾವರಣವನ್ನು ಹದಗೆಡಿಸಿದ್ದಕ್ಕಾಗಿ ಬಿಜ್ನೋರ್, ಸಹರಾನ್‌ಪುರ, ಬುಲಂದ್‌ಶಹರ್, ಅಲಹಾಬಾದ್, ಅಯೋಧ್ಯೆ ಮತ್ತು ಲಖನೌದಲ್ಲಿ ದಾಖಲಿಸಲಾಗಿದೆ.

ಇದನ್ನೂ ಓದಿ: ’ಹತ್ರಾಸ್‌‌ನಲ್ಲಿ ಪಿತೂರಿ ಮಾಡಲಾಗುತ್ತಿದೆ’ – 19 ಆರೋಪಗಳ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌‌

ಹತ್ರಾಸ್‌ನಲ್ಲಿ ದಾಖಲಾದ ಆರು ಪ್ರಕರಣಗಳಲ್ಲಿ ಒಂದು ಎಫ್‌ಐಆರ್‌ನಲ್ಲಿ ಸರ್ಕಾರದ ವಿರುದ್ಧ ಸುಳ್ಳುಗಳನ್ನು ಹೇಳಲು ಸಂತ್ರಸ್ತ ಯುವತಿಯ ಕುಟುಂಬಕ್ಕೆ 50 ಲಕ್ಷ ರೂಪಾಯಿ ಆಮಿಷವೊಡ್ಡಲಾಗಿದೆ ಎಂದಿದ್ದು, ಅಪರಿಚಿತರು ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ.

ಲಖನೌದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್, “ವಿವಿಧ ಗುಂಪುಗಳು ಹಿಂಸಾಚಾರವನ್ನು ಪ್ರಚೋದಿಸಲು ಪ್ರಯತ್ನಿಸಿದರು, ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಿ ಮತ್ತು ಕಾನೂನುಬಾಹಿರ ಸಭೆಗಳನ್ನು ಸಹ ಆಯೋಜಿಸಿದರು” ಎಂದರು.

ಯಾವುದೇ ನಿರ್ದಿಷ್ಟ ಸಂಘಟನೆಯ ಹೆಸರನ್ನು ಉಲ್ಲೇಖಿಸದೆ, ’ಸಂತ್ರಸ್ತ ಯುವತಿ ಕುಟುಂಬಕ್ಕೆ ತಮ್ಮ ಪರವಾಗಿ ಮಾತನಾಡಲು, ರಾಜ್ಯ ಸರ್ಕಾರದ ವಿರುದ್ಧ ಸುಳ್ಳುಗಳನ್ನು ಹೇಳಲು ಕುಟುಂಬವನ್ನು ಪ್ರಚೋದಿಸುವುದು, ತಪ್ಪು ಹೇಳಿಕೆಗಳನ್ನು ನೀಡುವಂತೆ ಒತ್ತಡ ಹೇರುವುದು ಮತ್ತು  50 ಲಕ್ಷ ರೂಪಾಯಿ ನೀಡುವ ಪ್ರಸ್ತಾಪದೊಂದಿಗೆ ಕೋಮು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸಿದ್ದಕ್ಕಾಗಿ ನಾವು ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ

ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರವು “ನ್ಯಾಯಯುತ ತನಿಖೆಯನ್ನು ಹಳಿ ತಪ್ಪಿಸುವ ಉದ್ದೇಶವನ್ನು ಪಟ್ಟಭದ್ರ ಹಿತಾಸಕ್ತಿಗಳು ಹೊಂದಿವೆ”. ಈ ವಿಷಯಕ್ಕೆ ಜಾತಿ ಮತ್ತು ಕೋಮು ಬಣ್ಣ ನೀಡಲಾಗುತ್ತಿದೆ ಎಂದು ಆರೋಪಿಸಿದೆ.

ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ಯುವತಿ ಸಾವನ್ನಪ್ಪಿದರು, ಸ್ಥಳೀಯ ಪೊಲೀಸರು ಮರುದಿನ ಮುಂಜಾನೆ 2.30ಕ್ಕೆ ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಶವಸಂಸ್ಕಾರ ಬಲವಂತವಾಗಿ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿದೆ.

ತೀವ್ರ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ಈ ಪ್ರಕರಣದಿಂದ ಜಿಲ್ಲಾಡಳಿತ ಹತ್ರಾಸ್‌ಗೆ ಪ್ರತಿಪಕ್ಷಗಳ ನಾಯಕರು, ಮಾಧ್ಯಮಗಳು ಯಾರಿಗೂ ಪ್ರವೇಶ ನೀಡದಂತೆ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ರಾಜಕೀಯ ಮುಖಂಡರುಗಳ ಮೇಲೆ ಅಲ್ಲಿನ ಪೊಲೀಸರು ದಾಳಿ ನಡೆಸಿದ್ದರು. ಈಗ ಘಟನೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿರುವವರ ಮೇಲೆಯೇ ಎಫ್‌ಐಆರ್‌ ದಾಖಲಿಸಲಾಗುತ್ತಿದೆ. ಸಂತ್ರಸ್ತ ಯುವತಿಯ ಕುಟುಂಬದವರ ಮೇಲೂ ಎಫ್‌ಐಆರ್‌ ದಾಖಲಿಸಬೇಕು ಎಂದು ಮೇಲ್ಜಾತಿ ಸಮುದಾಯದವರು ಸಭೆ ಮಾಡಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...