Homeಮುಖಪುಟಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ಸುಳ್ಳು ಹೇಳಲು 50 ಲಕ್ಷ ಆಮಿಷ- ಯುಪಿ ಪೊಲೀಸರು

ಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ಸುಳ್ಳು ಹೇಳಲು 50 ಲಕ್ಷ ಆಮಿಷ- ಯುಪಿ ಪೊಲೀಸರು

ಉತ್ತರ ಪ್ರದೇಶ ಪೊಲೀಸರು ಜಾತಿ ಹಿಂಸಾಚಾರ, ದೇಶದ್ರೋಹ, ಅಂತರಾಷ್ಟ್ರೀಯ ಪಿತೂರಿ, ಧಾರ್ಮಿಕ ದ್ವೇಷ ಹರಡುವುದು ಸೇರಿದಂತೆ ವಿವಿಧ ಆರೋಪಗಳಡಿ ರಾಜ್ಯಾದ್ಯಂತ ಕನಿಷ್ಠ 19 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

- Advertisement -
- Advertisement -

ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ಕೆಲವು ಅಪರಿಚಿತ ಗುಂಪುಗಳು ರಾಜ್ಯ ಸರ್ಕಾರದ ವಿರುದ್ಧ ಮಾತನಾಡಲು 50 ಲಕ್ಷ ರೂ ಆಮಿಷವೊಡ್ಡಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ. ಈ ಕುರಿತು 19ನೇ ಎಫ್‌ಐಆರ್‌ ದಾಖಲಿಸಿದ್ದಾರೆ.

ಪ್ರಕರಣವನ್ನು ಮುಂದಿಟ್ಟುಕೊಂಡು ಹಲವಾರು ಗುಂಪುಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಹಿಂಸಾಚಾರವನ್ನು ಪ್ರಚೋದಿಸಲು ಮತ್ತು ಜಾತಿ ದ್ವೇಷವನ್ನು ಹರಡಲು ಪ್ರಯತ್ನಿಸಿದವು ಎಂದು ಉತ್ತರ ಪ್ರದೇಶ ಪೊಲೀಸರು ಜಾತಿ ಹಿಂಸಾಚಾರ, ದೇಶದ್ರೋಹ, ಅಂತರಾಷ್ಟ್ರೀಯ ಪಿತೂರಿ, ಧಾರ್ಮಿಕ ದ್ವೇಷ ಹರಡುವುದು ಸೇರಿದಂತೆ ವಿವಿಧ ಆರೋಪಗಳಡಿ ರಾಜ್ಯಾದ್ಯಂತ ಕನಿಷ್ಠ 19 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

19 ಪ್ರಕರಣಗಳಲ್ಲಿ ಆರು ಪ್ರಕರಣಗಳನ್ನು ಹತ್ರಾಸ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಲಾಗಿದ್ದು, ಉಳಿದ ಎಫ್‌ಐಆರ್‌ಗಳನ್ನು ವಾತಾವರಣವನ್ನು ಹದಗೆಡಿಸಿದ್ದಕ್ಕಾಗಿ ಬಿಜ್ನೋರ್, ಸಹರಾನ್‌ಪುರ, ಬುಲಂದ್‌ಶಹರ್, ಅಲಹಾಬಾದ್, ಅಯೋಧ್ಯೆ ಮತ್ತು ಲಖನೌದಲ್ಲಿ ದಾಖಲಿಸಲಾಗಿದೆ.

ಇದನ್ನೂ ಓದಿ: ’ಹತ್ರಾಸ್‌‌ನಲ್ಲಿ ಪಿತೂರಿ ಮಾಡಲಾಗುತ್ತಿದೆ’ – 19 ಆರೋಪಗಳ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌‌

ಹತ್ರಾಸ್‌ನಲ್ಲಿ ದಾಖಲಾದ ಆರು ಪ್ರಕರಣಗಳಲ್ಲಿ ಒಂದು ಎಫ್‌ಐಆರ್‌ನಲ್ಲಿ ಸರ್ಕಾರದ ವಿರುದ್ಧ ಸುಳ್ಳುಗಳನ್ನು ಹೇಳಲು ಸಂತ್ರಸ್ತ ಯುವತಿಯ ಕುಟುಂಬಕ್ಕೆ 50 ಲಕ್ಷ ರೂಪಾಯಿ ಆಮಿಷವೊಡ್ಡಲಾಗಿದೆ ಎಂದಿದ್ದು, ಅಪರಿಚಿತರು ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ.

ಲಖನೌದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್, “ವಿವಿಧ ಗುಂಪುಗಳು ಹಿಂಸಾಚಾರವನ್ನು ಪ್ರಚೋದಿಸಲು ಪ್ರಯತ್ನಿಸಿದರು, ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಿ ಮತ್ತು ಕಾನೂನುಬಾಹಿರ ಸಭೆಗಳನ್ನು ಸಹ ಆಯೋಜಿಸಿದರು” ಎಂದರು.

ಯಾವುದೇ ನಿರ್ದಿಷ್ಟ ಸಂಘಟನೆಯ ಹೆಸರನ್ನು ಉಲ್ಲೇಖಿಸದೆ, ’ಸಂತ್ರಸ್ತ ಯುವತಿ ಕುಟುಂಬಕ್ಕೆ ತಮ್ಮ ಪರವಾಗಿ ಮಾತನಾಡಲು, ರಾಜ್ಯ ಸರ್ಕಾರದ ವಿರುದ್ಧ ಸುಳ್ಳುಗಳನ್ನು ಹೇಳಲು ಕುಟುಂಬವನ್ನು ಪ್ರಚೋದಿಸುವುದು, ತಪ್ಪು ಹೇಳಿಕೆಗಳನ್ನು ನೀಡುವಂತೆ ಒತ್ತಡ ಹೇರುವುದು ಮತ್ತು  50 ಲಕ್ಷ ರೂಪಾಯಿ ನೀಡುವ ಪ್ರಸ್ತಾಪದೊಂದಿಗೆ ಕೋಮು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸಿದ್ದಕ್ಕಾಗಿ ನಾವು ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ

ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರವು “ನ್ಯಾಯಯುತ ತನಿಖೆಯನ್ನು ಹಳಿ ತಪ್ಪಿಸುವ ಉದ್ದೇಶವನ್ನು ಪಟ್ಟಭದ್ರ ಹಿತಾಸಕ್ತಿಗಳು ಹೊಂದಿವೆ”. ಈ ವಿಷಯಕ್ಕೆ ಜಾತಿ ಮತ್ತು ಕೋಮು ಬಣ್ಣ ನೀಡಲಾಗುತ್ತಿದೆ ಎಂದು ಆರೋಪಿಸಿದೆ.

ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ಯುವತಿ ಸಾವನ್ನಪ್ಪಿದರು, ಸ್ಥಳೀಯ ಪೊಲೀಸರು ಮರುದಿನ ಮುಂಜಾನೆ 2.30ಕ್ಕೆ ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಶವಸಂಸ್ಕಾರ ಬಲವಂತವಾಗಿ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿದೆ.

ತೀವ್ರ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ಈ ಪ್ರಕರಣದಿಂದ ಜಿಲ್ಲಾಡಳಿತ ಹತ್ರಾಸ್‌ಗೆ ಪ್ರತಿಪಕ್ಷಗಳ ನಾಯಕರು, ಮಾಧ್ಯಮಗಳು ಯಾರಿಗೂ ಪ್ರವೇಶ ನೀಡದಂತೆ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ರಾಜಕೀಯ ಮುಖಂಡರುಗಳ ಮೇಲೆ ಅಲ್ಲಿನ ಪೊಲೀಸರು ದಾಳಿ ನಡೆಸಿದ್ದರು. ಈಗ ಘಟನೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿರುವವರ ಮೇಲೆಯೇ ಎಫ್‌ಐಆರ್‌ ದಾಖಲಿಸಲಾಗುತ್ತಿದೆ. ಸಂತ್ರಸ್ತ ಯುವತಿಯ ಕುಟುಂಬದವರ ಮೇಲೂ ಎಫ್‌ಐಆರ್‌ ದಾಖಲಿಸಬೇಕು ಎಂದು ಮೇಲ್ಜಾತಿ ಸಮುದಾಯದವರು ಸಭೆ ಮಾಡಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...